ಪುಟಗಳು

ಶೋಷಕರೇ ಶೋಷಿತರಿಗೆ ಹಿತವಚನ ನೀಡುವುದು ಈ ದೇಶದ ಬುದ್ಧಿಜೀವಿಗಳ ಫ್ಯಾಷನ್

`ವಿಮರ್ಶಕ ಜಿ.ಎಚ್.ನಾಯಕರು ಶೋಷಕ ವರ್ಗದಿಂದ ಬಂದವರು. ಅವರ ಹೆಸರೇ ಜಾತಿ ಸೂಚಿತವಾದದ್ದು. ಅವರು ಸವರ್ಣೀರಾದ್ದರಿಂದ ಅವರು ಎಂದೂ ಅವರ ಜನಾಂಗದ ಬಗ್ಗೆ ಹೇಳುವುದಿಲ್ಲ. ಶೋಷಕರೇ ಶೋಷಿತರಿಗೆ ಹಿತವಚನ ನೀಡುವುದು ಈ ದೇಶದ ಬುದ್ಧಿಜೀವಿಗಳ ಫ್ಯಾಷನ್
`ಹಣದ ವಿಚಾರದಲ್ಲಿ ದೇವನೂರು ಮಹಾದೇವ ಪ್ರಾಮಾಣಿಕನಲ್ಲ. ಆತ ಪಡೆದ ಹಣಕ್ಕೆ ಲೆಕ್ಕವಿಲ್ಲ. ಶಿಸ್ತು ಮೊದಲೇ ಇಲ್ಲ. ಈ ವ್ಯಕ್ತಿ ಮತ್ತೊಬ್ಬರ ಮೇಲೆ ಗೂಬೆ ಕೂರಿಸಿ ತನ್ನ ಅಪ್ರಾಮಾಣಿಕತೆಯನ್ನು ಮುಚ್ಚಿಕೊಳ್ಳಲು ಸದಾ ಪ್ರಯತ್ನಿಸುತ್ತಾರೆ. ದೇವನೂರು ಮಹಾದೇವ ಎಷ್ಟು ದಲಿತರಿಂದ ಹಣ ಪಡೆದುಕೊಂಡಿದ್ದಾರೆ ಎಂಬುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕು‘ (ಪು 94-95) ಎಂದು ನೇರವಾಗಿ ಬರೆಯುವ ಮುನಿವೆಂಕಟಪ್ಪ ಯಾವುದೇ ಮುಲಾಜುಗಳಿಲ್ಲದೆ ಬರೆದ ಬರಹಗಳು ಇಲ್ಲಿವೆ.
ದಲಿತ ಚಿಂತಕರಲ್ಲಿ ಒಬ್ಬರಾದ ಡಾ.ಮುನಿವೆಂಕಟಪ್ಪ ಇಲ್ಲಿ ಮಾಡಿರುವುದು ಸಾಹಿತ್ಯದ ವಿಮರ್ಶೆಗಿಂತ ಹೆಚ್ಚಾಗಿ ದಲಿತರ ಚಾರಿತ್ರಿಕ ವಿಮರ್ಶೆ. ಇಲ್ಲಿನ ಲೇಖನಗಳಲ್ಲಿ ಮುಖ್ಯವಗಿ ದಲಿತ ಚಳವಳಿ ಹಾಗೂ ಸಾಹಿತ್ಯ ಚರ್ಚೆಯಾಗಿದೆ. ವೆಂಕಟಪ್ಪನವರ ಈ ಚಿಂತನೆಗಳಲ್ಲಿ ಒಂದು ನೈತಿಕವಾದ ಆಕ್ರೋಶ ಇರುವುದನ್ನು ನಾವು ಕಾಣಬಹುದು. ಇದು ಅನೇಕ ದೊಡ್ಡವರು ಎನ್ನಿಸಿಕೊಂಡವರ ತಪ್ಪು ನಿಲುವುಗಳಿಗೆ ಪ್ರತಿಯಾಗಿ ಹುಟ್ಟಿಕೊಂಡ ಸಿಟ್ಟು. ಈ ಸಿಟ್ಟಿನ ಹಿಂದೆ ನೋವು ಇದೆ ಎಂಬುದನ್ನು ಮರೆಯುವಂತಿಲ್ಲ. ಇದಕ್ಕೆ ಉದಾಹರಣೆಯಾಗಿ ಕವಿ ಸಿದ್ದಲಿಂಗಯ್ಯ ಅವರು `ನನ್ನನ್ನು ದಲಿತ ಕವಿ ಎಂದು ಕರೆಯಬೇಡಿ, ಕನ್ನಡದ ಕವಿ ಎಂದು ಕರೆಯಿರಿ ಎಂದು ಕೇಳಿಕೊಂಡಿರುವುದನ್ನು, ದಲಿತರು ತಾವು ನಡೆದುಬಂದ ದಾರಿಯನ್ನು ಹಿಂತಿರುಗಿ ನೋಡಲು ಸಿದ್ಧರಿಲ್ಲದಿರುವುದನ್ನು ತೋರಿದ್ದಾರೆ. (ಪು.28) ಇಂಥ ಅನೇಕ ಸಂದರ್ಭಗಳನ್ನು ಮುನಿವೆಂಕಟಪ್ಪನವರು ಇಲ್ಲಿನ ಪುಟಗಳಲ್ಲಿ ತೆರೆದಿಟ್ಟಿದ್ದಾರೆ. ಇದರೊಂದಿಗೆ ದೇವನೂರು ಮಹದೇವ, ಮೊಗಳ್ಳಿ ಅಂಥವರನ್ನು ಏಕವಚನದಲ್ಲಿ ಕರೆದು ಸಂಯಮ ಕಳೆದುಕೊಳ್ಳುತ್ತಾರೆ.
ಈ ಬಗೆಯ ನೈತಿಕ ಸಿಟ್ಟುಗಳು ಅವರಲ್ಲಿವೆ. ಅಂತಹ ಸಂಗತಿಗಳ ಬಗ್ಗೆ ನೇರವಾಗಿ, ಆಧಾರಸಹಿತವಾಗಿ ಹೇಳಿದ್ದಾರೆ. ಆದರೆ, ಒಂದೆಡೆ (ಮೈಸೂರು ಜಿಲ್ಲೆಯ ದಲಿತ ಬಂಡಾಯ ಸಾಹಿತ್ಯಿಕ ಹಿರಿಮೆ) ಕಥೆಗಾರ ಮೊಗಳ್ಳಿ ಗಣೇಶರ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿದ `ದಲಿತ ಕಥನದ ಬಗ್ಗೆ ಬರೆಯುತ್ತ ಮೊಗಳ್ಳಿವರು ಮಾಡುವ ಸುಳ್ಳು ಉಲ್ಲೇಖಗಳನ್ನು, ಲೇಖಕರ ನಡುವೆ `ಒಬ್ಬರ ಮೇಲೆ ಒಬ್ಬರನ್ನು ಎತ್ತಿಕಟ್ಟುವ, ಸಲ್ಲದ ವಿಚಾರಗಳನ್ನು ಬರೆಯುವ ಸಾಹಿತಿಗಳನ್ನು, ಅಂಥವನ್ನು ಪ್ರಕಟಿಸುವ ವಿಶ್ವವಿದ್ಯಾಲಯದ ಪ್ರಸಾರಾಂಗವನ್ನು ಏನೆಂದು ಕರೆಯಬೇಕು?’ ಎಂದು ಕೇಳಿದ್ದಾರೆ. ಈವರೆಗೆ ಲೇಖಕರ ಪ್ರಶ್ನೆ ಸರಿಯಾಗಿಯೇ ಇದೆ. ಮುಂದುವರಿದು ಅವರು ಮೈಸೂರು ವಿಶ್ವವಿದ್ಯಾಲಯದ ಕಥೆಗಾರ ಮೊಗಳ್ಳಿ ಗಣೇಶರು ಎಂ.ಎ ತರಗತಿಯಲ್ಲಿ ಮೂರನೆಯ ದರ್ಜೆಯಲ್ಲಿ ತೇರ್ಗಡೆಯಾಗಿ ಮತ್ತೊಂದು ಎಂ.ಎ ಗೆ ಸೇರಿ ಪ್ರಥಮ ದರ್ಜೆಯಲ್ಲಿ ಪಾಸಾದುದ್ದನ್ನೂ, ಅನಂತರ ಸಂಶೋಧನೆ ನೆಪದಲ್ಲಿ 12 ವರ್ಷಗಳ ಕಾಲ ಒಂದೇ ಕೊಠಡಿಯಲ್ಲಿ ಉಳಿದುಕೊಂಡುದ್ದನ್ನು, ಮೈಸೂರು ವಿ.ವಿ.ಯಲ್ಲಿ ಓದಲು ಬರುವ ಬಡಹುಡುಗರು ಹಾಸ್ಟೇಲ್ನಲ್ಲಿ ರೂಮಿಗಾಗಿ ಪರದಾಡುತ್ತಿರುವುದನ್ನು ನೋಡಿಯೂ ಮುಜುಗರಕ್ಕೆ ಅವರು ಒಳಗಾಗದಿರವುದನ್ನೂ, `ಆತನನ್ನು ಓಡಿಸಿ ನಿಜವಾದ ಅರ್ಹ ಬಡ ವಿದ್ಯಾರ್ಥಿಗಳಿಗೆ ಆ ಜಾಗ ಸಿಗುವಂತಾಗುವಂತೆ ಮಾಡಲು ಸಾಹಸ ಪಡಬೇಕಾಯಿತುಎಂದು ಬರೆಯುತ್ತಾರೆ. ಮೊಗಳ್ಳಿಯವರ ಕೃತಿಯೊಂದಿಗೆ ಅವರ ಈ ಉಲ್ಲೇಖ ಅಗತ್ಯ ಇತ್ತು ಎಂದು ಅನಿಸುವುದಿಲ್ಲ. ಆದರೂ, ಈ ಪುಸ್ತಕ ಸಾಕಷ್ಟು ಚರ್ಚೆಗಳನ್ನು ದಲಿತ ಸಾಹಿತ್ಯ, ಚಳವಳಿಗಳ ಕುರಿತು ಮಾಡುತ್ತದೆ ಎಂಬುದು ಮಹತ್ವದ ಸಂಗತಿ.
ಶೀರ್ಷಿಕೆ: ದಲಿತ ಚಳವಳಿ ಮತ್ತು ಸಾಹಿತ್ಯ  ಲೇಖಕರು: ಡಾ.ವಿ.ಮುನಿವೆಂಕಟಪ್ಪ ಪ್ರಕಾಶಕರು: ಎಸ್.ಎಸ್.ಪ್ರಕಾಶನ ಪುಟಗಳು:128 ಬೆಲೆ:ರೂ.65/-

