ಪುಟಗಳು

ಉತ್ತರಾಯಣ ಪುಣ್ಯಕಾಲ ಮಕರ ಸಂಕ್ರಾಂತಿ

ಅನಾದಿ ಕಾಲದಿಂದ ನಡೆದು ಕೊಂಡು ಬರುತ್ತಿರುವ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವುದು ಮಕರ ಸಂಕ್ರಮಣ. ಮಕರ ಸಂಕ್ರಾಂತಿಯ ಆಚರಣೆಯು ಸೂರ್ಯನ ಚಲನೆಯನ್ನು ಆಧರಿಸಿದ್ದು ಮಕರ ರಾಶಿಗೆ ಪ್ರವೇಶಿಸುವ ಈ ಕಾಲವು ಉತ್ತರಾಯಣ ಪುಣ್ಯ ಕಾಲವೆಂದು ಕರೆಯಲ್ಪಡುತ್ತದೆ.

ಮಕರ ಸಂಕ್ರಾಂತಿಯ ವೇಳೆ ಶುಭಕಾರ್ಯಗಳನ್ನು ಕೈಗೊಳ್ಳುವುದು ಶ್ರೇಯಸ್ಕರ ಎಂಬ ನಂಬಿಕೆ ರೂಢಿಯಲ್ಲಿದೆ. ಉತ್ತರಾಯಣ ಪುಣ್ಯಕಾಲ ಎಂದು ಕರೆಯಲ್ಪಡುವ ಇದು ಸೂರ್ಯನು ಉತ್ತರ ದಿಕ್ಕಿಗೆ ಸಂಚರಿಸುತ್ತಾನೆ ಎಂಬ ಅರ್ಥವನ್ನು ಕೊಡುತ್ತದೆ. ಉತ್ತರ ಎಂಬ ಪದಕ್ಕೆ ಶ್ರೇಷ್ಠ ಎಂಬ ಅರ್ಥವಿದ್ದು, ಇದನ್ನು ಶ್ರೇಷ್ಠವಾದ ದಾರಿಯೆಂದೂ ಕೂಡಾ ಅರ್ಥೈಸ ಬಹುದು. ಇದರ ಬಗ್ಗೆ ಭಗವದ್ಗೀತೆಯ 8 ನೇ ಅಧ್ಯಾಯದ 24 ನೇ ಶ್ಲೋಕದಲ್ಲಿ ಈ ರೀತಿ ಉಲ್ಲೇಖವಿದೆ.

ಅಗ್ನಿರ್ಜ್ಯೋತಿರ್‌ ಅಹಃ ಶುಕ್ಲಃ ಷಣ್‌ಮಾಸ ಉತ್ತರಾಯಣಂ।
ತತ್ರ ಪ್ರಯಾತಾ ಗಚ್ಛಂತಿ ಬ್ರಹ್ಮ ಬ್ರಹ್ಮವಿದೋ ಜನಾಃ।।

ಅಂದರೆ ಈ ಕಾಲದಲ್ಲಿ ಎಲ್ಲಾ ಕಾರ್ಯಗಳು ಹೆಚ್ಚು ಶ್ರೇಯಸ್ಕರವಾಗಿ ನಡೆಯುವುದು ಮತ್ತು ಸ್ವರ್ಗದ ಬಾಗಿಲು ತೆರೆದಿರುವುದು. ಮುಕ್ತಿಯನ್ನು ಹೊಂದಲಿರುವ ಸೂತ್ರದ ಬಗ್ಗೆ ಈ ಶ್ಲೋಕದಲ್ಲಿ ವಿವರಿಸಲಾಗಿದೆ. ಅರ್ಥಾತ್ ಅಗ್ನಿ, ಜ್ಯೋತಿ, ಹಗಲು ,ಶುಕ್ಲ ಪಕ್ಷ, ಉತ್ತರಾಯಣದ ಆರು ತಿಂಗಳುಗಳಲ್ಲಿ ಬ್ರಹ್ಮವಿದರಾದ ಯೋಗಿಗಳ ಪ್ರಾಣಗಳು ಬ್ರಹ್ಮದಲ್ಲಿ ವಿಲೀನವಾಗುವುವು. ಇದು ಮುಕ್ತಿಯ ಕಡೆಗಿರುವ ಯಾತ್ರೆಯಾಗಿದೆ.

ಅದೇ ರೀತಿ ಧೂಮ, ರಾತ್ರಿ, ಕೃಷ್ಣ ಪಕ್ಷ ಮತ್ತು ದಕ್ಷಿಣಾಯನದ ಆರು ತಿಂಗಳು ಪ್ರಯಾಣ ಮಾಡಿದ ಯೋಗಿಗಳ ಪ್ರಾಣಗಳು ಚಂದ್ರಜ್ಯೋತಿಯನ್ನು ಸೇರಿ ಮತ್ತೆ ಸಂಸಾರಕ್ಕೆ ಮರಳುವುದು. ಆದರೆ ಉತ್ತರಾಯಣದಲ್ಲಿ ಮರಣಹೊಂದಿದ ಯಾರೂ ಮರಳಿ ಸಂಸಾರಕ್ಕೆ ಬರುವುದಿಲ್ಲ. ಅವರು ಮುಕ್ತಿಯನ್ನು ಹೊಂದುತ್ತಾರೆ ಎಂಬುದು ಇದರ ತಾತ್ಪರ್ಯವಾಗಿದೆ. ಈ ದಿನದಂದು ಕೈಗೊಳ್ಳುವ ಯಾವುದೇ ಕಾರ್ಯಗಳು ಅಂದರೆ ಸ್ನಾನ, ದಾನ, ಹೋಮ, ಪೂಜೆ ಮೊದಲಾದ ಶುಭ ಕಾರ್ಯಗಳಿಗೆ ವಿಶೇಷ ಫಲ ಲಭಿಸುವುದು ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.

ಉತ್ತರಾಯಣ ಪುಣ್ಯ ಕಾಲದ ಆರಂಭ

ಮಕರ ಸಂಕ್ರಾಂತಿಯು ಪ್ರಧಾನವಾಗಿ ಸೂರ್ಯನು ತನ್ನ ಪಥವನ್ನು ಬದಲಾಯಿಸುವುದನ್ನು ಸೂಚಿಸುವುದು ಮಾತ್ರವಲ್ಲದೆ ಉತ್ತರಾಯಣ ಪುಣ್ಯ ಕಾಲದ ಆರಂಭವೂ ಇದಾಗಿದೆ. ಮಕರ ಸಂಕ್ರಾಂತಿ ಅಥವಾ ಸಂಕ್ರಮಣದ ಅರ್ಥವು ಮಕರ ರಾಶಿಯನ್ನು ಹಾದು ಹೋಗುವುದು ಅಥವಾ ಮಕರ ರಾಶಿಗೆ ಬದಲಾಗುವುದು ಎಂಬುದಾಗಿದೆ. ಈ ಆಚರಣೆಯು ಸೂರ್ಯದೇವನ ಸಂಚಾರವನ್ನು ಗಣನೆಗೆ ತೆಗೆದುಕೊಂಡು ಆಚರಿಸಲಾಗುತ್ತಿದ್ದು ಸೂರ್ಯದೇವನು ತನ್ನ ಏಳು ಕುದುರೆಗಳಿಂದ ಎಳೆಯಲ್ಪಡುವ ಭವ್ಯ ರಥದಲ್ಲಿ ಮಕರ ರಾಶಿಗೆ ಪ್ರವೇಶಿಸುತ್ತಾನೆ ಎಂದು ಪುರಾತನ ಕಾಲದಿಂದಲೇ ಭಾರತೀಯರಲ್ಲಿ ನೆಲೆವೂರಿರುವ ವಿಶ್ವಾಸವಾಗಿದ್ದು, ಪ್ರಸ್ತುತ ರಥದ ಏಳು ಕುದುರೆಗಳು ಕಾಮನ ಬಿಲ್ಲಿನ ಏಳು ಬಣ್ಣಗಳನ್ನು ಪ್ರತಿನಿಧಿಸುತ್ತವೆ.

ಮಕರ ರಾಶಿಗೆ ಸೂರ್ಯನ ಪ್ರವೇಶವು ಇರುಳನ್ನು ಹೋಗಲಾಡಿಸುವುದು ಮಾತ್ರವಲ್ಲದೆ ಈ ಕಾಲದಲ್ಲಿ ಸಸ್ಯಗಳ ಬೆಳವಣಿಗೆಗೂ ಸಹಕರಿಸುತ್ತದೆ. ವೇದಶಾಸ್ತ್ರದ ಪ್ರಕಾರ ಇದು ಮನಸ್ಸಿನ ಕಾರಿರುಳನ್ನು ಹೋಗಲಾಡಿಸಿ ಸ್ವ ಪ್ರಜ್ಞೆಯ ದಾರಿಯಾದ ಮೋಕ್ಷವನ್ನು ಹೊಂದಲು ಸಹಕಾರಿಯಾಗುತ್ತದೆ. ಆದುದರಿಂದಲೇ ಇದನ್ನು ಪುಣ್ಯ ಕಾಲವೆಂದು ಕರೆಯಲ್ಪಡುತ್ತದೆ. ಈ ಕಾಲವು ಸ್ವರ್ಗದ ಬಾಗಿಲು ತೆರೆದಿರುವ ಕಾಲವೆಂದು ಚಾಲ್ತಿಯಲ್ಲಿದ್ದು, ಈ ಅವಧಿಯಲ್ಲಿ ಮರಣ ಹೊಂದುವವರು ಸ್ವರ್ಗವನ್ನು ಪಡೆಯುತ್ತಾರೆ ಎಂಬ ಐತಿಹ್ಯವಿದೆ. ಆದುದರಿಂದಲೇ ಮಹಾಭಾರತದ ಕಥೆಯಲ್ಲಿ ಭೀಷ್ಮ ಇಹಲೋಕ ತ್ಯಜಿಸಲು ಈ ಕಾಲದ ನಿರೀಕ್ಷೆಯಲ್ಲಿದ್ದದ್ದನ್ನು ನಾವು ಇಲ್ಲಿ ನೆನಪಿಸಿ ಕೊಳ್ಳಬಹುದು. ಈ ಕಾಲದಲ್ಲಿ ಇರುಳಿನ ಅವಧಿಯು ಕಡಿಮೆಯಿದ್ದು ಸೂರ್ಯನ ಬೆಳಕು ಸದಾ ಭೂಮಿ ಮೇಲಿರುತ್ತದೆ. ಮಾಗಿಯ ಚಳಿ ಕಡಿಮೆಯಾಗುವ ಈ ಸಮಯದಲ್ಲಿ ಸರಿಯಾಗಿ ಬೆಳೆ ಕೊಯ್ಲಿಗೆ ಬಂದಿರುತ್ತದೆ. ಅಂದರೆ ಸುಗ್ಗಿ ಕಾಲ. ಹಳ್ಳಿಗಳಲ್ಲಿ ಇದನ್ನೇ ಸುಗ್ಗಿ ಹಬ್ಬವೆಂದು ಆಚರಿಸುವ ಸಂಪ್ರದಾಯವು ಭಾರತಾದ್ಯಂತ ಕಂಡು ಬರುತ್ತದೆ.

