ಪುಟಗಳು

ಹಿಂದುತ್ವ ಮತ್ತು ದಲಿತರು

ಈ ಗ್ರಂಥದಲ್ಲಿ ಸೇರ್ಪಡೆಯಾಗಿರುವ ಲೇಖನಗಳು ಹಿಂದುತ್ವ ಶಕ್ತಿಗಳು ದಲಿತರನ್ನು ತಮ್ಮತ್ತ ಸೆಳೆದುಕೊಳ್ಳುತ್ತಿರುವ ಪ್ರಕ್ರಿಯೆಯ ಬಗ್ಗೆ ತಾತ್ವಿಕವೂ ಅನುಭವಜನ್ಯವೂ ಆದ ವಿಶ್ಲೇಷಣೆಗಳ ಮೂಲಕ ಸಾಕಷ್ಟು ಬೆಳಕು ಚೆಲ್ಲುತ್ತವೆ. ಕ್ರಿಯಾಶೀಲ ಚಳವಳಿಗಾರರು ಮತ್ತು ವಿದ್ವಾಂಸರುಗಳು ಬರೆದಿರುವ ಲೇಖನಗಳು ಈ ಗ್ರಂಥದಲ್ಲಿ ಸೇರ್ಪಡೆಯಾಗಿವೆ. ಈ ಲೇಖನಗಳಲ್ಲಿ ದಲಿತರ ಸಾಮಾಜಿಕ, ಸಾಂಸ್ಕೃತಿಕ, ಸೈದ್ಧಾಂತಿಕ ಮತ್ತು ರಾಜಕೀಯ ಜೀವನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಚರ್ಚಿಸಲಾಗಿದೆ. ಜೊತೆಗೆ ಅವರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅಗತ್ಯವಾದ ಮುನ್ನೋಟದ ಬಗ್ಗೆ ಬೆಳಕು ಹರಿಸುವ ಲೇಖನಗಳೂ ಇಲ್ಲಿವೆ. ಇತ್ತೀಚಿನ ವಿದ್ಯಮಾನಗಳು ಸೃಷ್ಟಿಸಿರುವ ಸಮಸ್ಯೆಗಳ ಕುರಿತ ಗಂಭೀರ ಸ್ವರೂಪದ ಸಂವಾದಕ್ಕೆ ಇಲ್ಲಿನ ಲೇಖನಗಳು ದಾರಿಮಾಡಿಕೊಡುತ್ತವೆ.
ಶೀರ್ಷಿಕೆ: ಹಿಂದುತ್ವ ಮತ್ತು ದಲಿತರು ಮೂಲ ಸಂಪಾದಕರು:ಆನಂದ್ ತೇಲ್ ತುಂಬ್ಡೆ ಅನು ಸಂಯೋಜನೆ: ಪ್ರೊ.ಗಂಗಾಧರ ಮೂರ್ತಿ ಪ್ರಕಾಶಕರು: ಚಿಂತನ ಪುಸ್ತಕ ಪುಟಗಳು:216 ಬೆಲೆ:ರೂ.120