ಇಂಡೋನೇಶಿಯಾದ ಎಳೆಯ ಬರಹಗಾರ್ತಿಯ ಸರಳ ಕತೆಗಳು

೧೯೫೨ ರಲ್ಲಿ ದಾವಣಗೆರೆಯಲ್ಲಿ ಡಾ.ರಾಜ್ ಕುಮಾರ್

ವಿದ್ಯುನ್ಮಾನ ಮತಯಂತ್ರ ನಿಮಗಿದು ಗೊತ್ತೇ ?

Electronic Voting machine, ವಿದ್ಯುನ್ಮಾನ ಮತಯಂತ್ರ, ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್,ಭಾರತವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿದ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವತ್ರಿಕ ಚುನಾವಣೆಗಳು ಮಹತ್ತರ ಪಾತ್ರ ವಹಿಸಲಿವೆ. ಕೋಟ್ಯಾಂತರ ಮತದಾರರಿರುವ ನಮ್ಮ ರಾಷ್ಟ್ರದಲ್ಲಿ ಸಾರ್ವತ್ರಿಕ ಚುನಾವಣೆ ನಡಸುವುದು ಹರಸಾಹಸದ ಕೆಲಸ. ಅನಕ್ಷರಸ್ಥ ಮತದಾರರು, ಗುಡ್ಡಗಾಡುಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸುವ ಪರಿಸ್ಥಿತಿ, ತಿರಸ್ಕೃತ ಮತಗಳು, ಅಕ್ರಮ ಮತದಾನ ಹೀಗೆ ಮುಕ್ತ, ನ್ಯಾಯಸಮ್ಮತ, ಸಮರ್ಪಕ ಚುನಾವಣೆ ನಡೆಸುವಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಈ ಎಲ್ಲ ಸವಾಲುಗಳಿಗೆ  ಪರಿಹಾರವೆಂಬಂತೆ ಈಗ ಮತಗಟ್ಟೆಗೆ ಬಂದಿದೆ ವಿದ್ಯುನ್ಮಾನ ಮತಯಂತ್ರ. ಜೀವನದ ಎಲ್ಲ ಕ್ಷೇತ್ರಗಳಲ್ಲೂ ವ್ಯಾಪಿಸಿರುವ ವಿದ್ಯುನ್ಮಾನ ಸಾಧನಗಳು ಈಗ ಮತಗಟ್ಟೆ ಪ್ರವೇಶಿಸಿದೆ. ಈ ವಿದ್ಯುನ್ಮಾನ ಮತಯಂತ್ರದ ಕಾರ್ಯನಿರ್ವಹಣೆಯ ಪರಿಚಯ ಇಲ್ಲಿದೆ.
ಹಿನ್ನೆಲೆ ಮತ್ತು ವಿವರಣೆ:    ನಮ್ಮ ದೇಶದಲ್ಲಿ ೧೯೫೨ ರಿಂದ ೧೯೯೯ರವರೆಗೆ ನಡೆದ ಎಲ್ಲ ಸಾರ್ವತ್ರಿಕ ಚುನಾವಣೆ ಹಾಗೂ ಉಪಚುನಾವಣೆಗಳಲ್ಲಿ ಮತಪತ್ರಗಳ ಮೂಲಕ ಮತದಾನ ಮಾಡುವ ವ್ಯವಸ್ಥೆ ಇತ್ತು. ನಂತರ ನಡೆದ ಕೆಲ ಸಾರ್ವತ್ರಿಕ ಹಾಗೂ ಉಪಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆಯಾದರೂ ೨೦೦೪ರಲ್ಲಿ ಜರುಗಿದ ಲೋಕಸಭಾ ಹಾಗೂ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಸಾರ್ವತ್ರಿಕ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಯಿತು. ಅದೇ ರೀತಿ ಕರ್ನಾಟಕ ರಾಜ್ಯದಲ್ಲಿ ಜರುಗಿದ ೨೦೦೮ರ ವಿಧಾನಸಭಾ ಚುನಾವಣೆಯಲ್ಲಿಯೂ ಈ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಯಿತು. ದೇಶದಾದ್ಯಂತ ಈಗ ೧೫ನೇ ಲೋಕಸಭಾ ಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು, ಈ ಚುನಾವಣೆಯಲ್ಲಿಯೂ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುವುದು. ಅದರಂತೆ ಗುಲಬರ್ಗಾ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಯ  ಮತದಾನ  ೨೦೦೯ರ ಏಪ್ರಿಲ್ ೨೩ ರಂದು ಬೆಳಗಿನ ೭ ರಿಂದ ಸಂಜೆ ೫ ಗಂಟೆಯವರೆಗೆ ನಡೆಯಲಿದೆ. ಗುಲಬರ್ಗಾ ಜಿಲ್ಲೆಯ ೧೩ ವಿಧಾನಸಭಾ ಕ್ಷೇತ್ರಗಳ ಪೈಕಿ ಶಹಾಪೂರ, ಶೋರಾಪೂರ (ಎಸ್.ಟಿ.), ಯಾದಗಿರ ಕ್ಷೇತ್ರಗಳು  ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಹಾಗೂ ಆಳಂದ , ಚಿಂಚೋಳಿ (ಎಸ್.ಸಿ.) ಕ್ಷೇತ್ರಗಳು ಬೀದರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುತ್ತವೆ. ಉಳಿದ ಎಂಟು ಕ್ಷೇತ್ರಗಳು ಗುಲಬರ್ಗಾ ಮೀಸಲು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಟ್ಟಿವೆ.   ಜಿಲ್ಲೆಯ ಮತದಾರರು ಈ ವಿದ್ಯುನ್ಮಾನ ಮತಯಂತ್ರಗಳ ಮಾಹಿತಿ ಪಡೆಯುವುದು ಅತ್ಯಗತ್ಯವಾಗಿದೆ.
          ಎಲೆಕ್ಟ್ರಾನಿಕ್ಸ್ ವೋಟಿಂಗ್ ಮೆಷಿನ್ ಎಂಬ ವಿದ್ಯುನ್ಮಾನ ಮತಯಂತ್ರವು ದೊಡ್ಡದಾದ  ಕ್ಯಾಲ್‌ಕ್ಯೂಲೇಟರ್ ಮಾದರಿಯಲ್ಲಿದೆ. ಬೆಂಗಳೂರಿನ ಬಿ.ಇ.ಎಲ್. ಮತ್ತು ಹೈದ್ರಾಬಾದಿನ ಎಲೆಕ್ಟ್ರಾನಿಕ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ೧೯೮೯-೯೦ರಲ್ಲಿ ರೂಪಿಸಿದ ಈ ವಿದ್ಯುನ್ಮಾನ ಮತಯಂತ್ರ  ಎರಡು ಘಟಕಗಳನ್ನು ಹೊಂದಿರುತ್ತದೆ. ಮತದಾರರು ತಮ್ಮ ಮತ ಚಲಾಯಿಸಲು ಬಳಸುವ ಮತದಾನ ಘಟಕವೇ (ಬ್ಯಾಲೇಟ್ ಯೂನಿಟ್) ಮೊದಲನೇ ಘಟಕ. ಮತಗಟ್ಟೆಯಲ್ಲಿ ಪ್ರಿಸೈಡಿಂಗ್ ಅಧಿಕಾರಿಗಳ ನಿಯಂತ್ರಣದಲ್ಲಿರುವ ನಿಯಂತ್ರಣ ಘಟಕವೇ (ಕಂಟ್ರೋಲ್ ಯೂನಿಟ್) ಎರಡನೆಯದು. ಗುಲಬರ್ಗಾ ಜಿಲ್ಲೆಯಲ್ಲಿ ೨೬೯೮ ಮತಗಟ್ಟೆಗಳಿದ್ದು, ೨೬೯೮ ವಿದ್ಯುನ್ಮಾನ ಮತಯಂತ್ರಗಳ ಅವಶ್ಯಕತೆ ಇದೆ. ಈಗಾಗಲೇ ೩೩೧೦ ಮತಯಂತ್ರಗಳು ಲಭ್ಯವಿದ್ದು, ಇವುಗಳನ್ನು ಮತದಾನ ಕಾರ್ಯಕ್ಕಾಗಿ ಸಜ್ಜುಗೊಳಿಸಲಾಗಿದೆ. ಈ ಪೈಕಿ ಗುಲಬರ್ಗಾ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ೧೬೬೨ ಮತಗಟ್ಟೆಗಳಿದ್ದು, ೧೬೬೨ ವಿದ್ಯುನ್ಮಾನ ಮತಯಂತ್ರಗಳ ಅವಶ್ಯಕತೆಯಿದೆ. ಇದಕ್ಕಾಗಿ ೨೦೩೯ ಮತಯಂತ್ರಗಳನ್ನು ಸಜ್ಜುಗೊಳಿಸಲಾಗಿದೆ.