ಈ ದಿನದಂದು ಭಕ್ತರು ಹೆಸರು ಬೇಳೆ, ಅಕ್ಕಿ ಮತ್ತು ಬೆಲ್ಲವನ್ನು ಸೇರಿಸಿ ತಯಾರಿಸುವ ತಿಂಡಿ (ಪೊಂಗಲ್) ಹೆಚ್ಚಿನ ಪ್ರಾಧಾನ್ಯತೆಯನ್ನು ವಹಿಸಿದೆ, ಈ ಪೊಂಗಲ್ ಶ್ರೀ ನಾರಾಯಣ, ಲಕ್ಷ್ಮಿ ದೇವರ ದೈವಿಕ ಪ್ರೀತ್ಯರ್ಥವಾಗಿ ಸಲ್ಲಿಸಲಾಗುತ್ತದೆ.

ಹಬ್ಬವೊಂದು ನಾಮ ಹಲವು

ಮಕರ ಸಂಕ್ರಾಂತಿಯು ಭಾರತದೆಲ್ಲಡೆಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲ್ಪಡುತ್ತದೆ. ಪಂಜಾಬ್‌ನಲ್ಲಿ ಇದು ಲೋಹರಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬೋಗಲಿ ಬಿಹು, ಗುಜರಾತ್ ಮತ್ತು ರಾಜಸ್ತಾನದಲ್ಲಿ ಉತ್ತರಾಯಣ್ (ಗಾಳಿಪಟ ಹಾರಿಸುವ ಹಬ್ಬ), ಕರ್ನಾಟಕ, ಬಿಹಾರ, ಆಂಧ್ರ ಪ್ರದೇಶ ಮೊದಲಾದೆಡೆ ಮಕರ ಸಂಕ್ರಾಂತಿಯಾಗಿಯೂ, ತಮಿಳ್ನಾಡಿನಲ್ಲಿ ಮನೆಮನೆಗಳಲ್ಲಿ ಹಾಲನ್ನು ಉಕ್ಕಿಸುವುದ ಮೂಲಕ "ಪೊಂಗಲ್" ಹಬ್ಬ ಆಗಿಯೂ, ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಮಕರ ವಿಳಕ್ಕ್ ಉತ್ಸವವಾಗಿಯೂ ಮಿಕ್ಕಿ ಉಳಿದ ರಾಜ್ಯಗಳಲ್ಲಿ ಸಂಕ್ರಾಂತಿ ಎಂದೂ ಆಚರಿಸಲ್ಪಡುತ್ತದೆ.

ಎಳ್ಳುಬೆಲ್ಲ ತಿಂದು ಒಳ್ಳೆ ಮಾತನ್ನಾಡಿ

ಹೊಸ ಫಸಲು ಭತ್ತ, ಕಬ್ಬು, ಎಳ್ಳು ಇತ್ಯಾದಿಗಳನ್ನು ಹೊಲಗಳಿಂದ ಮನೆಗೆ ತಂದು ಅವುಗಳನ್ನು ದಾನ ಮಾಡಿದ ನಂತರ ಸೇವಿಸುವ ಪದ್ಧತಿಯು ಪುರಾತನ ಕಾಲದಿಂದಲೇ ನಡೆದು ಕೊಂಡು ಬಂದಿದೆ. ಕರ್ನಾಟಕದಕಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಕಂಡು ಬರುವುದು "ಎಳ್ಳು". ಮನೆಯಲ್ಲಿ ಎಳ್ಳನ್ನು ತಯಾರಿಸಿ ಸುತ್ತ ಮುತ್ತಲಿನ ಮನೆಗೆ ಎಳ್ಳನ್ನು ಹಂಚಿ ಶುಭಾಶಯಗಳನ್ನು ಕೋರುತ್ತಾರೆ. ಈ ಸಂಪ್ರದಾಯವನ್ನು "ಎಳ್ಳು ಬೀರುವುದು" ಎಂದು ಕರೆಯುತ್ತಾರೆ. ಎಳ್ಳುಬೆಲ್ಲ ತಿಂದು ಒಳ್ಳೆಯ ಮಾತನ್ನಾಡೋಣ ಎನ್ನುತ್ತಾ ಹಂಚುವ ಎಳ್ಳಿನ ಜತೆಗೆ, ಸಕ್ಕರೆಯ ಅಚ್ಚುಗಳನ್ನು ,ಹಣ್ಣು ಮತ್ತು ಕಬ್ಬಿನ ಚಿಕ್ಕ ತುಂಡುಗಳನ್ನು ಸಹ ಹಂಚುವ ಪದ್ದತಿ ಇದೆ. ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಒಣ ಕೊಬ್ಬರಿ, ಬೆಲ್ಲ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇ ಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ 'ಎಳ್ಳ'ನ್ನು ತಯಾರಿಸಲಾಗುತ್ತದೆ.

ಸಂಕ್ರಾತಿಯ ಆಚರಣೆಯಲ್ಲಿ ಎಳ್ಳು ಬೆಲ್ಲದ ಸೇವನೆಯು ಆರೋಗ್ಯಕರವಾಗಿರುತ್ತದೆ. ಎಳ್ಳಿಗೆ ಶಾಖವನ್ನುಂಟು ಮಾಡುವ ಶಕ್ತಿಯಿರುವುರುವುದರಿಂದಲೇ ಚಳಿಗಾಲದಲ್ಲಿ ಇದರ ಸೇವನೆ ಉತ್ತಮ. ಬರಿಯ ಎಳ್ಳು ಸೇವನೆಯು ಕಫ ಮತ್ತು ಪಿತ್ತ ರೋಗದ ವೃದ್ಧಿಗೆ ಕಾರಣವಾಗುವುದರಿಂದ ಎಳ್ಳಿನೊಡನೆ ಹುರಿದ ಕಡಲೆ ಬೀಜ, ಕೊಬ್ಬರಿ ಮತ್ತು ಬೆಲ್ಲವನ್ನು ಸೇವಿಸಲಾಗುತ್ತದೆ. ಹೀಗೆ ಆರೋಗ್ಯದ ದೃಷ್ಟಿಯಿಂದ ವೈಜ್ಞಾನಿಕವಾಗಿಯೂ ಸಂಕ್ರಾಂತಿಯ ಆಚರಣೆಯು ಜನಜೀವನದಲ್ಲಿ ಹೆಚ್ಚಿನ ಪ್ರಾಧಾನ್ಯವನ್ನು ವಹಿಸುತ್ತದೆ.

ಸಾಮಾನ್ಯವಾಗಿ ಮನೆಯ ಹೆಣ್ಣು ಮಕ್ಕಳು ಎಳ್ಳು ಬೀರಿದರೆ, ಹೆಣ್ಣು ಮಕ್ಕಳಿಲ್ಲದ ಮನೆಯಲ್ಲಿ ಗಂಡು ಮಕ್ಕಳನ್ನು ಎಳ್ಳು ಬೀರಲು ಕಳುಹಿಸುವುದೂ ವಾಡಿಕೆಯಲ್ಲಿದೆ. ಇದಲ್ಲದೆ ಮದುವೆಯಾಗಿ ಗಂಡನ ಮನೆಗೆ ಹೋದ ಹೆಂಗೆಳೆಯರು 5 ವರ್ಷಗಳ ವರೆಗೆ ನೆಂಟರಿಷ್ಟರಿಗೆ ಎಳ್ಳನ್ನು ಬೀರುವರು. ಈ ಸಂಪ್ರದಾಯದ ಪ್ರಕಾರ, ಮೊದಲ ವರ್ಷ 5 ಬಾಳೆಹಣ್ಣುಗಳನ್ನು ದಾನ ಮಾಡಿದರೆ, ಎರಡನೇ ವರ್ಷ 10, ಮೂರನೇ ವರ್ಷ 15 ಹೀಗೆ ಐದನೇ ವರ್ಷ 25 ಬಾಳೆಹಣ್ಣುಗಳನ್ನು ದಾನ ಮಾಡುವ ಸಂಪ್ರದಾಯವು ಕೆಲವೆಡೆಗಳಲ್ಲಿ ಚಾಲ್ತಿಯಲ್ಲಿದೆ.

