ಪುಟಗಳು

ನಲ್ನುಡಿ ಕಥಾಸ್ಪರ್ಧೆ-2010


ಕರ್ನಾಟಕ ರಕ್ಷಣಾ ವೇದಿಕೆಯ ಮುಖವಾಣಿ ‘ಕರವೇ ನಲ್ನುಡಿ ಮಾಸಪತ್ರಿಕೆ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷಾಂಕವನ್ನು ಹೊರತರುತ್ತಿದ್ದು, ಕಥಾ ಸ್ಪರ್ಧೆಯನ್ನು ಏರ್ಪಡಿಸಿದ್ದು, ಕಥೆಗಾರರಿಂದ ಕಥೆಗಳನ್ನು ಆಹ್ವಾನಿಸಿದೆ. ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಕಥೆಗಳನ್ನು ಕಳುಹಿಸಲು ಕಡೆಯ ದಿನಾಂಕ ಅಕ್ಟೋಬರ್ 20.ಪ್ರಥಮ ಬಹುಮಾನ 25,೦೦೦ ರೂ., ದ್ವಿತೀಯ ಬಹುಮಾನ15,೦೦೦ ರೂ., ತೃತೀಯ ಬಹುಮಾನ 1೦,೦೦೦ ರೂ. ಕನ್ನಡದ ಶ್ರೇಷ್ಠ ವಿಮರ್ಶಕರ ತಂಡವೊಂದು ಕಥಾಸ್ಪರ್ಧೆಯ ತೀರ್ಪು ನೀಡಲಿದ್ದು, ತೀರ್ಪುಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ. ಮೆಚ್ಚುಗೆ ಪಡೆದ ಕಥೆಗಳನ್ನು ‘ನಲ್ನುಡಿ ಮಾಸಿಕದಲ್ಲಿ ಪ್ರಕಟಿಸಲಾಗುವುದು.
ಹಾಳೆಯ ಒಂದೇ ಮಗ್ಗುಲಲ್ಲಿ ಸ್ಫುಟವಾಗಿ ಬರೆದ ಕಥೆಗಳನ್ನು ಸಂಪಾದಕರು, ನಲ್ನುಡಿ ಕಥಾಸ್ಪರ್ಧೆ-೨೦೧೦, ಕರವೇ ನಲ್ನುಡಿ ಮಾಸಪತ್ರಿಕೆ, ಕನಸು ಕ್ರಿಯೇಷನ್ಸ್, ನಂ.೬/೨, ಶಿವಾನಂದ ವೃತ್ತ, ಕುಮಾರಕೃಪ ರಸ್ತೆ, ಬೆಂಗಳೂರು-೧ ಈ ವಿಳಾಸಕ್ಕೆ ಕಳುಹಿಸ ಬೇಕು
ಹೆಚ್ಹಿನ ಮಾಹಿತಿಗಾಗಿ 080-2234 1762 ಗೆ ಸಂಪರ್ಕಿಸಬಹುದು