ಮತದಾನ ಘಟಕ (ಬ್ಯಾಲೆಟ್ ಯೂನಿಟ್):     ಮತದಾನ ಘಟಕದ ನಿರ್ವಹಣೆ ಅತ್ಯಂತ ಸರಳವಾಗಿದೆ. ಆಯತಾಕಾರದ ಹಲಗೆಯ ಮಾದರಿಯಲ್ಲಿರುವ ಈ ಉಪಕರಣದಲ್ಲಿ ಒಟ್ಟು ೧೬ ಉಮೇದುವಾರರ ಹೆಸರು ಮತ್ತು ಅವರಿಗೆ ಚುನಾವಣಾ ಆಯೋಗ ನೀಡಿರುವ ಚಿಹ್ನೆಗಳನ್ನು ದಾಖಲಿಸಿಕೊಳ್ಳಬಹುದು. ಉಮೇದುವಾರರು ೧೬ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಇದರೊಂದಿಗೆ ಇನ್ನೊಂದು ಬ್ಯಾಲೆಟ್ ಯೂನಿಟ್‌ನ್ನು ಸೇರಿಸಿಕೊಳ್ಳಲಾಗುವುದು. ಒಟ್ಟು ನಾಲ್ಕು ಬ್ಯಾಲೆಟ್ ಯೂನಿಟ್‌ಗಳನ್ನು (೬೪ ಉಮೇದುವಾರರಿದ್ದಲ್ಲಿ) ಸೇರಿಸಿಕೊಳ್ಳಬಹುದು.  ಒಂದು ಮತಯಂತ್ರ ಗರಿಷ್ಠ ೩೮೪೦ ಮತಗಳನ್ನು ದಾಖಲಿಸುವ ಸಾಮರ್ಥ್ಯ ಹೊಂದಿದೆ. ಒಂದುವೇಳೆ ಮತಯಂತ್ರ ಮಧ್ಯದಲ್ಲೇ ಕೈಕೊಟ್ಟರೆ ಪರ್ಯಾಯ ಯಂತ್ರವನ್ನು ಬಳಸಲಾಗುತ್ತದೆ. ಅಲ್ಲಿಯವರೆಗೆ ಚಲಾವಣೆಯಾದ ಮತಗಳು ಹಾಳಾದ ಯಂತ್ರದಲ್ಲಿಯೇ ಸುರಕ್ಷಿತವಾಗಿರುತ್ತವೆ. ಈ ಮತಯಂತ್ರಕ್ಕೆ ವಿದ್ಯುತ್ ಬೇಕಿಲ್ಲ. ಆರು ವೋಲ್ಟಿನ ಸಾಮಾನ್ಯ ಬ್ಯಾಟರಿ ಶೆಲ್ ಸಾಕು. ಶೆಲ್ ಮುಗಿದರೆ ಅಥವಾ ಹಾಳಾದರೆ ಮತದಾಖಲೆ ಹೊಂದಿರುವ ಚಿಪ್‌ಗೆ ಯಾವುದೇ ಧಕ್ಕೆ ಆಗುವುದಿಲ್ಲ.   ಪ್ರತಿ ಉಮೇದುವಾರನ ಗುರುತಿನ ಬಲಭಾಗದಲ್ಲಿ ಒಂದು ಒತ್ತುಗುಂಡಿ ಇರುತ್ತದೆ. ಮತದಾರರು ಮತಹಾಕಲು ಬಯಸುವ ಅಭ್ಯರ್ಥಿಯ ಚಿಹ್ನೆ (ಗುರುತು) ಪಕ್ಕದಲ್ಲಿರುವ ನೀಲಿ ಗುಂಡಿಯನ್ನು ಒತ್ತಿದರೆ ಸಾಕು. ಮತದಾರರ ಮತವು ಈ ಬ್ಯಾಲೆಟ್ ಯೂನಿಟ್‌ನಲ್ಲಿ ದಾಖಲಾಗುವುದು.
ಕಂಟ್ರೋಲ್ ಯೂನಿಟ್:    ಉಮೇದುವಾರರ ಕ್ರಮ ಸಂಖ್ಯೆ ಮತ್ತು ದಾಖಲಾದ ಒಟ್ಟು ಮತಗಳನ್ನು ಅಂಕಿಗಳಲ್ಲಿ ತೋರಿಸುವ ವ್ಯವಸ್ಥೆಯನ್ನು ಈ ನಿಯಂತ್ರಣ ಘಟಕ (ಕಂಟ್ರೋಲ್ ಯೂನಿಟ್)ಹೊಂದಿದೆ. ಕಂಟ್ರೋಲ್ ಯೂನಿಟ್ಟಿನ ಕೆಳಭಾಗದಲ್ಲಿ ಯಾರಿಗೆ ಎಷ್ಟು ಮತಗಳು ಲಭಿಸಿವೆ ಎಂದು ತಿಳಿದುಕೊಳ್ಳಲು ಹಾಗೂ ಮತದಾನ ಪ್ರಾರಂಭವಾಗುವ ಮೊದಲು ಬ್ಯಾಲೆಟ್ ಯೂನಿಟ್‌ನಲ್ಲಿ ಯಾರಿಗೂ ಒಂದು ಮತವೂ ದಾಖಲಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಪ್ರತ್ಯೇಕ ಗುಂಡಿಗಳಿವೆ.
ಕಾರ್ಯನಿರ್ವಹಣೆ:ಬ್ಯಾಲೆಟ್ ಯೂನಿಟ್‌ನ್ನು ಕಂಟ್ರೋಲ್ ಯೂನಿಟ್‌ದೊಂದಿಗೆ ಸಂಪರ್ಕ ಕಲ್ಪಿಸಿದ ಬಳಿಕ ಮತಯಂತ್ರ ಕಾರ್ಯನಿರ್ವಹಿಸಲು ಸಿದ್ಧವಾಗಿರುತ್ತದೆ. ಮತದಾನ ಪ್ರಾರಂಭವಾಗುವ ಮೊದಲು ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಕರೆದು ಅವರ ಸಮ್ಮುಖದಲ್ಲಿ ಮತಯಂತ್ರದಲ್ಲಿನ ಕ್ಲಿಯರ್ ಗುಂಡಿ ಒತ್ತಿ ತೋರಿಸಲಾಗುತ್ತದೆ. ಅದುವರೆಗೆ ಯಾವ ಚಿಹ್ನೆಗೂ ಮತದಾನವಾಗಿಲ್ಲವೆಂದು ಖಾತರಿಯಾದ ಮೇಲೆ ಪಕ್ಷದ ಪ್ರತಿನಿಧಿಗಳಿಂದ ಪರಿಶೀಲಿಸಿದ ಬಗ್ಗೆ ಹಾಳೆಯಲ್ಲಿ ಸಹಿ ಪಡೆದು ಈ ಹಾಳೆಯನ್ನು ಕ್ಲಿಯರ್ ಗುಂಡಿಯಿರುವ ಭಾಗದಲ್ಲೇ ಮುಚ್ಚಿಟ್ಟು ಸೀಲ್ ಮಾಡಿದ ನಂತರ ಮತದಾನ ಮಾಡುವ ಪ್ರಕ್ರಿಯೆ ಪ್ರಾರಂಭವಾಗುವುದು.
          ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಅಥವಾ ಭಾರತ ಚುನಾವಣಾ ಆಯೋಗವು ಸೂಚಿಸಿದ  ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಪರಿಶೀಲಿಸಿದ ನಂತರ ನೋಂದಣಿ ಪುಸ್ತಕದಲ್ಲಿ ಸಹಿ ಅಥವಾ ಹೆಬ್ಬೆಟ್ಟು ಒತ್ತಿಸಿಕೊಂಡು ಅವರನ್ನು ಬ್ಯಾಲೆಟ್ ಯೂನಿಟ್ ಇರುವ ಸ್ಥಳಕ್ಕೆ ಕಳುಹಿಸಲಾಗುವುದು. ಮತಗಟ್ಟೆ ಅಧಿಕಾರಿ ತನ್ನ ಬಳಿಯಿರುವ ಕಂಟ್ರೋಲ್ ಯೂನಿಟ್‌ದಲ್ಲಿ ವೋಟ್ ಎಂಬ ಗುಂಡಿ ಒತ್ತಿದ ಕೂಡಲೇ ಬ್ಯಾಲೆಟ್ ಯೂನಿಟ್‌ನಲ್ಲಿ ರೆಡಿ ಎಂದು ಸೂಚಿಸುವ ಹಸಿರು ದೀಪ ಉರಿಯುವುದು. ಮತದಾರರು ಮತಹಾಕಲು ಬ್ಯಾಲೆಟ್ ಯೂನಿಟ್ ಇರುವ ವಿಭಾಗಕ್ಕೆ (ಕಂಪಾರ್ಟ್‌ಮೆಂಟ್) ಹೋದಕೂಡಲೇ ಅಲ್ಲಿರುವ ಮತದಾನ ಯಂತ್ರ (ಬ್ಯಾಲೆಟ್ ಯೂನಿಟ್) ದಲ್ಲಿರುವ ಅಭ್ಯರ್ಥಿಗಳ ಪಟ್ಟಿ ಮೇಲ್ಭಾಗದಲ್ಲಿ ಹಸಿರು ದೀಪ ಉರಿಯುತ್ತಿದೆಯೇ ಎಂಬುದನ್ನು ಪರೀಕ್ಷಿಸಬೇಕು. ಹಸಿರು ದೀಪ ಉರಿಯುತ್ತಿದ್ದಲ್ಲಿ ಸದರಿ ವಿದ್ಯುನ್ಮಾನ ಯಂತ್ರ ಸುಸ್ಥಿಯಲ್ಲಿದ್ದು, ಮತಚಲಾವಣೆಗೆ ಸಿದ್ಧವಾಗಿದೆ ಎಂದು ತಿಳಿಯಬೇಕು. ನಂತರ ತಮಗೆ ಬೇಕಾದ ಅಭ್ಯರ್ಥಿಯ ಹೆಸರಿನ ಮುಂದಿರುವ ಗುರುತಿನ ಚಿತ್ರದೆದುರಿನ ನೀಲಿ ಗುಂಡಿಯನ್ನು ಒತ್ತಬೇಕು. ನೀಲಿ ಗುಂಡಿ ಒತ್ತಿದ ಕೂಡಲೇ ಹಸಿರು ದೀಪ ಆರಿಹೋಗಿ   ಮತದಾರ ಆಯ್ಕೆ ಮಾಡಿದ ಗುರುತಿನ ಬಲಭಾಗದಲ್ಲಿ ಕೆಂಪು ದೀಪ ಉರಿಯುವುದು. ನಂತರ ೧೦ ಸೆಕೆಂಡುಗಳ ಕಾಲ  ಬೀಪ್ ಎಂಬ ಶಬ್ದ ಕೇಳಿಬರುವುದು. ಕೆಂಪು ದೀಪ ಆರಿಹೋಗಿ ಬೀಪ್ ಶಬ್ದವೂ  ನಿಂತುಹೋದರೆ ಆಗ ನಿಮ್ಮ ಮತ ಚಲಾವಣೆಯಾಗಿದೆ ಎಂದು ತಿಳಿಯಬೇಕು. ಬೀಪ್ ಶಬ್ದ ಬಾರದಿದ್ದಲ್ಲಿ ಕೂಡಲೇ ಮತಗಟ್ಟೆ ಅಧಿಕಾರಿಯನ್ನು ಸಂಪರ್ಕಿಸಬೇಕು. ನಂತರ ಸರದಿಯಂತೆ ಇನ್ನೊಬ್ಬ ಮತದಾರರು  ಮತದಾನ ಮಾಡಲು ಹೋಗಬಹುದು. ಒಬ್ಬ ಮತದಾರ ಎಷ್ಟೇ ಗುಂಡಿಗಳನ್ನು ಒತ್ತಿದರೂ ದಾಖಲಾಗುವುದು ಒಂದೇ ಒಂದು ಮತ ಮಾತ್ರ . ಅರ್ಧ ಗಂಟೆಗೊಮ್ಮೆ ಮತದಾರರ ಸಹಿಯನ್ನೊಳಗೊಂಡ ನೋಂದಣಿ ಪುಸ್ತಕದ ಸಂಖ್ಯೆಯನ್ನು ದಾಖಲಾದ ಒಟ್ಟು ಮತಗಳ ಸಂಖ್ಯೆಯನ್ನು ಟೋಟಲ್ ವೋಟ್ಸ್ ಎಂಬ ಗುಂಡಿ ಒತ್ತಿ ತಾಳೆ ನೋಡಿಕೊಳ್ಳಬಹುದು.
ಉಪಯುಕ್ತತೆ:    ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಕಂಟ್ರೋಲ್ ಯೂನಿಟ್‌ನ್ನು ಮಾತ್ರ ಮತ ಎಣಿಕೆ ಕೇಂದ್ರಗಳಿಗೆ ಕೊಂಡೊಯ್ದರೆ ಸಾಕು. ಮತಗಳನ್ನು ತ್ವರಿತವಾಗಿ ಎಣಿಕೆ ಮಾಡಬಹುದು. ಸಾಮಾನ್ಯವಾಗಿ ಮತ ಚೀಟಿಗಳಂತೆ ಕಂಟ್ರೋಲ್ ಯೂನಿಟ್‌ಗಳನ್ನು ಸಹ ೩ ವರ್ಷಗಳಿಗೆ ಭದ್ರಪಡಿಸಬಹುದು. ವಿದ್ಯುನ್ಮಾನ ಮತಯಂತ್ರವು ಅನಕ್ಷರಸ್ಥ ಮತದಾರರಿಗೆ ಒಂದು ವರದಾನವಾಗಿದೆ. ಉಮೇದುವಾರನ ಚಿಹ್ನೆಯ ಪಕ್ಕದಲ್ಲಿರುವ ನೀಲಿ ಗುಂಡಿ ಒತ್ತಲು ಯಾರಿಗೂ ಕಷ್ಟವಾಗದು. ಒಬ್ಬರಿಗೆ ಒಂದೇ ಒಂದು ಮತ ಚಲಾಯಿಸಲು ಅವಕಾಶವಿರುವುದರಿಂದ ಅಕ್ರಮ ಮತದಾನಕ್ಕೆ ಹಾಗೂ ತಿರಸ್ಕೃತ ಮತಗಳಿಗೆ ಅವಕಾಶವಿರುವುದಿಲ್ಲ. ಮುಕ್ತ , ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನ ಕಾರ್ಯಕ್ಕೆ ಈ ವಿದ್ಯುನ್ಮಾನ ಮತಯಂತ್ರಗಳು ನಂಬಿಕೆಗೆ ಅರ್ಹವಾಗಿರುತ್ತವೆ.
ವರದಿ: ಜಿ.ಚಂದ್ರಕಾಂತ,
ಸಹಾಯಕ ನಿರ್ದೇಶಕರು
,ವಾರ್ತಾ ಇಲಾಖೆ, ಗುಲಬರ್ಗಾ