ಮಹಾರಾಷ್ಟ್ರದಲ್ಲಿ ಈ ದಿನದಂದು ಎಳ್ಳಿನ ಉಂಡೆಯನ್ನು ದಾನ ಮಾಡಿ ಆಚರಿಸುವ ಪದ್ಧತಿ ಕಂಡುಬರುತ್ತದೆ. ಅಲ್ಲಿ ಇದನ್ನು 'ತಿಲ್‌ಗೋಳ' ಎಂದು ಕರೆಯುತ್ತಾರೆ. ರಾಜಸ್ಥಾನ. ಗುಜರಾತ್, ಮಹರಾಷ್ಟ್ರ ಮೊದಲಾದ ರಾಜ್ಯಗಳಲ್ಲಿ ಈ ಹಬ್ಬವನ್ನು ಗಾಳಿಪಟ ಹಾರಿಸಿ ಆಚರಿಸುತ್ತಾರೆ. ಮಕರ ಸಂಕ್ರಾತಿಯ ದಿನದಂದು ಪವಿತ್ರ ಸ್ಥಳಗಳಾದ ಪ್ರಯಾಗ, ಹರಿದ್ವಾರ್, ಉಜ್ಜೈನಿ ಮತ್ತು ನಾಸಿಕ್ ಮೊದಲಾದೆಡೆಗಳಲ್ಲಿ ವಿಶೇಷ ಮೇಳಗಳು ನಡೆದು ಬರುತ್ತಿದ್ದು, 12 ವರುಷಕ್ಕೊಮ್ಮೆ ಆಚರಿಸುವ ಕುಂಭ ಮೇಳವು ಸಂಕ್ರಾತಿಯ ದಿನದಂದು ಮೇಲಿನ ಯಾವುದಾದರೊಂದು ಕ್ಷೇತ್ರಗಳಲ್ಲಿ ನೆರವೇರುತ್ತದೆ. ವರ್ಷಂಪ್ರತಿ ಚಿಕ್ಕ ಕುಂಭ ಮೇಳವೆಂದು ಕರೆಯಲ್ಪಡುವ ಮಾಘ ಮೇಳ ಪ್ರಯಾಗದಲ್ಲಿಯೂ, ಗಂಗಾಸಾಗರ ಮೇಳವು ಗಂಗಾನದಿಯಲ್ಲಿಯೂ ಮಕರ ಸಂಕ್ರಾಂತಿಯ ದಿನದಂದು ನೆರವೇರಿಸಲ್ಪಡುತ್ತದೆ.

ಮಕರರಾಶಿಗೆ ಸೂರ್ಯನ ಪ್ರವೇಶ

ತಮಿಳುನಾಡಿನಲ್ಲಿ ಮತ್ತು ಆಂಧ್ರ ಪ್ರದೇಶದಲ್ಲಿ ಮಕರ ಸಂಕ್ರಾಂತಿಯು "ಪೊಂಗಲ್" ಹಬ್ಬವೆಂದು ಮೂರು ದಿನಗಳ ಕಾಲ ಆಚರಿಸುತ್ತಿದ್ದು ತಮ್ಮ ಬೆಳೆಯ ಮೊದಲ ಕೊಯ್ಲನ್ನು ಮನೆಗೆ ತಂದು ಹೊಸ ಅಕ್ಕಿಯನ್ನು ಹಾಲಿನೊಂದಿಗೆ ಬೇಯಿಸಿ ಒಂದು ಬಗೆಯ ಸಿಹಿ ತಿಂಡಿಯಾದ 'ಚಕ್ಕರಪೊಂಗಲ್"ನ್ನು ತಯಾರಿಸುತ್ತಾರೆ. ಈ ಖಾದ್ಯವನ್ನು ಮೊದಲು ಸೂರ್ಯನಿಗೆ ಅರ್ಪಿಸಲಾಗುತ್ತಿದ್ದು ನಂತರ ಪ್ರಸಾದ ರೂಪದಲ್ಲಿ ಎಲ್ಲರಿಗೂ ವಿತರಿಸಲಾಗುತ್ತದೆ. ಜನರು ಈ ದಿನದಂದು 'ಹೊಸಅಕ್ಕಿ ಊಟ'ವನ್ನು ತಯಾರಿಸಿ ಧಾನ್ಯಲಕ್ಷ್ಮಿಯನ್ನು ಪೂಜಿಸಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಮನೆ ಮುಂದೆ ವರ್ಣರಂಜಿತ "ಕೋಲಂ" ಎಂದರೆ ರಂಗೋಲಿಯನ್ನು ರಚಿಸಿ ಸಮೃದ್ಧಿಯನ್ನು ಆಹ್ವಾನಿಸುತ್ತಾ ಆಚರಿಸುವ ಈ ಹಬ್ಬವು ಸಂಪತ್ತು, ಸಮಾಧಾನ ಮತ್ತು ಏಳಿಗೆಯ ದ್ಯೋತಕವಾಗಿದೆ.

ಸಂಕ್ರಾಂತಿ ಹಬ್ಬದ ರಾತ್ರಿಯಂದು ದೇವರ ಪೂಜೆಯ ನಂತರ ಜ್ಯೋತಿಷಿಗಳಿಂದ ಸಂಕ್ರಾಂತಿ ಮೂರ್ತಿಯ ಸ್ವರೂಪ ಮತ್ತು ಆ ವರ್ಷದ ಸಂಕ್ರಾಂತಿ ಫಲವನ್ನು ಓದಿಸಿ ತಿಳಿಯುವ ಪದ್ದತಿಯೂ ಕೆಲವೆಡೆಗಳಲ್ಲಿ ಕಂಡು ಬರುತ್ತದೆ. ಸಂಕ್ರಾಂತಿ ಪುರುಷನಿಗೆ ಮೂರು ತಲೆಗಳು, ಎರಡು ಮುಖಗಳು, ಐದು ಬಾಯಿ, ಮೂರು ಕಣ್ಣು, ಜೋಲಾಡುವ ಕಿವಿ ಮತ್ತು ಹುಬ್ಬುಗಳು, ಉದ್ದವಾದ ಮೂಗು, ಕೆಂಪುಹಲ್ಲು, ಎಂಟು ತೋಳು ಮತ್ತು ಎರಡು ಕಾಲು ಮತ್ತು ಕಪ್ಪುಬಣ್ಣದ ಅರ್ಧ ಗಂಡು ಅರ್ಧ ಹೆಣ್ಣಿನ ರೂಪವಿರುತ್ತದೆ ಎಂಬ ವಿಶ್ವಾಸವು ಚಾಲ್ತಿಯಲ್ಲಿದೆ. ಅದೇ ರೀತಿ ಅಂದು ಪಠಿಸುವ ದಿನ, ವಾರ, ಮಾಸ ಭವಿಷ್ಯಗಳು ಹೆಚ್ಚಿನ ಪ್ರಾಶಸ್ತ್ಯವನ್ನು ಗಳಿಸಿಕೊಂಡಿವೆ.

ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ. "ಮಕರ ವಿಳಕ್ಕು" ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತಿದ್ದು, ಇದು ಪ್ರಸ್ತುತ ಕಾಲದಲ್ಲಿಯೂ ಆಧ್ಯಾತ್ಮಿಕತೆಯ ಕುರುಹನ್ನು ತೋರಿಸುತ್ತದೆ.

ಅಂತೂ ಒಟ್ಟಿನಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶಿಸಿ ಲೋಕದ ಕಾರಿರುಳನ್ನು ಹೋಗಲಾಡಿಸುವಂತೆ ಜನರು ಈ ಕಾಲದಲ್ಲಿ ಪುಣ್ಯ ಕಾರ್ಯಗಳಲ್ಲಿಯೂ ಆಧ್ಯಾತ್ಮಿಕ ಚಿಂತೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಕ್ತಿ ಮಾರ್ಗದಲ್ಲಿ ಸಾಗುವಂತೆ ಈ ಆಚರಣೆಯು ಪ್ರೇರಣೆಯನ್ನು ನೀಡುತ್ತದೆ.

Makara Sankranti / Shankranti / ಮಕರ ಸಂಕ್ರಾಂತಿ

ನಮ್ಮ ಹಿಂದೂ ಸಂಪ್ರದಾಯದಲ್ಲಿ ಹಬ್ಬಗಳನ್ನು ಪಂಚಾಂಗದ ಪ್ರಕಾರ ಮಾಡುತ್ತೀವಿ. ಪಂಚಾಂಗವು ಚಂದ್ರಮಾನ ಅಥವಾ ನಿರಯನ ಅಂದರೆ ಚಂದ್ರನ ಚಲನೆಯನ್ನು ಆಧರಿಸಿ ತಿಥಿ, ನಕ್ಷತ್ರ ಎಲ್ಲ ನಿರ್ಧರಿಸುತ್ತಾರೆ. ಸಂಕ್ರಾಂತಿ ಹಬ್ಬವು ಇದಕ್ಕೆ ಹೊರತು. ಸಂಕ್ರಾತಿ ಹಬ್ಬವು ಸಾಯನ ಅಥವಾ ಸೂರ್ಯನ ಚಲನೆಯನ್ನು ಆಧರಿಸಿದೆ. ಸೂರ್ಯನು ಧನಸ್ಸು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ದಿನ ಆಚರಿಸುವ ಹಬ್ಬ ಈ ಸಂಕ್ರಾಂತಿ ಹಬ್ಬ. (ಮಕರ - ಮಕರ ರಾಶಿ, ಸಂಕ್ರಮಣ - ಒಂದು ರಾಶಿಯಿಂದ ಮತ್ತೊಂದು ರಾಶಿಗೆ ದಾಟುವ ಸಮಯ) ಆದ್ದರಿಂದ ಇದನ್ನು ಮಕರ ಸಂಕ್ರಾಂತಿ ಎಂದು ಕರೆಯುತ್ತೀವಿ. ಸೂರ್ಯನು ಉತ್ತರಾಭಿ ಮುಖವಾಗಿ ಪರಿಭ್ರಮಣೆ ಶುರು ಮಾಡುತ್ತಾನೆ.ಆದ್ದರಿಂದ ಉತ್ತರಾಯಣ ಕಾಲ ಎಂದೂ ಕರೆಯುತ್ತಾರೆ. ಹೀಗಾಗಿ ದಿನದ ಅವಧಿ ಹೆಚ್ಚಾಗಿ, ರಾತ್ರಿಯ ಅವಧಿ ಕಡಿಮೆ ಆಗುತ್ತಾ ಹೋಗುತ್ತದೆ. ಸೂರ್ಯನು ಮೇಲೇರಿ ಪ್ರಕಾಶ ಬೀರುಬಂತೆ, ನಮ್ಮ ಬಾಳಲ್ಲೂ ಕತ್ತಲೆ ಹೋಗಿ, ಹೊಸ ಬೆಳಕು ಬರುತ್ತದೆ ಎಂಬ ಸಂಕೇತವಾಗಿ ಈ ಹಬ್ಬವನ್ನುಆಚರಿಸುತ್ತಾರೆ.

