ಪುಟಗಳು

ಬೆಳ್ಳೇಕೆರೆ ಹಳ್ಳಿ ಥೇಟರ್


ರಂಗಭೂಮಿ ಬೆಂಗಳೂರಿನಿಂದ ಆಚೆ ಹೋಗಿಲ್ಲ ಎಂಬ ಭಾವನೆ ಮೂಡುವಂತೆ ಸದ್ಯದ ಸ್ಥಿತಿ ಇದೆ. ಪ್ರಕಟವಾಗುವ ಪತ್ರಿಕಾ ವಿಮಶರ್ೆಗಳಲ್ಲಿ ಬೆಂಗಳೂರಿನ ನಾಟಕಗಳೇ ತುಂಬಿರುತ್ತವೆ. ದೃಶ್ಯ ಮಾಧ್ಯಮಗಳ ಪಾಲಿಗೆ ಥಿಯೇಟರ್ ಅಕ್ಷರಶಃ `ಮೃತ ರಂಗಭೂಮಿ‘. ಬೆಂಗಳೂರಿನ ಹೊರಗೂ ರಂಗಭೂಮಿ ಇದೆ ಎಂದು ಹೇಳಲು ಆದಾರಕ್ಕೆ ನೀನಾಸಂ, ರಂಗಾಯಣಗಳನ್ನಷ್ಟೇ ಹೆಸರಿಸುತ್ತೇವೆ. ಆದರೆ ತಿಪಟೂರು, ಸಾಣೆಹಳ್ಳಿ, ಶಿವಮೊಗ್ಗ, ಉಡುಪಿಗಳಲ್ಲಿ ರಂಗಭೂಮಿಯನ್ನು ಹಲವರು ಹಚ್ಚಿಕೊಂಡು, ಬೆಳೆಸುತ್ತಿದ್ದಾರೆ. ಗ್ರಾಮೀಣ ರಂಗಭೂಮಿ ಇನ್ನೂ ಹೆಚ್ಚು ಹುಲುಸಾಗಿದೆ.
ಈ ನಿಟ್ಟಿನಲ್ಲಿ `ಬೆಳ್ಳೇಕೆರೆ ಹಳ್ಳಿ ಥೇಟರ್‘ ಎಂಬ ಕೃತಿ ಇಲ್ಲಿ ಉಲ್ಲೇಖಾರ್ಹ. ಲೇಖಕ ಪ್ರಸಾದ್ ರಕ್ಷಿದಿ ಇದನ್ನು `ಒಂದು ಗ್ರಾಮೀಣ ರಂಗಭೂಮಿಯ ಆತ್ಮಕಥನ‘ ಎಂದು ಕರೆದಿದ್ದಾರೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ ಬೆಳ್ಳೇಕೆರೆಯ ರಂಗಭೂಮಿ ಬೆಳೆದುಬಂದ ಕತೆಯನ್ನು ಇಲ್ಲಿ ಲೇಖಕರು ವಿವರಿಸಿದ್ದಾರಾದರೂ ಅದರ ಜೊತೆಗೇ ಊರು, ಊರ ಮಂದಿ, ಊರ ಸಂಸ್ಕೃತಿ ಮೂರ್ತಗೊಂಡಿದ್ದನ್ನು ದಾಖಲಿಸಿದ್ದಾರೆ. ಆ ಮಟ್ಟಿಗೆ ಇದೊಂದು ಸಂಸ್ಕೃತಿ ಕಥನವೂ, ಗ್ರಾಮೀಣ ಸಾಂಸ್ಕೃತಿಕ ಇತಿಹಾಸದ ದಾಖಲೆಯೂ ಆಗಿ ಕಾಣುತ್ತದೆ.
ಶೀರ್ಷಿಕೆ: ಬೆಳ್ಳೇಕೆರೆ ಹಳ್ಳಿ ಥೇಟರ್ ಲೇಖಕರು:ಪ್ರಸಾದ್ ರಕ್ಷಿದಿ ಪ್ರಕಾಶಕರು: ಅಭಿನವ ಪ್ರಕಾಶನ ಪುಟಗಳು: 205 ಬೆಲೆ:ರೂ.100/-