ವಿಶ್ವ ಕಥಾ ಕೋಶ - ನಿರಂಜನ

ಇದು ಜಾಣರ ಸಮಾಚಾರ..

ಬಯಲು ಸೀಮೆಯಿಂದ (ಕೊಪ್ಪಳದಿಂದ ) ಜಾಣರ ಜಿಲ್ಲೆ (ಉಡುಪಿ)ಗೆ ವರ್ಗವಾಗಿ ಬಂದ ‘ಪ್ರಜಾವಾಣಿ’ ವರದಿಗಾರ ಮಂಜುನಾಥ ಭಟ್ ಏನು ಮಾಡಬಹುದು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ . ‘ಪ್ರಜಾವಾಣಿ’ ಪತ್ರಿಕೆಯ ‘ಕರಾವಳಿ’ ಪುಟದಲ್ಲಿ ಎಂಥ ಮಾರಾಯ್ರೆ ….? ಅಂಕಣದ ಮೂಲಕ ಗಮನ ಸೆಳದಿದ್ದಾರೆ.
ಸುಮಾರು ಎಪ್ಪತ್ತೇಳು ವಾರಗಳವರೆಗೂ ನಿರಂತರವಾಗಿ ಹರಿದುಬರುತ್ತಿದ್ದ ಈ ಅಂಕಣ ಬರಹಗಳ ಭಾಷೆ, ಶೈಲಿ, ವಿಚಾರಗಳಿಂದ ಓದುಗರನ್ನು ಸೆರೆಹಿಡಿಯುವುದರಲ್ಲಿ ಯಶಸ್ಸನ್ನು ಗಳಿಸಿದೆ. ಆಯ್ದ ಬರಹಗಳ ಸುಂದರ ಗುಚ್ಛ ಈ ‘ಎಂಥ ಮಾರಾಯ್ರೆ’ ಇದು ಜಾಣರ ಸಮಾಚಾರ.
ಮಂಜುನಾಥ ಭಟ್ ರು ಉಡುಪಿಯಲ್ಲಿ ನೆಲೆಸಿದ್ದಾಗ ಇಲ್ಲಿಯ ವಿದ್ಯಮಾನಗಳಿಗೆ ಕಣ್ಣು ಕಿವಿಗಳನ್ನು ತೆರೆದಿಟ್ಟು ತನ್ನ ಸಹೃದಯೀ ಪ್ರತಿಕ್ರಿಯೆಗಳನ್ನು ಈ ಅಂಕಣಗಳ ಮೂಲಕ ಹೊರಗೆಡಹಿದ್ದಾರೆ. ಇಲ್ಲಿ ಹಾಸ್ಯವಿದೆ, ವಿಡಂಬನೆ ಇದೆ, ಆದೇಶವಿದೆ, ಸಂದೇಶವಿದೆ, ರೋಚಕತೆ ಇದೆ, ರಸಿಕತೆಯೂ ಇದೆ. ಬರಹಗೆಳಿಗೆ ತಮ್ಮ ರೇಖೆಗಳಿಂದ ಜೀವ ತುಂಬಿದ್ದಾರೆ ವ್ಯಂಗ್ಯ ಚಿತ್ರಕಾರ ಜೀವನ್. ಮುಖಪುಟದಲ್ಲಿ ಜೇಮ್ಸ್ ವಾಜ್ ತನ್ನ ಕೈಚಳಕ ತೋರಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ನಾಡಿನ ಖ್ಯಾತ ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆಯ ಮೆಚ್ಚುಗೆಯ ಮುನ್ನುಡಿ ಇದೆ. ಮಂಜುನಾಥ ಭಟ್ ರ ಈ ಚೊಚ್ಚಲ ಸಾಹಸಕ್ಕೆ ಭಲೇ ಎನ್ನಲೇಬೇಕು. ಹೌದು. ನೀವು ಕೊಂಡು ಓದಿ, ಆನಂದಿಸಬಹುದಾದ ಒಳ್ಳೆಯ ಕೃತಿ  ಎಂಥ ಮಾರಾಯ್ರೆ.
-ಕು ಗೋ
ಬೆನ್ನುಡಿಯಿಂದ