ಸಂಕ್ರಾತಿ ಹಬ್ಬ ನಾಡ ಹಬ್ಬವೂ ಹೌದು. ಭಾರತ ದೇಶದೆಲ್ಲೆಡೆ ಈ ಹಬ್ಬವನ್ನು ಮಾಡುತ್ತಾರೆ. ದಕ್ಷಿಣದಲ್ಲಿ ಸಂಕ್ರಾಂತಿ, ಪೊಂಗಲ್ ಎನ್ನುತ್ತಾರೆ, ಉತ್ತರದಲ್ಲಿ ಲೋಹರಿ, ಕಿಚಿರಿ ಎಂದು ಆಚರಿಸುತ್ತಾರೆ. ಇದು ಸುಗ್ಗಿಯ ಹಬ್ಬ. ರೈತರು ತಾವು ಬೆಳೆದ ಬೆಳೆಯನ್ನು ಕೊಯ್ಲು ಮಾಡಿ ಫಸಲು ಸಂಗ್ರಹಿಸಿ ಅದಕ್ಕೆ ಪೂಜೆ ಮಾಡುತ್ತಾರೆ. ದವಸಧಾನ್ಯಗಳ ಸಮೃದ್ಧಿ ಇಂದ ನಮ್ಮ ಜೀವನವೂ ಸಮೃದ್ಧಿಯಾಯಿತು ಎಂದು ಖುಷಿಪಡುವ ಸಮಯ.


ಕನ್ನಡಿಗರೂ ಈ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸುತ್ತೀವಿ ಅಲ್ಲವೇ .
ಎಲ್ಲ ಹಬ್ಬಗಳಂತೆ ಈ ದಿನವೂ ಮನೆಯನ್ನು ಸ್ವಚ್ಛ ಮಾಡಿ ಅಲಂಕರಿಸುತ್ತೀವಿ. ಮನೆಯ ಮುಂದೆ ವಿಶೇಷ ರಂಗೋಲಿ ಬರೆಯುತ್ತಾರೆ. ಈ ಹಬ್ಬಕ್ಕೆ ಪ್ರತ್ಯೇಕವಾದ ಯಾವುದೇ ಪೂಜಾ ವಿಧಾನ / ವ್ರತ ಇಲ್ಲ. ಮಂಗಳ ಸ್ನಾನ ಮಾಡಿ ಮನೆಯ ದೇವರಿಗೆ ಪೂಜೆ ಮಾಡುತ್ತಾರೆ.ಈ ಹಬ್ಬದ ವಿಶೇಷತೆ ಎಳ್ಳು ಮತ್ತು ಸಕ್ಕರೆ ಅಚ್ಚು. ಬೆಲ್ಲ , ಕೊಬ್ಬರಿ, ಕಡಲೇಕಾಯಿ ಬೀಜ, ಹುರಿಗಡಲೆ, ಎಳ್ಳು - ಈ ಐದು ಸಾಮಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ಮಿಶ್ರ ಮಾಡಿ ತಯಾರಿಸುತ್ತಾರೆ.ಎಳ್ಳ ಸಕ್ಕರೆ ಅಚ್ಚನ್ನು ದೇವರ ಮುಂದೆ ಇಟ್ಟು ನೈವೇದ್ಯ ಮಾಡಿ ಪೂಜೆಯ ನಂತರ ಮನೆಯವರೆಲ್ಲ ತಿನ್ನುವುದು. ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡಿ ಎಂಬ ನುಡಿಯಂತೆ ಎಲ್ಲರೂ ಸಿಹಿಯಾದ, ಒಳ್ಳೆಯ ಮಾತಾಡಿ, ಒಳ್ಳೆ ವಿಷಯಗಳನ್ನು ಯೋಚಿಸಿ, ಒಳ್ಳೆ ಕಾರ್ಯಗಳನ್ನು ಮಾಡಿರಿ.

ಎಳ್ಳು, ಸಕ್ಕರೆ ಅಚ್ಚು , ಕಬ್ಬು, ಹಣ್ಣುಗಳನ್ನು ಬಂಧು - ಬಾಂಧವರಿಗೆ, ಸ್ನೇಹಿತರಿಗೆ ಹಂಚುತ್ತಾರೆ. ಮದುವೆಯ ನಂತರ ಹೆಣ್ಣು ಮಗಳು ಸುಮಂಗಲಿಯರಿಗೆ ಎಳ್ಳು ಬೀರಿ ಆಶಿರ್ವಾದ ಪಡೆಯುತ್ತಾರೆ . ಮಗು ಹುಟ್ಟಿದ ವರ್ಷ ಎಳ್ಳು ಜೊತೆಗೆ ಬೆಳ್ಳಿ ಕೃಷ್ಣ / ಬೆಳ್ಳಿ ಬಟ್ಟಲು ಬೀರುವ ಪದ್ಧತಿ ಕೆಲವು ಮನೆಗಳಲ್ಲಿವೆ. ಮನೆಯಲ್ಲಿ ಚಿಕ್ಕ ಮಕ್ಕಳಿಗೆ ಸಂಕ್ರಾಂತಿ ದಿನ ಸಂಜೆ ಆರತಿ ಮಾಡುತ್ತಾರೆ. ಊಟಕ್ಕೆ ಸಾಮಾನ್ಯವಾಗಿ ಸಿಹಿ ಮತ್ತು ಖಾರ ಪೊಂಗಲ್ /ಹುಗ್ಗಿ ಮಾಡುತ್ತಾರೆ. ಒಟ್ಟಿನಲ್ಲಿ ಸಂಕ್ರಾತಿಹಬ್ಬ ಅಂದರೆ ಸಡಗರದ ಹಬ್ಬ.

ನಮ್ಮ ಮನೆಯ ಎಳ್ಳು -ಸಕ್ಕರೆ ಅಚ್ಚು

ಪರದೇಶದಲ್ಲಿದ್ದರೆ ಎಳ್ಳು ಸಕ್ಕರೆ ಅಚ್ಚು ಮಾಡುವುದು ಒಂದು ಸಾಹಸವೇ ಸರಿ. ಬೆಂಗಳೂರಿನಲ್ಲಿ ಬಿಸಿಲಿನಲ್ಲಿ ಬೆಲ್ಲ, ಕೊಬ್ಬರಿ ಒಣಗಿಸುತ್ತಾರೆ. ನಾನೀಗಿರುವ ಊರಿನ ಹವಾಮಾನದಲ್ಲಿ ಬರಿ ಚಳಿ ಹಿಮ ತುಂಬಿಹೋಗಿದೆ. ಆದರೂ ಎಳ್ಳು ಮಾಡುವ ಆಸೆ ಇತ್ತು. ಏನು ಮಾಡುವುದು ಎಂದು ಯೋಚಿಸುವಾಗ ತಲೆಗೆ ಹೊಸ ವಿಚಾರ ಹೊಳೆಯಿತು. ಚಳಿಗೆ ಮನೆಯನ್ನು ಬೆಚ್ಚಗೆ ಇಡುವುದಕ್ಕೆ ಇರುವ room/space heater ನನ್ನ ನೆರವಿಗೆ ಬಂತು. ಈ heater ಶಾಖದಿಂದ ಕೊಬ್ಬರಿ, ಬೆಲ್ಲ ಒಣಗಿತು.ಸಕ್ಕರೆ ಅಚ್ಚುಗಳನ್ನು ಸ್ನೇಹಿತೆಯೊಬ್ಬರ ಸಲಹೆಯಂತೆ candy molds ಉಪಯೋಗಿಸಿ ಮಾಡಿದ್ದಾಯಿತು. ನನ್ನಎಳ್ಳು ಸಕ್ಕರೆ ಅಚ್ಚು ಅಂತೂ ತಯಾರಾಯಿತು:)


ಈ ಸಂಕ್ರಾಂತಿ ಹಬ್ಬವು ನಿಮ್ಮೆಲ್ಲರಿಗೂ ಸಂತಸ ಸಮ್ರುಧ್ಧಿ ತರಲಿ:)

ಮಕರ ಸಂಕ್ರಾಂತಿ

ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.

ಜ್ಯೋತಿಷದ ತಳಹದಿ
ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದದಳ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ, ಗ್ರಹಗಳ ಸ್ಥಿತಿ-ಗತಿ, ರಾಶಿ-ನಕ್ಷತ್ರ, ಗ್ರಹಣ, ಅಸ್ತೋದಯಗಳನ್ನು ನಿರ್ಣಯಿಸಿ, ಶುಭಾಶುಭ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ. ಈ ಶಾಸ್ತ್ರದಂತೆ, ಸೂರ್ಯನು ನಿರಯಣ ಮಕರರಾಶಿಯನ್ನು ಪ್ರವೇಶಿಸಿದಾಗ, "ಮಕರ ಸಂಕ್ರಾಂತಿ"ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ ೧೪ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವರಣ ಆರಂಭವಾಗಿ, ಬೆಳೆ ಕಟಾವಿನ ಕಾಲವೂ ಆಗಿತ್ತು. ಈಗ ಉತ್ತರಾಯಣ ಡಿಸೆಂಬರ್ ೨೨ಕ್ಕೇ ಆದರೂ, ಹಿಂದಿನಂತೆಯೇ ಜನವರಿ ೧೪ ರಂದು ನಡೆಯುವ ಮಕರಸಂಕ್ರಾಂತಿಯಂದೇ ಉತ್ತರಾಯಣದ ಆಚರಣೆಯೂ ನಡೆಯುತ್ತದೆ.ಮಹಾಭಾರತದ ಕತೆಯಲ್ಲಿ ಇಚ್ಚಾ ಮರಣಿಯಾದ ಬೀಷ್ಮರು ಪ್ರಾಣ ಬಿಡಲು ಉತ್ತರಾಯಣ ಪರ್ವ ಕಾಲವನ್ನು ಕಾದಿದ್ದರು ಎಂಬ ಉಲ್ಲೆಖವಿದೆ. ಸಂಪರ್ಕದ ಹೆಸರು

ಖಗೋಳ ಶಾಸ್ತ್ರದ ಪ್ರಕಾರ ಒಂದು ವಿವರಣೆ

ಸೂರ್ಯೋದಯ ಪೂರ್ವದಲ್ಲಿ ಮತ್ತು ಸೂರ್ಯಾಸ್ತಮಾನ ಪಶ್ಚಿಮದಲ್ಲಿ ಎಂದು ಹೇಳುವುದಾದರೂ, ಯಾವುದೇ ಸ್ಥಳದಲ್ಲಿ ಕರಾರುವಾಕ್ಕಾಗಿ ಪೂರ್ವದಲ್ಲೇ ಸೂರ್ಯೋದಯವಾಗುವುದು ಮತ್ತು ಪಶ್ಚಿಮದಲ್ಲೇ ಸೂರ್ಯಾಸ್ತಮಾನವಾಗುವುದು ವರ್ಷದಲ್ಲಿ ಎರಡೇ ದಿನಗಳಂದು. ಆ ದಿನಗಳನ್ನು ಈಕ್ವಿನಾಕ್ಸ್ (equinox)ಎಂದು ಕರೆಯುತ್ತಾರೆ. ಅಂದು ಹಗಲಿರುಳುಗಳು ದಿನವನ್ನು ಸಮಪಾಲಾಗಿ, ಅಂದರೆ ೧೨ಗಂಟೆಗಳಾಗಿ ಹಂಚಿಕೊಳ್ಳುತ್ತವೆ. ವರ್ಷದ ಉಳಿದ ದಿನಗಳಲ್ಲಿ ಹಗಲಿರುಳುಗಳ ಪಾಲು ಸಮವಾಗಿರುವುದಿಲ್ಲ. ಬೇಸಗೆಯಲ್ಲಿ ಹಗಲು ಹೆಚ್ಚು, ಇರುಳು ಕಮ್ಮಿ. ಚಳಿಗಾಲದಲ್ಲಿ ಹಗಲು ಕಮ್ಮಿ, ಇರುಳು ಹೆಚ್ಚು.
ಈಕ್ವಿನಾಕ್ಸ್ ದಿವಸಗಳ ಹೊರತಾಗಿ ಸೂರ್ಯನ ಉದಯ ಪೂರ್ವದ ಬಲಕ್ಕೆ (ಅಂದರೆ ಉತ್ತರಕ್ಕೆ) ಅಥವಾ ಎಡಕ್ಕೆ (ಅಂದರೆ ದಕ್ಷಿಣಕ್ಕೆ) ಆಗುತ್ತದೆ. ಚಳಿಗಾಲ (ಅಂದರೆ ಇರುಳಿನ ಪ್ರಮಾಣ)ಹೆಚ್ಚಾದಂತೆ ಸೂರ್ಯನ ಉದಯ ಹೆಚ್ಚು ದಕ್ಷಿಣ ದಿಕ್ಕಿಗೆ ಚಲಿಸುವುದು ಗೋಚರಿಸುತ್ತದೆ. ಕೊನೆಗೆ ಒಂದು ದಿನ ದಕ್ಷಿಣದ ತುತ್ತ ತುದಿಯ ಹಂತವನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುಧ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ. ಅಂದರೆ ಸೂರ್ಯ ಇನ್ನು ದಕ್ಷಿಣ ದಿಕ್ಕಿನತ್ತದ ತನ್ನ ಚಲನವನ್ನು ನಿಲ್ಲಿಸಿ ಉತ್ತರಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಈ ದಿನ ಉತ್ತರಾಯಣದ ದಿನ. ಇದು ಚಳಿಗಾಲ ಮುಗಿದು ಮುಂಬರುವ ಬೇಸಗೆಯ ಮುನ್ಸೂಚನೆ. winter solstice ಎಂದೂ ಕರೆಯಲ್ಪಡುತ್ತದೆ. ಸುಮಾರು ಡಿಸೆಂಬರ್ ೨೨ ಈ ದಿನ. ಈ ದಿನವನ್ನು ಮಕರ ಸಂಕ್ರಾಂತಿಯೆಂದು ಗುರುತಿಸಬೇಕಾಗಿದ್ದರೂ ಸಾಂಪ್ರದಾಯಿಕವಾಗಿ ಜನವರಿ ತಿಂಗಳ ನಡುವಿನಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸುತ್ತೇವೆ.

ಇಲ್ಲಿಂದ ಸೂರ್ಯೋದಯ ಇನ್ನು ಆರು ತಿಂಗಳು ಉತ್ತರದ ದಿಕ್ಕಿನಲ್ಲಿ ಚಲಿಸುತ್ತಾ ನಡುವೆ ಮತ್ತೆ ಈಕ್ವಿನಾಕ್ಸ್ ದಿನವನ್ನೂ ತಲುಪಿ, ಇನ್ನೂ ಅದೇ ದಿಕ್ಕಿನಲ್ಲಿ (ಉತ್ತರಕ್ಕೆ)ಚಲಿಸುತ್ತಾ ಹೋಗುತ್ತದೆ. ಉತ್ತರಕ್ಕೆ ಹೆಚ್ಚು ಹೋದಂತೆಲ್ಲಾ ಹಗಲಿನ ಪ್ರಮಾಣ ಹೆಚ್ಚಾಗಿ ಇರುಳು ಕಮ್ಮಿಯಾಗುತ್ತಾ ಹೋಗುತ್ತದೆ. ಸೂರ್ಯನ ತಾಪ ಹೆಚ್ಚಾಗುತ್ತಾ ಬೇಸಗೆಯನ್ನು ಅನುಭವಿಸುತ್ತೇವೆ. ಕೊನೆಗೆ ಒಂದು ದಿನ ಉತ್ತರದ ತುತ್ತ ತುದಿಯನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುದ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ. ಅಂದರೆ ಸೂರ್ಯ ಇನ್ನು ಉತ್ತರ ದಿಕ್ಕಿನತ್ತದ ತನ್ನ ಚಲನೆಯನ್ನು ನಿಲ್ಲಿಸಿ ದಕ್ಷಿಣಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಇದು ದಕ್ಷಿಣಾಯನದ ದಿನ. ಬೇಸಗೆ ಮುಗಿದು ಮುಂಬರುವ ಚಳಿಗಾಲದ ಮುನ್ಸೂಚನೆ. ಈ ದಿನವನ್ನು ಕರ್ಕಾಟಕ ಸಂಕ್ರಾಂತಿ ಎಂದು ಗುರುತಿಸುತ್ತಾರೆ. summer solstice ಎಂದೂ ಕರೆಯಲ್ಪಡುತ್ತದೆ. ಸುಮಾರು ಜೂನ್ ೨೧ ಈ ದಿನ.
ಇಷ್ಟೆಲ್ಲಾ ವಿವರಣೆ ಅನ್ವಯಿಸುವುದು ಭೂಮಂಡಲದ ಭೂಮಧ್ಯ ರೇಖೆಯ ಉತ್ತರಾರ್ಧಕ್ಕೆ. ಇದೇ ರೀತಿಯ ಆದರೆ ತದ್ವಿರುದ್ಧವಾದ ವಿವರಣೆ ದಕ್ಷಿಣಾರ್ಧಕ್ಕೆ ಅನ್ವಯಿಸುತ್ತದೆ.
ಹೀಗೆ ಕಾಣುವ ಸೂರ್ಯನ ಚಲನೆಗೆ ಭೂಮಿಯ ಅಕ್ಷರೇಖೆ (axis) ಸುಮಾರು 22 1/2 degree ವಾಲಿರುವುದು ಕಾರಣ.
ಯಾವುದಾದರೂ ಒಂದು ನಿಗದಿತ ಜಾಗದಲ್ಲಿ ದಿನಾಲು ನಿಂತು, ದಿನದ ಒಂದೇ ನಿಗದಿತ ಸಮಯದಲ್ಲಿ, ಆಗಸದಲ್ಲಿ ಸೂರ್ಯನ ಸ್ಥಾನವನ್ನು ಗುರುತು ಹಾಕಿಕೊಂಡು, ಈ ರೀತಿ ವರ್ಷವಿಡೀ ಮಾಡಿದರೆ, ಗುರುತು ಹಾಕಿಕೊಂಡ ಆ ಬಿಂದುಗಳೆಲ್ಲಾ ಸುಮಾರು '8'ರ ಆಕೃತಿಯಲ್ಲಿ ಕಾಣುತ್ತವೆ. ಈ ವಿನ್ಯಾಸವನ್ನು analemma ಎನ್ನುತ್ತಾರೆ. '8'ರ ಆಕೃತಿಯ ನೆತ್ತಿಯ ಬಿಂದು summer solstice ದಿನದಂದು ಆಗುತ್ತದೆ. ಆ ಆಕೃತಿಯ ಅಡಿಯ ಬಿಂದು winter solstice, ಅಂದರೆ ಮಕರ ಸಂಕ್ರಾಂತಿಯ ದಿನದಂದು ಆಗುತ್ತದೆ. ನಡುವೆ ರೇಖೆಗಳು ಪರಸ್ಪರ ಹಾದುಹೋಗುವ ಬಿಂದು equinox ದಿನಗಳು. 8 ರ ಆಕೃತಿಯ ನೆತ್ತಿಯಿಂದ ಅದರ ಅಡಿಯ ಬಿಂದುವಿನ ತನಕದ ದಿನಗಳು ವರ್ಷದ ದಕ್ಷಿಣಾಯನದ ದಿನಗಳು. ಆ ಆಕೃತಿಯ ಅಡಿಯಿಂದ ಅದರ ನೆತ್ತಿಯ ಬಿಂದುವಿನ ತನಕದ ದಿನಗಳು ಉತ್ತರಾಯಣದ ದಿನಗಳು.

 ಆಚರಣೆ

ಕರ್ನಾಟಕ

ಸಕ್ಕರೆ ಅಚ್ಛು
ಎಳ್ಳು ಬೆಲ್ಲ
ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು "ಎಳ್ಳು". ಮನೆಯಲ್ಲಿ ಎಳ್ಳನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ "ಎಳ್ಳು ಬೀರುವುದು" ಮತ್ತು ಸ್ನೇಹಿತರು-ಸಂಬಂಧಿಕರೊಂದಿಗೆ ಶುಭಾಶಯಗಳನ್ನು ಹಂಚಿಕೊಳ್ಳುವುದು ಸಾಮಾನ್ಯವಾಗಿ ಕಂಡುಬರುವ ಸಂಕ್ರಾಂತಿಯ ಸಂಪ್ರದಾಯಗಳು. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು,ಹಣ್ಣು,ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ,ಒಣ ಕೊಬ್ಬರಿ,ಹುರಿಗಡಲೆ,ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ "ಎಳ್ಳು" ತಯಾರಿಸಲಾಗುತ್ತದೆ.