"ಮೃತ್ಯುಂಜಯ" "MRUTHYUNJAYA" { Life history of V.D.Savarkar }


ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಮಹಾನ್ ಚೇತನ ಸ್ವಾತಂತ್ರ್ಯವೀರ ಸಾವರ್ಕರ್ ಬಗೆಗಿನ ಒಂದು ಪುಟ್ಟ ಸಾಕ್ಷ್ಯಚಿತ್ರ. ಸಾವರ್ಕರರ ಅದ್ಭುತ ಜೀವನವನ್ನ ಕೇವಲ 6 ನಿಮಿಷಗಳಲ್ಲಿ ವಿವರಿಸುವುದು ಸಮುದ್ರದ ನೀರನ್ನು ಬಿಂದಿಗೆಯಲ್ಲಿ ತುಂಬುವುದು ಎರಡೂ ಒಂದೇ! ಸಿಂಧುವೆಂಬ ಅವರ ಜೀವನವನ್ನು ವಿವರಿಸುವ ಈ ಚಿತ್ರ ಒಂದು ಬಿಂದುವಷ್ಟೇ! ಏಕೆಂದರೆ ಸಾವರಕರರ ಚರಿತ್ರೆ ಎಂದರೆ ಅದೊಂದು ಮಹಾ ಕಾವ್ಯ! ಅವರ ಅಸಾಧ್ಯ ಜೀವನದ ರೋಮಾಂಚನವನ್ನು ಅರಿತೇ ಅನುಭವಿಸಬೇಕು. ಹೀಗಾಗಿ ಸಾವರ್ಕರರ ಜೀವನವನ್ನು ತಿಳಿಯದ ಇಂದಿನ ಪೀಳಿಗೆಯ ಯುವಕರಿಗೆ ಈ ನಮ್ಮ ಕಿರುಚಿತ್ರ ಅವರ ಜೀವನವನ್ನು ಓದಿಕೊಳ್ಳುವಂತೆ ಪ್ರೇರೇಪಿಸಿದರೆ ಅಷ್ಟರ ಮಟ್ಟಿಗೆ ನಮ್ಮ ಪ್ರಯತ್ನ ಸಾರ್ಥಕ. ದೇಶಕ್ಕಾಗಿ ಬದುಕುತ್ತಿರುವ ಎಲ್ಲ ದೇಶಪ್ರೇಮಿಗಳಿಗೆ ಈ ಕಿರುಚಿತ್ರ ರೋಮಾಂಚನವನ್ನು ಮೂಡಿಸಿ ದೇಶದ ಕೆಲಸದಲ್ಲಿ ಮತ್ತಷ್ಟು ಹುರುಪಿನಿದ ಪಾಲ್ಗೊಳ್ಳುವಂತಾದರೆ ಅದೇ ನಮ್ಮ ಭಾಗ್ಯ. ಸಾವರಕರರ ಜ್ಯೋತಿ ಮನೆ - ಮನಗಳನ್ನು ಬೆಳಗಲಿ

Scenes from Sampoorna Ramayana-Kannada Drama-vol 4- Dasharatha in grief

ಕೋಟಿಗಾನಹಳ್ಳಿ ರಾಮಯ್ಯನವರ ಪದ್ಯ

ಬಹುಜನ ಗೀತೆಗಳು: ನಾವು ಕೂಗುವ ಕೂಗು

ಪರಿವರ್ತನ ಗೀತೆಗಳು: ಬಹುಜನ ನಾಯಕ

YAKSHAGANA TENKUTITTU- SHAKUNI

YAKSHAGANA TENKUTITTU- SHAKUNI

108 Names of Shri Krishna - Sri Krsna Astottara Shatanamavali

ಶ್ರೀ ರಾಮ ಅಷ್ಟೋತ್ತರ ಶತನಾಮಾವಳಿ 108 Ram Naam Kannada

KALIYUGADA KUDUKA - 3

ನೋಡಿದ್ರೆ ಗೊತ್ತಾಗಲ್ವೆ

ಅಪ್ಪನ ಟ್ಯೂಷನ್

ಬೀchi-ದಾನ-ಧರ್ಮ-ಗುಂಡಾ ಬಾಗಿಲು

ನರಕದಲ್ಲಿ ಗುರುಗಳು

Heengo attha.part3.of.8

Kannada Drama. Dance Sequence

Ranga Drushyavali-Smt.Bhagya Shree-Kannada mythological drama

Pandavas take oath in presence of Krishna-Smt.Pratibha as Droupadi

Daksha Brahma-Smt.Asha patil as Dakshayini

Ranga geethe by drama master Sri.Kallur Srinivas

Lakshmi Sridhar & Hema as Mandodari & Sita-Prachanda Ravana drama vol-1

Ram Lila, Day 10, Part 1 - Nav Shri Dharmik Committee, Delhi

Lakshmi Sridhar acts as Mandodari-vol3 in Prachanda Ravana Kannada drama

Cine-actress UmaShri-Smt.Padma act as Anjaneya & Sita-vol2 Prachanda Rav...

Cine actress Umashri acts as Anjaneya-Prachanda Ravana Kannada drama vol-1

Cine actress Umashri acts as Anjaneya-Prachanda Ravana Kannada drama vol-1

Smt. Bhagyashree -Kunti-1 taking oath from Karna

Draupadi in anger with Bhima - Lakshmi Sridhar as Droupadi-Kannada drama

Smt. Pratibha - Kunti-3- Kannada Drama- Krishnavijaya

Anitashree as Rukmini in Kannada Drama Krishna Vijaya

Anitashree-Rukmini-2-Krishnavijaya

Rukmini acts as Uttara-Mythological drama

Anitashree as Uttara-Kannada mythological drama

Smt.Pratibha as Draupadi3 in Krishna vijaya Kannada drama

Droupadi prays Krishna-State awardee Smt.Pratibha acts as Droupadi-Mytho...

Scenes from Sampoorna Ramayana-Nirmala & Siddharajaiah as Sita & Rama v...

Ranga geethe in Hindola raga-Hema acts as Rukmini 2

ರಂಗ ಗೀತೆ-ಹೇಮ-ಸೀತೆ-ಪ್ರಚಂಡ ರಾವಣ

Govinda Dasa College(NSS-StreetPlay)

ಬಯ್ಯ ಮಲ್ಲಿಗೆ ..

Vivekananda Speech At chicago in Sept 11, 1893

TP Kailasam Eternal Song - ನಮ್ಮ ತಿಪ್ಪಾರಲ್ಲಿ ಬಲು ದೂರ

ಸದಾರಮೆ ಕಳ್ಳನ ಭಾಗ. Scene 6.

ಸರ್ವಜ್ಞನ ವಚನಗಳು

೧.
ನಂದಿಯನು ಏರಿದನ
ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ
ಮುಂದೆ ಹೇಳುವೆನು ಸರ್ವಜ್ಞ

೨.
ಮುನ್ನ ಕಾಲದಲಿ ಪನ್ನಗಧರನಾಳು
ಎನ್ನೆಯ ಪೆಸರು, ಪುಷ್ಪದತ್ತನು ಎಂದು
ಮನಿಪರು ದಯದಿ ಸರ್ವಜ್ಞ

೩.
ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ
ಮುದವ ಸಾರೆ, ಸರ್ವಜ್ಞನೆಂದೆನಿಸಿ
ನಿಂದವನು ನಾನೆ ಸರ್ವಜ್ಞ

೪.
ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ
ಬಣ್ಣೆಸಿಬರೆದ ಪಟದೊಳಗೆಯಿರುವಾತ
ತಣ್ಣೊಳಗೆ ಇರನೇ ಸರ್ವಜ್ಞ

೫.
ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು
ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ
ಕುಲವನರಸುವರೆ ಸರ್ವಜ್ಞ

೬.
ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ
ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ
ಕುಲವಾವುದಯ್ಯ ಸರ್ವಜ್ಞ

೭.
ಸರ್ವಜ್ಞನೆಂಬುವನು ಗರ್ವದಿಂದಾದವನೆ ?
ಸರ್ವರೊಳಗೊಂದು ನುಡಿಗಲಿತು ವಿದ್ಯೆಯ
ಪರ್ವತವೇ ಆದ ಸರ್ವಜ್ಞ

೮.
ಗುರುವಿನಾ ವಿಸ್ತರದ, ಪರಿಯನಾನೇನೆಂಬೆ
ಮೆರೆವ ಬ್ರಹ್ಮಾಂಡದೊಳಹೊರಗೆ
ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ

೯.
ಊರಿಂಗೆ ದಾರಿಯನು ಆರು ತೋರಿದರೇನು?
ಸಾರಾಯದಾ ನಿಜವ ತೋರುವ ಗುರುವು ತಾ
ನಾರಾದರೇನು? ಸರ್ವಜ್ಞ

೧೦.
ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು
ಪರದೇಶಿಯಂತೆ ಇರುತಿರ್ಪಯೋಗಿಯನು
ಪರಮಗುರುವೆಂಬೆ ಸರ್ವಜ್ಞ

೧೧.
ಹರನಿಚ್ಛೆಯಿಲ್ಲದಲೆ ಹರಿದು ಹೋಗದು ಪಾಪ
ಹರಭಕ್ತಿಯುಳ್ಳ ಗುರುವರನು ಓರ್ವನೇ
ನರ ದೈವವೆಂಬೆ ಸರ್ವಜ್ಞ

೧೨.
ಬಂಧುಗಳು ಆದವರು ಬಂದುಂಡು ಹೋಗುವರು
ಬಂಧನವ ಕಳೆಯಲರಿಯರಾ ಗುರುವಿಗಿಂತ
ಬಂಧುಗಳುಂಟೆ ಸರ್ವಜ್ಞ

೧೩.
ಜೀವ, ಸದ್ಗುರುನಾಥ, ಕಾಯ ಪುಸಿಯನೆ ತೋರಿ
ಮಾಯನಾಶವನು ಹರಿಸುತ್ತ ಶಿಷ್ಯಂಗೆ
ತಾಯಿಯಂತಾದ ಸರ್ವಜ್ಞ

೧೪.
ತಂದೆಗೂ ಗುರುವಿಗೂ ಒಂದು ಅಂತರವುಂಟು
ತಂದೆ ತೋರುವನು ಸದ್ಗುರುವ. ಗುರುರಾಯ
ಬಂಧನವ ಕಳೆವ ಸರ್ವಜ್ಞ

೧೫.
ಗುರುವಿಂಗೆ ದೈವಕ್ಕೆ, ಹಿರಿದು ಅಂತರವುಂಟು
ಗುರುತೋರ್ವ ದೈವದೆಡೆಯನು ದೈವತಾ
ಗುರುವ ತೋರುವನೇ? ಸರ್ವಜ್ಞ

೧೬.
ಗುರುಪಾದಕೆರಗಿದರೆ, ಶಿರಸು ತಾ ಮಣಿಯಕ್ಕು
ಪರಿಣಾಮವಕ್ಕು ಪದವಕ್ಕು ಕೈಲಾಸ
ನೆರಮನೆಯಕ್ಕು ಸರ್ವಜ್ಞ

೧೭.
ಒಂದರೊಳಗೆಲ್ಲವು ಸಂದಿಸುವದನು ಗುರು
ಚಂದದಿಂ ತೋರಿಕೊಡದಿರಲು ಶೊಷ್ಯನವ
ಕೊಂದನೆಂದರಿಗು ಸರ್ವಜ್ಞ

೧೮.
ಲಿಂಗಕ್ಕೆ ಕಡೆ ಎಲ್ಲಿ, ಲಿಂಗದೆಡೆ ಎಲ್ಲಿ
ಲಿಂಗದೊಳು ಜಗವು ಅಡಗಿಹುದು ಲಿಂಗವನು
ಹಿಂಗಿದವರುಂಟೆ? ಸರ್ವಜ್ಞ

೧೯.
ದೆಶಕ್ಕೆ ಸಜ್ಜನನು, ಹಾಸ್ಯಕ್ಕೆ ಹನುಮಂತ
ಕೇಶವನು ಭಕ್ತರೊಳಗೆಲ್ಲ ಮೂರು ಕ
ಣ್ಣೇಶನೆ ದೈವ ಸರ್ವಜ್ಞ

೨೦.
ಉಂಬಳಿಯ ಇದ್ದವನು ಕಂಬಳಿಯ ಹೊದೆಯುವನೇ?
ಶಂಭುವಿರಲಿಕ್ಕೆ ಮತ್ತೊಂದು ದೈವವ
ನಂಬುವನೇ ಹೆಡ್ಡ ಸರ್ವಜ್ಞ

೨೧.
ಅಂಜದಲೆ ಕೊಂಡಿಹರೆ ನಂಜು ಅಮೃತವದಕ್ಕು
ಅಂಜಿ ಅಳುಕುತಲಿ ಕೊಂಡಿಹರೆ, ಅಮೃತವು
ನಂಜಿನಂತಕ್ಕು ಸರ್ವಜ್ಞ

೨೨.
ಎಂಜಲೂ ಅಶೌಚ
ಸಂಜೆಯೆಂದೆನಬೇಡ ಕುಂಜರವು ವನವ ನೆನವಂತೆ ಬಿಡದೆನಿ
ರಂಜನನ ನೆನೆಯೊ ಸರ್ವಜ್ಞ

೨೩.
ಭೂತೇಶಗೆರಗುವನು ಜಾತಿ ಮಾದಿಗನಲ್ಲ
ಜಾತಿಯಲಿ ಹುಟ್ಟಿ ಶಿವನಿಗೆ ಶರಣೆನ್ನ
ದಾತ ಮಾದಿಗನು ಸರ್ವಜ್ಞ

೨೪.
ಕುಲಗೆಟ್ಟವರು ಚಿಂತೆ ಯೊಳಗಿಪ್ಪರಂತಲ್ಲ
ಕುಲಗೆಟ್ಟು ಶಿವನ ಮರೆಹೊಕ್ಕ ಋಷಿಗಳಿಗೆ
ಕುಲಗೋತ್ರವುಂಟೆ? ಸರ್ವಜ್ಞ

೨೫.
ಜಾತಿಹೀನನ ಮನೆಯ ಜ್ಯೊತಿ ತಾ ಹೀನವೆ?
ಜಾತಂಗೆ ಜಾತನೆನಲೇಕೆ? ಅರುವಿಡಿ
ದಾತನೇ ಜಾತ ಸರ್ವಜ್ಞ

೨೬.
ಯಾತರ ಹೂವೇನು ? ನಾತವಿದ್ದರೆ ಸಾಕು
ಜಾತಿಯಲಿ ಜಾತಿಯೆನಬೇಡ ಶಿವನೊಲಿ
ದಾತನೆ ಜಾತ ಸರ್ವಜ್ಞ

೨೭.
ಅಕ್ಕರವು ತರ್ಕಕ್ಕೆ ಲೆಕ್ಕವು ಗಣಿತಕ್ಕೆ
ಮಿಕ್ಕವೋದುಗಳು ತಿರುಪೆಗೆ ಮೋಕ್ಷಕಾ
ರಕ್ಕರವೇ ಸಾಕು ಸರ್ವಜ್ಞ

೨೮.
ಎಲ್ಲರನು ನೆರೆ ಬೇಡಿ, ಹಲ್ಲು ಬಾಯ್ದೆರೆಯುವರೇ?
ಬಲ್ಲಿದಾ ಶಿವನ ಭಜಿಸಿದರೆ ಶಿವ ತಾನು
ಇಲ್ಲೆನ್ನಲರಿಯನು ಸರ್ವಜ್ಞ

೨೯.
ಇಂದ್ರನಾನೆಯನೇರಿ ಒಂದನೂ ಕೊಡಲರಿಯ
ಚಂದ್ರಶೇಖರನು ಮುದಿ ಎತ್ತನೇರಿ ಬೇ
ಕೆಂದುದನು ಕೊಡುವ ಸರ್ವಜ್ಞ

೩೦.
ಸಾರವನು ಬಯಸುವರೆ, ಕ್ಷಾರವನು ಬೆರಿಸುವುದು
ಮಾರಸಂಹರನ ನೆನೆದರೆ ಮೃತ್ಯುವು
ದೂರಕ್ಕೆ ದೂರ ಸರ್ವಜ್ಞ

೩೧.
ಕಾಯ ಕಮಲದ ಸಜ್ಜೆ, ಜೀವರತನುವೆ ಲಿಂಗ
ಭವ ಪುಶ್ಪದಿಂ ಶಿವಪೂಜೆ ಮಾಡುವರ
ದೇವರೆಂದೆಂಬೆ ಸರ್ವಜ್ಞ

೩೨.
ಓದು ವಾದಗಳೇಕೆ, ಗಾದಿಯ ಮಾತೇಕೆ
ವೇದ ಪುರಾಣ ನಿನಗೇಕೆ? ಲಿಂಗದಾ
ಹಾದಿಯರಿದವಗೆ ಸರ್ವಜ್ಞ

೩೩.
ಒಪ್ಪಾದ ನುಡಿಯೇಕೆ? ಪುಷ್ಪವೇರಿಸಲೇಕೆ?
ಅರ್ಪಿತನ ಗೊಡವೆ ತನಗೇಕೆ? ಲಿಂಗದ
ನೆಪ್ಪನರಿದವಗೆ ಸರ್ವಜ್ಞ

೩೪.
ಗಂಗೆ ಗೋದಾವರಿಯು, ತುಂಗಭದ್ರೆಯು ಮತ್ತೆ
ಹಿಂಗದೆ ಮುಳುಗಿ ಫಲವೇನು? ನಿನ್ನಲ್ಲೆ
ಲಿಂಗದರುವಿಲ್ಲ ಸರ್ವಜ್ಞ