 ತಮಿಳುನಾಡು

ತಮಿಳುನಾಡಿನಲ್ಲಿ ಈ ಹಬ್ಬವನ್ನು "ಪೊಂಗಲ್" ಎಂದು ಕರೆಯಲಾಗುತ್ತದೆ. ಇಲ್ಲಿ ಇದು ನಾಲ್ಕು ದಿನಗಳ ಹಬ್ಬ - ಈ ನಾಲ್ಕು ದಿನಗಳು ಮತ್ತು ಆ ದಿನಗಳಲ್ಲಿನ ಆಚರಣೆಗಳು ಹೀಗಿವೆ:
  • ಭೋಗಿ: ಹೊಸ ಬಟ್ಟೆಗಳು
  • ಪೊಂಗಲ್: ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಗುತ್ತದೆ
  • ಮಾಟ್ಟು ಪೊಂಗಲ್: ಗೋಪೂಜೆ
    • ಕೆಲವು ಕಡೆಗಳಲ್ಲಿ "ಜಲ್ಲಿಕಟ್ಟು" ಎಂಬ ಗೂಳಿಯನ್ನು ಪಳಗಿಸುವ ಆಟ ನಡೆಯುತ್ತದೆ
  • ಕಾಣುಮ್ ಪೊಂಗಲ್

ಇತರ ಸ್ಥಳಗಳು

ಕೇರಳದ ಶಬರಿಮಲೆ
ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ."ಮಕರ ವಿಳಕ್ಕು"ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತಿದ್ದು, ಅಂತೂ ಇದು ವೈಜ್ಞಾನಿಕವಾಗಿಸಾಬೀತಾಗಿಲ್ಲವಾದರೂ, ಪ್ರಸ್ತುತ ಕಾಲದಲ್ಲಿಯೂ ಆಧ್ಯಾತ್ಮಿಕತೆಯ ಕುರುಹನ್ನು ತೋರಿಸುತ್ತದೆ ಎನ್ನುತ್ತಾರೆ ಭಕ್ತರು.ನಮನ

ಒಟ್ಟಿನಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶಿಸಿ ಲೋಕದ ಕಾರಿರುಳನ್ನು ಹೋಗಲಾಡಿಸುವಂತೆ ಜನರು ಈ ಕಾಲದಲ್ಲಿ ಪುಣ್ಯ ಕಾರ್ಯಗಳಲ್ಲಿಯೂ ಆಧ್ಯಾತ್ಮಿಕ ಚಿಂತೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಕ್ತಿ ಮಾರ್ಗದಲ್ಲಿ ಸಾಗುವಂತೆ ಈ ಆಚರಣೆಯು ಪ್ರೇರಣೆಯನ್ನು ನೀಡುತ್ತದೆ. 

ಮುಖ್ಯವಾಗಿ ದಕ್ಷಿಣ ಭಾರತದ ಹಬ್ಬವಾದರೂ, ಇತರ ಸ್ಥಳಗಳಲ್ಲಿ ಸಹ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನದಂದು ಗಾಳಿಪಟಗಳನ್ನು ಹಾರಿಬಿಡುವ ಸಂಪ್ರದಾಯವುಂಟು. ಮಹಾರಾಷ್ಟ್ರದಲ್ಲಿಯೂ, ಎಳ್ಳು ಮತ್ತು ಸಕ್ಕರೆಯ ಕುಸುರಿಕಾಳನ್ನು ಬಂಧು ಮಿತ್ರರಿಗೆ ಹಂಚುವ ರೂಢಿ ಇದೆ. ಪ್ರಮುಖವಾಗಿ ಅವರು, ಎಳ್ಳಿನ ಉಂಡೆ ಗಳನ್ನು ಹಂಚುತ್ತಾರೆ. ಅದಕ್ಕೆ ಅವರು ಲಡ್ಡು ಎನ್ನುತ್ತಾರೆ. ಕರ್ನಾಟಕದ ಸಂಪ್ರದಾಯದ ತರಹ ಬಿಡಿಕಾಳುಗಳನ್ನು ಹಂಚುವ ಪದ್ಧತಿಯಿಲ್ಲ. ಹಾ. ಎಳ್ಳುಂಡೆಕೊಡುವಾಗ ತಪ್ಪದೆ, " ತಿಳ್ಗುಳ್ ಘ್ಯಾ, ಅಣಿ ಗೋಡ್ ಗೋಡ್ ಬೋಲ", ಎನ್ನುವ ಮಾತು ಹೇಳುವುದನ್ನು ಮರೆಯುವುದಿಲ್ಲ ! ಪಂಜಾಬ್ ಮತ್ತು ಹರಿಯಾಣಗಳಲ್ಲಿ ಸಂಕ್ರಾಂತಿಗೆ "ಲೋಹರಿ," ಎಂದು ಹೆಸರು.

ಕತ್ತೆ ತರಹ ದುಡಿದರೆ ಕೆಟ್ಟು ಹೋದಿರಿ ಜೋಕೆ

Health Problem From Overworked
 
ಅವನಿಗೆ ದೊಡ್ಡ ಕಂಪನಿಯಲ್ಲಿ ಉದ್ಯೋಗ. ಕೈತುಂಬಾ ಸಂಬಳ, ತಲೆ ತುಂಬಾ ಕೆಲಸ, ಟಾರ್ಗೆಟ್ ಅದು ಇದು ಅಂತ ಪುರಸೊತ್ತು ಇಲ್ಲದ ಜೀವನ. ಮನೆಗೆ ಬಂದರೂ ಲ್ಯಾಪ್ ಟಾಪ್ ಅವನ ಪ್ರಪಂಚ. ಹೆಂಡತಿ ಜೊತೆ ಶಾಪಿಂಗ್ ಹೋಗಲು ಸಮಯವಿಲ್ಲ. ಮುದ್ದು ಮಗುವಿನ ಜೊತೆ ಆಡಲು ಸಮಯವಿಲ್ಲ.

ಕಾಲಿಗೆ ಚಕ್ರ ಕಟ್ಟಿದಂತಹ ಜೀವನದಿಂದಾಗಿ ಅವನು ಜೀವನದ ಅನೇಕ ಸಂತೋಷದ ಕ್ಷಣಗಳನ್ನು ಕಳೆದುಕೊಳ್ಳುತ್ತಿದ್ದಾನೆ ಅನಿಸುತ್ತದೆ. ಇತ್ತೀಚಿಗೆ ಅವನನ್ನು ನೋಡಿದಾಗ ತುಂಬಾ ಸೊರಗಿದಂತೆ ಕಾಣುತ್ತಿದ್ದ, ಕಾರಣ ಕೇಳಿದಾಗ ಕೆಲಸದ ಒತ್ತಡ ಅಂದ. ಯಶಸ್ವಿಗೆ ಕಠಿಣ ಪರಿಶ್ರಮ ಅಗತ್ಯ. ಹಾಗಂತ ವಿಶ್ರಾಂತಿಯಿಲ್ಲದ ಜೀವನ ದೇಹದ ಆರೋಗ್ಯವನ್ನು ಹದಗೆಡುಸುತ್ತದೆ. ಅಧಿಕ ಕೆಲಸದ ಒತ್ತಡದಿಂದ ಆರೋಗ್ಯದ ಮೇಲೆ ಹತ್ತು ಹಲವು ಕೆಟ್ಟ ಪರಿಣಾಮಗಳು ಉಂಟಾಗುತ್ತವೆ.

1. ನಿದ್ರಾ ಹೀನತೆ:
ದೇಹದ ಆರೋಗ್ಯಕ್ಕೆ 6 ಗಂಟೆ ನಿದ್ರೆ ಅವಶ್ಯಕ. ಕೆಲಸದ ಒತ್ತಡವಿದ್ದರೆ ಮಲಗಿದ್ದರೂ ನಿದ್ರೆ ಬರುವುದಿಲ್ಲ. ಅಲ್ಲದಿದ್ದರೆ ಅತಿ ಕಡಿಮೆ ನಿದ್ರೆ ಮಾಡುವುದು ಇವುಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ.

2. ಜ್ಞಾಪಕ ಶಕ್ತಿ ಕುಂದುವುದು:
ಅಧಿಕ ಒತ್ತಡದಿಂದ ಮೆದುಳಿನ ನೆನಪಿನ ಶಕ್ತಿ ಕುಂದುತ್ತದೆ. ಜ್ಞಾಪಕ ಶಕ್ತಿ ಹೆಚ್ಚಲು ನಿದ್ರೆ ಅವಶ್ಯಕ. ಇಲ್ಲದಿದ್ದರೆ ಮೆದುಳಿನ ಗ್ರಹಿಸುವ ಮತ್ತು ನೆನಪಿನ ಶಕ್ತಿ ಕುಂದುವುದು.

3. ಅಜಾಗರೂಕತೆ:
ಬೆಲೆಬಾಳುವ ವಸ್ತು ಅಥವಾ ಡಾಕ್ಯೂಮೆಂಟ್ ಮುಂತಾದವುಗಳನ್ನು ಜೋಪಾನವಾಗಿ ತೆಗೆದು ಇಡದಿರುವುದು ಕೆಲವರ ಸ್ವಾಭಾವಿಕ ಗುಣ. ಆದರೆ ವಿಶ್ರಾಂತಿಯಿಲ್ಲದೆ ದುಡಿಯುವವರಿಗೆ ವಸ್ತುಗಳನ್ನು ಎಲ್ಲಿ ಇಟ್ಟದ್ದೇವೆ ಎಂದು ತಕ್ಷಣ ನೆನಪಿಗೆ ಬರುವುದದಿಲ್ಲ. ಅಲ್ಲದೆ ಡೋರ್ ಹಾಗೆ ತೆರೆದಿಟ್ಟು ಹೋಗುವುದು, ಅತ್ಯಾವಶ್ಯಕವಾದ ಡಾಕ್ಯೂಮೆಂಟ್ ಮರೆತು ಹೋಗುವುದು ಅವೆಲ್ಲಾ ಲಕ್ಷಣಗಳು ಕಾಣಿಸಿಕೊಂಡರೆ ದೇಹದ ಆರೋಗ್ಯ ಹದಗೆಟ್ಟಿದೆ ಎಂದು ಅರ್ಥ.