೩೫.
ಮೆಟ್ಟಿದಾ ಕಲ್ಲಿಂಗೆ, ಮೊಟ್ಟೆ ಪತ್ರಿಯ ಹಾಕಿ
ಕಟ್ಟಿದಾ ಲಿಂಗ ಅಡಿಮಾಡಿ ಶರಣೆಂಬ
ಭ್ರಷ್ಟನ ಕಂಡ್ಯಾ ? ಸರ್ವಜ್ಞ

೩೬.
ಗುರುವಿಂದ ಬಂಧುಗಳು, ಗುರುವಿಂದ ದೈವಗಳು
ಗುರುವಿಂದಲಿಹುದು ಪುಣ್ಯವದು, ಜಗಕೆಲ್ಲ
ಗುರುವಿಂದ ಮುಕ್ತಿ ಸರ್ವಜ್ಞ

೩೭.
ಶಿವಪೂಜೆ ಮಾಡಿದಡೆ, ಶಿವನ ಕೊಂಡಾಡಿದಡೆ
ಶಿವನಲ್ಲಿ ನೆನೆಹ ನಿಲಿಸಿದಡೆ ಶಿವಲೋಕ
ವವಗೆ ಕಾಣಯ್ಯ ಸರ್ವಜ್ಞ

೩೮.
ನಿಷ್ಠೆ ಇದ್ದಡೆ ಶಿವನು, ಗಟ್ಟಿಗೊಂಡೊಳಗಿರ್ಪ
ನಿಷ್ಠೆಯಿಲ್ಲದಲೆ ಭಜಿಸಿದೊಡೆ ಶಿವನವನ
ಬಿಟ್ಟು ಬಯಲಪ್ಪ ಸರ್ವಜ್ಞ

೩೯.
ಇಟ್ಟಾವಿಭೂತಿ ತಾ ಪಟ್ಟಗಟ್ಟಿರುತಿಕ್ಕು
ಇಟ್ಟಾವಿಭೂತಿಯರಿಯದಿರೆ ಸೀಳಿದಾ
ಬಟ್ಟೆಯಂತಕ್ಕು ಸರ್ವಜ್ಞ

೪೦.
ಲಿಂಗದಲಿ ಮನವಾಗಿ, ಲಿಂಗದಲಿ ನೆನಹಾಗಿ
ಲಿಂಗದಲಿ ನೋಟ, ನುಡಿಕೂಟವಾದವನು
ಲಿಂಗವೇ ಅಕ್ಕು ಸರ್ವಜ್ಞ

೪೧.
ದೇಹಿಯನಬೇಡ, ನಿರ್ದೇಹಿ ಜಂಗಮಲಿಂಗ
ದೇಹ ಗುಣದಾಸೆಯಳಿದೊಡೆ ಆತ ನೀರ್ದೇಹಿ
ಕಾಣಯ್ಯ ಸರ್ವಜ್ಞ

೪೨.
ವಂಶವನು ಪುಗನೆಂದಿ, ಗಾಶಿಸನು ಪರಧನವ
ಸಂಶಯವನಳಿದ ನಿಜಸುಖಿ ಮಹಾತ್ಮನು
ಹಿಂಸೆಗೊಡಬಡನು ಸರ್ವಜ್ಞ

೪೩.
ಅರ್ಪಿತದ ಭೇದವನು
ತಪ್ಪದೆಲೆ ತಿಳಿದಾತ ಸರ್ಪಭುಷಣನ ಸಮನಹನು ನಿಜಸುಖದೋ
ಳೊಪ್ಪುತ್ತಲಿಹನು ಸರ್ವಜ್ಞ

೪೪.
ಭೋಗಿಸುವ ವಸ್ತುಗಳ ಭೋಗಿಸು ಶಿವಗಿತ್ತು
ರಾಗದಿಂ ಸತ್ಯವೆರಸಿಹ ಪ್ರಸಾದಿಯ
ಶ್ರಿ ಗುರುವು ಎಂಬೆ ಸರ್ವಜ್ಞ

೪೫.
ಲಿಂಗವಿರಹಿತನಾಗಿ ನುಂಗದಿರು ಏನುವನು
ತಿಂಗಳಲಿ ಸತ್ತ ಕೊಳೆ ನಾಯಿ ಮಾಂಸವನು
ನುಂಗಿದೆಂತಕ್ಕು ಸರ್ವಜ್ಞ

೪೬.
ಅಂಜದಲೆ ಕೊಂಡಿಹರೆ, ನಂಜು ಅಮೃತವದಕ್ಕು
ಅಂಜಿ, ಅಳುಕುತಲಿ ಕೊಂಡಿಹರೆ ಅಮೃತವು
ನಂಜಿನಂತಕ್ಕು ಸರ್ವಜ್ಞ

೪೭.
ಸಿರಿಯು ಬಂದರೆ ಲೇಸು, ತೀರದ ಜವ್ವನ ಲೇಸು
ಮರಣವಿಲ್ಲದಾ ಮಗಲೇಸು ಲಿಂಗಕ್ಕೆ
ಶರಣುವೆ ಲೇಸು ಸರ್ವಜ್ಞ

೪೮.
ಸೋಕಿಡಾ ಸುಖಂಗಳ
ನೇಕವನು ಶಿವಗಿತ್ತು
ತಾ ಕಿಂಕರತೆಯ ಕೈಕೊಂಡ ಮನುಜನೇ ಲೋಕಕ್ಕೆ ಶರಣ ಸರ್ವಜ್ಞ

೪೯.
ಮಲಯಜದ ಮರದೊಳಗೆ ಸಲೆ ಗಂಧವಿಪ್ಪಂತೆ
ಸುಲಲಿತವು ಆದ ಶರಣರಾಹೃದಯದಲಿ
ನೆಲಸಿಹನು ಶಿವನು ಸರ್ವಜ್ಞ

೫೦.
ಕಿಚ್ಚಿನೊಳು ಸುಘೃತವು, ಒಚ್ಚತದಿ ಕರ್ಪುರವು
ಅಚ್ಚಳಿದು ನಿಜದಿ ನಿಂದಂತೆ, ಭೇದವನು
ಮುಚ್ಚುವನೆ ಶರಣ ಸರ್ವಜ್ಞ

ಹಳೆಯದೊಂದು ಹಿಂದಿ ಸಿನಿಮಾ ಹಾಗೂ ಬಿಹಾರದ ಘಟನೆ

ಭಯೋತ್ಪಾದನೆಗೆ ಧರ್ಮ ಇಲ್ಲ ಅಲ್ಲವೇ?