4. ಅಜೀರ್ಣ:
ಅಧಿಕ ಕೆಲಸ ಒತ್ತಡದಿಂದಾಗಿ ಸರಿಯಾದ ಹೊತ್ತಿನಲ್ಲಿ ಊಟ ಮಾಡದಿರುವುದರಿಂದ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟಾಗುತ್ತದೆ. ಇದರಿಂದ ಎಷ್ಟೇ ಪ್ರಿಯವಾದ ಆಹಾರ ಕೂಡ ಬೇಡ ಅನಿಸುತ್ತದೆ.

5. ಆರೋಗ್ಯಕರವಲ್ಲದ ತಿಂಡಿಗಳ ಸೇವನೆ: ಕೆಲಸ ಮಾಡುತ್ತಿರುವಾಗ ಏನಾದರೂ ತಿನ್ನಬೇಕೆಂದು ಅನಿಸುವುದು ಸಹಜ. ಆಗ ಕುರುಕಲು ತಿಂಡಿಗಳನ್ನು ಸೇವಿಸುವುದರಿಂದ ದೇಹದ ಆರೋಗ್ಯ ಮತ್ತಷ್ಟು ಹಾಳಾಗುತ್ತದೆ.

6. ಸಂಸಾರದಲ್ಲಿ ಬಿರುಕು:
ಅಧಿಕ ಒತ್ತಡದಿಂದಾಗಿ ತೀವ್ರ ದಣಿವು ಆಗುವುದರಿಂದ ದಾಂಪತ್ಯ ಜೀವನದಲ್ಲೂ ಆಸಕ್ತಿ ಕುಂದಲಾರಂಭಿಸುತ್ತದೆ. ಇದರಿಂದ ದಂಪತಿಗಳ ನಡುವೆ ಭಾಂದವ್ಯ ಕಡಿಮೆಯಾಗಲು ಕೂಡ ಒಂದು ಕಾರಣವಾಗಿದೆ.

7. ರಕ್ತದೊತ್ತಡ: ವಿಶ್ರಾಂತಿಯಿಲ್ಲದೆ ಕೆಲಸ ಮಾಡುವುದರಿಂದ ರಕ್ತದೊತ್ತಡದಲ್ಲಿ ವ್ಯತ್ಯಾಸ ಉಂಟಾಗುತ್ತದೆ. ರಕ್ತದೊತ್ತಡ ಅಧಿಕವಾದಷ್ಟು ತಾಳ್ಮೆ ಕಡಿಮೆಯಾಗಿ ಸಣ್ಣ-ಪುಟ್ಟ ವಿಷಯಕ್ಕೂ ಕೋಪ ಬರುತ್ತದೆ. ಇದರಿಂದಾಗಿ ಮನ ನೆಮ್ಮದಿ ಕೂಡ ಹಾಳಾಗುತ್ತದೆ.

ಟೆನ್ಷನ್ ಮಾಡಿಕೊಂಡು ಕೆಲಸ ಮಾಡುವುದಕ್ಕಿಂತ ಸಾವಧಾನವಾಗಿ ಕೆಲಸ ಮಾಡುವುದು ಮುಖ್ಯ. ಮನಸ್ಸಿಗೂ ದೇಹಕ್ಕೂ ಆಗಾಗ ವಿಶ್ರಾಂತಿ ಕೊಡುತ್ತ ಕೆಲಸ ಮಾಡಬೇಕು. ಇದರಿಂದ ಕೆಲಸದ ದಕ್ಷತೆಯೂ ಹೆಚ್ಚುತ್ತದೆ. ಆರೋಗ್ಯವೂ ಉಳಿಯುತ್ತದೆ.

ನಿದ್ದೆ ಕೆಟ್ಟರೆ ಸೌಂದರ್ಯ ಕೆಟ್ಟಿತು ಜೋಕೆ...!



Sleep To Look Beautiful
 
ಕಟ್ಟುನಿಟ್ಟಿನ ವ್ಯಾಯಾಮ ಮತ್ತು ಒಳ್ಳೆಯ ಆಹಾರಕ್ರಮದಿಂದ ದೇಹದ ತೂಕವನ್ನು ಸದೃಢವಾಗಿ ಇಡಬಹುದು. ಸುಂದರವಾದ ಮೈಕಟ್ಟಿನ ಜೊತೆಗೆ ಮತ್ತಷ್ಟು ಸುಂದವಾಗಿ ಕಾಣಲು ಬ್ಯೂಟಿ ಥೆರಪಿಯನ್ನು ಕೂಡ ಮಾಡಬಹುದು.

ನೀವು ಹೆಚ್ಚು ಸುಂದರಿಯಾಗಬೇಕಾದರೆ ನಿದ್ದೆ ಕೆಡಬೇಡಿ. ನಿದ್ರೆಯನ್ನು ಕಡೆಗೆಣಿಸಿದರೆ ಮಾತ್ರ ಕಣ್ಣುಗಳು ಹೊಳಪನ್ನು ಕಳೆದುಕೊಳ್ಳುತ್ತದೆ. ಇದರಿಂದ ಮುಖದ ಕಾಂತಿ ಕುಂದುವುದು. ಆದ್ದರಿಂದ ಕಣ್ಣಿಗೆ ವಿಶ್ರಾಂತಿ ಅವಶ್ಯಕ. ಸುಂದರವಾಗಿ ಕಾಣಬೇಕೆಂದರೆ ನಿದ್ರೆ ಅವಶ್ಯಕ ಏಕೆ ಎಂದು ತಿಳಿಯಲು ಮುಂದೆ ಓದಿ.

1. ವಯಸ್ಸು ಹೆಚ್ಚಾದಂತೆ ಕಾಣುವುದು: 30ರ ಹರೆಯದಲ್ಲಿಯೆ ಇನ್ನೂ 10 ವರ್ಷ ದೊಡ್ಡವರಾಗಿ ಕಾಣಲು ಯಾರೂ ಇಷ್ಟ ಪಡುವುದಿಲ್ಲ. 7 ಗಂಟೆಗಳಿಗಿಂತ ಕಡಿಮೆ ಸಮಯ ನಿದ್ರೆ ಮಾಡಿದರೆ ಮುಖ ಬಿಳುಚಿಕೊಂಡಂತೆ ಕಾಣುವುದು ಅಲ್ಲದೆ ಕಣ್ಣಿನ ಸುತ್ತ ನೆರಿಗೆ ಬಂದು ಬೇಗನೆ ವಯಸ್ಸಾದಂತೆ ಕಾಣುತ್ತದೆ.

2. ಸೌಂದರ್ಯ ಮಂಕಾಗುವುದು: ಹೊಳೆಯುವ ಕಣ್ಣುಗಳು ಸೌಂದರ್ಯಕ್ಕೊಂದು ಮೆರಗು. ಆದರೆ ಮೇಕಪ್ ನಿಂದ ಮಾತ್ರ ಕಣ್ಣುಗಳನ್ನು ಸುಂದರವಾಗಿ ಕಾಣುವಂತೆ ಮಾಡಲು ಸಾಧ್ಯವಿಲ್ಲ. ಕಣ್ಣುಗಳು ಸುಂದರವಾಗಿ ಕಾಣಲು ನೈಸರ್ಗಿಕವಾಗಿ ಹೊಳಪಿನಿಂದ ಕೂಡಿರಬೇಕು. ಆಗ ಮಾತ್ರ ಮೇಕಪ್ ಮಾಡಿದರೆ ಸುಂದರವಾಗಿ ಕಾಣಿಸಲು ಸಾಧ್ಯ. ಆದ್ದರಿಂದ ಕಣ್ಣುಗಳು ನೈಸರ್ಗಿಕ ಹೊಳಪನ್ನು ಪಡೆಯಲು ಕಣ್ಣುಗಳಿಗೆ ವಿಶ್ರಾಂತಿ ಬೇಕೆಬೇಕು.

3. ಸೊರಗಿದ ತ್ವಚೆ: ಸರಿಯಾಗಿ ನಿದ್ರೆ ಇಲ್ಲದಿದ್ದರೆ ಮುಖದ ಹೊಳಪು ಮಾಯವಾಗಿ ಸೊರಗಿದಂತೆ ಕಾಣುವುದು.

4. ತ್ವಚೆಯಲ್ಲಿ ಎಣ್ಣೆ ಅಂಶದ ಸಮತೋಲನ: ತ್ವಚೆಯಲ್ಲಿ ಎಣ್ಣೆ ಅಂಶವನ್ನು ಸಮತೋಲನದಲ್ಲಿಡಲು ನಿದ್ರೆ ಮಾಡಬೇಕು. ನಿದ್ರೆ ಮಾಡಿದಾಗ ದೇಹ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿರುತ್ತದೆ. ಆಗ ದೇಹದಲ್ಲಿ ನೈಸರ್ಗಿಕ ಎಣ್ಣೆ ಉತ್ಪತ್ತಿಯಾಗುವುದರಿಂದ ತ್ವಚೆಯಲ್ಲಿ ತೇವಾಂಶ ಸಮತೋಲನಲ್ಲಿಟ್ಟು ಹೊಳೆಯುವಂತೆ ಮಾಡುತ್ತದೆ.

5. ತೂಕ: ಕಡಿಮೆ ಅವಧಿ ನಿದ್ರೆ ಮಾಡಿದರೆ ದೇಹದ ತೂಕ ಹೆಚ್ಚಾಗುತ್ತದೆ. ನಿದ್ರೆ ಸಮಸ್ಯೆ ಇರುವವರಲ್ಲಿ ಒಬೆಸಿಟಿ ಅಥವಾ ಬೊಜ್ಜಿನ ಸಮಸ್ಯೆ ಕೂಡ ಕಾಣಿಸಿಕೊಳ್ಳುವುದು. ಸರಿಯಾಗಿ ನಿದ್ರೆ ಇಲ್ಲದಿದ್ದರೆ 15 ದಿನದಲ್ಲಿ 5 ಪೌಂಡ್ ತೂಕ ಹೆಚ್ಚಾಗುತ್ತದೆ.

6. ಹಾರ್ಮೋನ್ ಗಳ ಅಸಮತೋಲನ: ನಿದ್ರೆ ಸರಿಯಾಗಿ ಇಲ್ಲದಿದ್ದರೆ ಹಾರ್ಮೋನ್ ಗಳಲ್ಲಿ ಏರುಪೇರು ಉಂಟಾಗುತ್ತದೆ. ಮೊಡವೆಗಳು ಬರಲು ಈ ಹಾರ್ಮೋನ್ ಗಳ ವ್ಯತ್ಯಾಸ ಕೂಡ ಒಂದು ಕಾರಣ.

7. ತಲೆನೋವು: ನಿದ್ರೆ ಕಡಿಮೆಯಾದರೆ ತಲೆನೋವು ಬರುವುದು. ತಲೆನೋವು ಬಂದರೆ ಚಟುವಟಿಕೆಯಿಂದ ಇರಲು ಸಾಧ್ಯವಿಲ್ಲ. ಇವೆಲ್ಲವೂ ಸೌಂದರ್ಯದ ಮೇಲೆ ಅಡ್ಡ ಪರಿಣಾಮವನ್ನು ಬೀರುತ್ತದೆ.

ಸೌಂದರ್ಯ ಹೆಚ್ಚಲು ಸಮರ್ಪಕವಾಗಿ ನಿದ್ದೆ ಮಾಡಿ. ಹಾಗಂತ ಬೆಳಗ್ಗೆ ಹತ್ತು ಗಂಟೆಗೆ ಏಳಬೇಡಿ.

ಮಕ್ಕಳೇ ಅಶ್ಲೀಲಚಿತ್ರ ನೋಡಿ ಅಮೂಲ್ಯ ಬಾಲ್ಯ ಕಳ್ಕೋಬೇಡಿ

children-please-stay-way-from-sex-movies
 
ಬೆಂಗಳೂರು: 'ಈಗಿನ ಮಕ್ಕಳು ವಯಸ್ಕರ ಚಿತ್ರಗಳನ್ನು ನೋಡುತ್ತಾ ತಮ್ಮ ಅಮೂಲ್ಯ ಬಾಲ್ಯ ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳ ಬಾಲ್ಯವನ್ನು ಉಳಿಸಲು ಮಕ್ಕಳು ಮಕ್ಕಳ ಚಿತ್ರಗಳನ್ನೇ ನೊಡುವಂತೆ ಉತ್ತೇಜಿಸಬೇಕು. ಆ ಮೂಲಕ ಮಕ್ಕಳ ಸಹಜ ಬೆಳವಣಿಗೆಗೆ ಸಹಕಾರಿಯಾಗಬೇಕು' ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ತಿಳಿಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಸೇವಾ ಸದನದಲ್ಲಿ ಮಂಗಳವಾರ ನಡೆದ 7ನೇ ಅಂತರರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವದ ಎರಡನೇ ದಿನ ಇರಾನಿ ಮಕ್ಕಳ ಸಿನಿಮಾಗಳ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

'ಇರಾನಿ ಚಿತ್ರರಂಗದಲ್ಲಿ ಗಂಭೀರವಾದ ಉತ್ತಮ ಚಿತ್ರಗಳು ತಯಾರಾಗುತ್ತಿರುವಂತೆಯೇ, ಅತ್ಯುತ್ತಮ ಮಕ್ಕಳ ಚಿತ್ರಗಳೂ ನಿರ್ಮಾಣವಾಗುತ್ತಿವೆ. ಆದರೆ ಕನ್ನಡದಲ್ಲಿ ಅದು ಸಾಧ್ಯವಾಗುತ್ತಿಲ್ಲ. ಕನ್ನಡ ಭಾಷೆಯಲ್ಲೂ ಮಕ್ಕಳ ಚಿತ್ರಗಳ ನಿರ್ಮಾಣಕ್ಕೆ ಚಿತ್ರರಂಗ ಮನಸ್ಸು ಮಾಡಬೇಕು' ಎಂದು ಅವರು ಆಶಿಸಿದರು.

ಮಕ್ಕಳು ಅವಸರದ ಬೆಳವಣಿಗೆಗೆ ಒಡ್ಡಿಕೊಳ್ಳುವಂತಹ ಇಂದಿನ ಪರಿಸ್ಥಿತಿಯಲ್ಲಿ ಸೂಕ್ಷ್ಮ ನೋಟಗಳ ಇರಾನಿ ಮಕ್ಕಳ ಚಿತ್ರಗಳನ್ನು ಪ್ರದರ್ಶಿಸುತ್ತಿರುವ ಕಾರ್ಯ ಉತ್ತಮವಾದದ್ದು` ಎಂದರು.

ಚಿತ್ರನಟಿ ಭಾವನಾ ಮಾತನಾಡಿ, 'ಕನ್ನಡವೂ ಸೇರಿದಂತೆ ಎಲ್ಲಾ ಕಿರುತೆರೆ ವಾಹಿನಿಗಳಲ್ಲೂ ಇಂದು 16 ವರ್ಷ ಮೇಲ್ಪಟ್ಟವರಿಗಾಗಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಮಕ್ಕಳಿಗೆ ಜ್ಞಾನ, ಶಿಕ್ಷಣ, ಸಹಜ ಮನೋರಂಜನೆ ನೀಡಲು ವಾಹಿನಿಗಳಿಗೆ ಕಾಳಜಿ ಇಲ್ಲ. ಹೀಗಾಗಿ ಪುಟ್ಟ ಮಕ್ಕಳೂ ಹಿರಿಯರ ವರ್ತನೆಗಳನ್ನು ಒತ್ತಾಯ ಪೂರ್ವಕವಾಗಿ ಅನುಕರಿಸುವ ಮೂಲಕ ತಮ್ಮ ಮುಗ್ಧ ಬಾಲ್ಯದ ಬದುಕನ್ನು ಕಳೆದುಕೊಳ್ಳುತ್ತಿದ್ದಾರೆ' ಎಂದು ವಿಷಾದಿಸಿದರು.

ಸರಕಾರಿ ಇಲಾಖೆಗಳಲ್ಲಿ 1.42 ಲಕ್ಷ ಕೆಲಸ ಖಾಲಿ ಇದೆ

ಬೆಂಗಳೂರು, ಜ.11: ರಾಜ್ಯ ಸರಕಾರದ ನಾನಾ ಇಲಾಖೆಗಳಲ್ಲಿ ಒಟ್ಟು 1.42 ಲಕ್ಷ ಹುದ್ದೆಗಳು ಖಾಲಿಯಿವೆ. ಇದು ಹೊಸದಾಗಿ ಸೃಷ್ಟಿಯಾದ ಹುದ್ದೆಗಳಲ್ಲ. ಈಗಾಗಲೇ ಸರಕಾರದಿಂದ ಅಧಿಕೃತವಾಗಿ ಮಂಜೂರಾಗಿ, ಖಾಲಿಗೊಂಡಿರುವ ಹುದ್ದೆಗಳು. ಆದರೆ ಈ ಪಾಟಿ ಲಕ್ಷಾಂತರ ಹುದ್ದೆಗಳು ಖಾಲಿಯಿದ್ದರೂ ಭರ್ತಿ ಮಾಡಬೇಕಾದ ಸರಕಾರ ಕಣ್ ಮುಚ್ಚಿಕೊಂಡು ಕುಳಿತಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಭೈರಪ್ಪ ಗುಡುಗಿದ್ದಾರೆ.

ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾದ ಕಾಲದಿಂದ ಹೊಸ ನೇಮಕವನ್ನು ಸರಕಾರ ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ನಂತರ ಬಂದ ಸರಕಾರಗಳೂ ಹೊ ಸ ನೇಮಕದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಅತಿ ಹೆಚ್ಚು ಸಂಖ್ಯೆಯ ಸಿಬ್ಬಂದಿ ಹೊಂದಿರುವ ಶಿಕ್ಷಣ ಇಲಾಖೆಯಲ್ಲೇ ಗರಿಷ್ಠ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿವೆ. ಈ ಇಲಾಖೆಯಲ್ಲಿ ವಿವಿಧ ಶ್ರೇಣಿಯ 24,518 ಹುದ್ದೆಗಳು ಖಾಲಿಬಿದ್ದಿವೆ. ಇಒದು ಪ್ರಾಥಮಿಕ ಶಿಕ್ಷಣದಿಂದ ಪದವಿಪೂರ್ವ ಶಿಕ್ಷಣದವರೆಗೂ ಅನ್ವಯವಾಗುತ್ತದೆ.

ಇನ್ನು, ಸೇವಾ ಕ್ಷೇತ್ರ ಎನಿಸಿರುವ ಆರೋಗ್ಯ, ಪೊಲೀಸ್ ಇಲಾಖೆಗಳಲ್ಲಿ ಹತ್ತಿಪ್ಪತ್ತು ಸಾವಿರ ಹುದ್ದೆಗಳು ಖಾಲಿಯಿವೆ. ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲಿ ವೈದ್ಯರೂ ಇಲ್ಲ. ಶುಶ್ರೂಷಕರೂ ಇಲ್ಲ. ಕಂದಾಯ ಇಲಾಖೆಯಲ್ಲಿ ಸರ್ವೇಯರುಗಳು ಇಲ್ಲ. ಗ್ರಾನಮ ಲೆಕ್ಕಿಗರಿಲ್ಲ. ಪಶು ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ನಿರ್ದೇಶಕರು, ಕೃಷಿ ಸಹಾಯಕರು ಇಲ್ಲ.

ಗಮನಾರ್ಹವೆಂದರೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿರುವ ಸಚಿವಾಲಯಗಳಲ್ಲಿ 504 ಮತ್ತು ರಾಜಭವನದಲ್ಲಿ 29 ಮಂಜೂರಾದ ಹುದ್ದೆಗಳು ಖಾಲಿ ಇಲ್ಲ. ಸಮಾಜ ಕಲ್ಯಾಣ ಿಲಾಖೆಯಲ್ಲಿ 10,546 ಮತ್ತು ವಿವಿಧ ನ್ಯಾಯಾಲಯಗಳಲ್ಲಿ 7516 ಹುದ್ದೆಗಳು ಭರ್ತಿಯಾಗಬೇಕಿವೆ.