ಮೂಡಲಿ ಪುಸ್ತಕ ಪ್ರೀತಿ

ದಲಿತರ ‘ಇಂಗ್ಲಿಷ್ ದೇವತೆ’ ಮಂದಿರಕ್ಕೆ ತಡೆ

ಲಕ್ನೊ, ಅ.30: ಉತ್ತರ ಪ್ರದೇಶದ ಲಖೀಮ್‌ಪುರ ಖೇರಿ ಜಿಲ್ಲೆಯ ಬಂಕಾ ಗ್ರಾಮದ ದಲಿತರು ‘ಇಂಗ್ಲಿಷ್ ದೇವತೆ’ಗೆ ನಿರ್ಮಿಸಿರುವ ದೇವಸ್ಥಾನ ಇದೀಗ ಸಮಸ್ಯೆಯನ್ನು ಎದುರಿಸುತ್ತಿದೆ. ಇಂಗ್ಲಿಷ್ ದೇವತೆಯ ದೇವಸ್ಥಾನ ನಿರ್ಮಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಇಲ್ಲಿನ ಪ್ರಸ್ತುತ ಮಂದಿರ ನಿರ್ಮಾಣಕ್ಕೆ ಸ್ಥಳೀಯ ಪೊಲೀಸರು ಅಡ್ಡಿ ಪಡಿಸಿದ್ದಾರೆ. ಪ್ರಸ್ತುತ ಮಂದಿರದ ಕಾಮಗಾರಿಯನ್ನು ತಕ್ಷಣವೇ ನಿಲ್ಲಿಸುವಂತೆ ಅವರು ಸೂಚಿಸಿದ್ದಾರೆ.
‘‘ಸ್ಥಳೀಯ ಉಚೌಲಿಯ ಪೊಲೀಸ್ ಠಾಣಾ ಮುಖ್ಯಸ್ಥರು ಕಟ್ಟಡದ ಕಾಮಗಾರಿಯನ್ನು ನಿಲ್ಲಿಸುವಂತೆ ಆದೇಶಿಸಿದ್ದಾರೆ. ಆಡಳಿತದ ಪೂರ್ವ ಅನುಮತಿ ಪಡೆಯದೆ ಯಾವುದೇ ಆರಾಧನಾ ಮಂದಿರವನ್ನು ನಿರ್ಮಿಸದಿರುವಂತೆ ಸುಪ್ರೀಂ ಕೋರ್ಟ್ ಆದೇಶ ಇರುವುದರಿಂದ ಪ್ರಸ್ತುತ ಮಂದಿರದ ಕಾಮಗಾರಿಯನ್ನು ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ’’ ಎಂದು ಚಂದ್ರಬಾನ್ ಪ್ರಸಾದ್ ಹೇಳಿದ್ದಾರೆ.
ಪೊಲೀಸರು ತಿಳಿಸಿರುವ ಸುಪ್ರೀಂ ಕೋರ್ಟ್ ಆದೇಶ, ಸಾರ್ವಜನಿಕ ಸ್ಥಳಗಳಿಗೆ ಸಂಬಂಧಿಸಿದ್ದಾಗಿದೆ. ಆದಾಗ್ಯೂ ಪ್ರಸ್ತುತ ಮಂದಿರವನ್ನು ಖಾಸಗಿ ಆಸ್ತಿಯಲ್ಲಿ ನಿರ್ಮಿಸಲಾಗುತ್ತಿದೆ. ನಳಂದ ಪಬ್ಲಿಕ್ ಶಿಕ್ಷಾ ನಿಕೇತನ್ ನಡೆಸುವ ಚಾಂದ್ ಜುಹಾರ್‌ಗೆ ಸೇರಿದ ಕ್ಯಾಂಪಸ್‌ನಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ ಎಂದು ಚಂದ್ರಬಾನ್ ಪ್ರಸಾದ್ ತಿಳಿಸಿದ್ದಾರೆ.
ಲಖೀಂಪುರ ಪೊಲೀಸರ ಪ್ರಕ್ರಿಯೆಯು ಜನರ ಪ್ರಜಾಪ್ರಭುತ್ವದ ಹಕ್ಕುಗಳ ಮೇಲೆ ನಡೆಸಿರುವ ದಾಳಿಯಾಗಿದೆ. ತಕ್ಷಣವೇ ನಿಷೇಧವನ್ನು ಹಿಂದಕ್ಕೆ ಪಡೆಯದಿದ್ದರೆ, ತಾವು ನ್ಯಾಯಾಲಯದ ಮೆಟ್ಟಿಲೇರುವುದಾಗಿ ಚಂದ್ರಬಾನ್ ಪ್ರಸಾದ್ ಎಚ್ಚರಿಸಿದ್ದಾರೆ.
‘‘ದೇವಸ್ಥಾನದ ನಿರ್ಮಾಣ ತಡೆಗೆ ಕಾರಣಗಳೇನು? ಸ್ಥಳೀಯ ದೂರುಗಳೇನಾದರೂ ಇವೆಯಾ ಎಂದು ನಾವು ಪರಿಶೀಲಿಸುತ್ತೇವೆ’’ ಎಂದೂ ಪ್ರಸಾದ್ ತಿಳಿಸಿದರು.
‘‘20 ಕಿ.ಮೀ. ಸುತ್ತಮುತ್ತಲಲ್ಲಿ ಸುಮಾರು ಮೂರು ಶಾಲೆಗಳಿವೆ. ಆ ಶಾಲೆಗಳಲ್ಲಿ ಸರಸ್ವತಿಯ ಪ್ರತಿಮೆಗಳಿವೆ. ಆದರೆ ಇನ್ನೊಂದು ಶಾಲೆಯಲ್ಲಿ ಮಂದಿರ ನಿರ್ಮಾಣವನ್ನು ತಡೆಯುವುದು ದುರದಷ್ಟಕರ’’ ಎಂದು ಪ್ರಸಾದ್ ಅಭಿಪ್ರಾಯ ಪಟ್ಟಿದ್ದಾರೆ.
ಆದಾಗ್ಯೂ ಈ ಆರೋಪಗಳನ್ನು ತಳ್ಳಿ ಹಾಕಿರುವ ಪಸ್ಗಾವನ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರವಿ ಶ್ರೀವಾಸ್ತವ, ಕಟ್ಟಡ ನಿರ್ಮಾಣಕ್ಕೆ ತಡೆಯೊಡ್ಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಗೋ ಹತ್ಯೆ ಬಗ್ಗೆ ಸಾವರ್ಕರ್ ಉವಾಚ

ಪಶುವನ್ನು ದೇವರೆಂದು ಹೇಳಿದರೂ ದೇವರನ್ನೇ ಪಶುಗಿಂತಲೂ ಹೀನವಾಗಿ ಕಾಣಲಾಗಿದೆ. ಹಸುವಿನ ಶರೀರದಲ್ಲಿ 33 ಕೋಟಿ ದೇವತೆ ಗಳಿದ್ದಾರೆಂದು ಬಣ್ಣಿಸಿ, ಅದರ ಗಂಜಲ, ಸಗಣಿ ವಿಸರ್ಜನೆ ಯಾಗುವ ಸ್ಥಳಗಳಲ್ಲಿಯೂ ದೇವರನ್ನು ಸ್ಥಾಪಿಸಲಾಗಿದೆ! ಕಟುಕನು ದನವನ್ನು ಒಂದೇ ಹೊಡೆತಕ್ಕೆ ಕೊಲ್ಲುವಾಗ ಆ ದೇವತೆಗಳಲ್ಲಿ ಒಬ್ಬನಾದರೂ ಕಟುಕನನ್ನು ಏಕೆ ತಡೆಯುವುದಿಲ್ಲ? ಆ ದೇವರೂ ಭಕ್ತರಂತೆ ಹೇಡಿಯೇ? ಕಟುಕನೇ 33 ಕೋಟಿ ದೇವತೆಗಳಿಗಿಂತ ಪರಾಕ್ರಮಿಯೆ?
ಕರ್ನಾಟಕ ಸರಕಾರವು ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಕುರಿತ ಮಸೂದೆಯನ್ನು ಮಂಡಿಸಿ ವ್ಯಾಪಕವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಹಿಂದಕ್ಕೆ ಪಡೆದು ಮತ್ತೆ ಮಂಡಿಸಿದೆ. ಮತಧರ್ಮನಿರಪೇಕ್ಷ ಸಂವಿಧಾನವನ್ನು ಒಪ್ಪಿರುವ ನಾವು ಗೋಹತ್ಯೆಯಂಥ ಧಾರ್ಮಿಕ ಮತ್ತು ಭಾವನಾತ್ಮಕ ವಿಷಯವನ್ನು ವೈಚಾರಿಕ ನಿಕಷಕ್ಕೆ ಒಡ್ಡಬೇಕು. ಈ ನಿಟ್ಟಿನಲ್ಲಿ ಹಿಂದೂರಾಷ್ಟ್ರ ಪ್ರತಿಪಾದಕರಾಗಿದ್ದ ವಿನಾಯಕ ದಾಮೋದರ ಸಾವರ್ಕರ್ ಅವರ ಗೋವಿನ ಕುರಿತ ವಿಚಾರಗಳು ಗಮನಾರ್ಹ (‘ಆಕಳು ಒಂದು ಉಪಯುಕ್ತ ಪ್ರಾಣಿ, ಮಾತೆಯಲ್ಲ, ದೇವತೆಯಂತೂ ಅಲ್ಲವೇ ಅಲ್ಲ’- ಮಹಾರಾಷ್ಟ್ರ ಶಾರದಾ, ಎಪ್ರಿಲ್ 1935)
‘‘ಹಸು, ಎತ್ತುಗಳನ್ನು ಪೂಜಿಸುವುದು ಹಿಂದೂ ಧರ್ಮಕ್ಕೆ ವಿಶಿಷ್ಟವಾದ ಸಂಗತಿ ಯಲ್ಲ. ಪ್ರಪಂಚದ ವಿವಿಧ ಕಡೆ ಜೀವಸಷ್ಟಿಗೆ ಕಾರಣವಾದ ಪುರುಷ ಮತ್ತು ಸ್ತ್ರೀ ಅವಯವಗಳ ಪ್ರತೀಕಗಳಾಗಿ ವಷಭ ಮತ್ತು ಗೋವಿನ ಪೂಜೆ ನಡೆಯುತ್ತಿತ್ತು.’’‘‘ನಾನು ಕಂಡ ಹಲವು ಪ್ರಾಮಾಣಿಕ, ಶ್ರೇಷ್ಠ, ಸಭ್ಯ ಗೋಭಕ್ತರು ಗೋಮಾತೆಯ ಗಂಜಲ ಮತ್ತು ಸಗಣಿಗಳಿಗೆ ಬ್ರಹ್ಮವಾದದ ಆಧಾರ ನೀಡಿ ಪಂಚಗವ್ಯ ಸೇವಿಸುತ್ತಾರೆ. ಗಂಜಲವನ್ನು ದೇವಾಲಯದಲ್ಲಿ ಸಿಂಪಡಿಸುತ್ತಾರೆ. ಆದರೆ ಅವರಿಗಿಂತಲೂ ಪ್ರಜ್ಞಾವಂತರಾದ ಡಾ ಅಂಬೇಡ್ಕರ್‌ರಂಥ ಶುದ್ಧ ಮತ್ತು ಪೂರ್ವಾಸ್ಪಶರ ಕೈಯಿಂದ ನಿರ್ಮಲ ಗಂಗೋದಕ ಕುಡಿಯುವುದಿಲ್ಲ! ಅದು ಮೈಗೆ ಸಿಂಪಡಿಸಿದರೂ ಮೈಲಿಗೆಯಾಯಿತೆಂದು ಸ್ನಾನ ಮಾಡುತ್ತಾರೆ.’’
‘‘ಹಸು ದೇವತೆ ಎಂದೂ ಹಾಗೆಯೇ ವರಾಹಾವತಾರಿಯಾದ ದೇವರು ಹಂದಿ ಎಂದು ಪುರಾಣ ಹೇಳುತ್ತದೆ. ಹೀಗಿರುವಾಗ ಗೋರಕ್ಷಣೆಯೇ ಏಕೆ ಬೇಕು? ಹಂದಿ ರಕ್ಷಣೆ ಸಂಘವನ್ನು ಸ್ಥಾಪಿಸಿ ಹಂದಿಪೂಜೆಯನ್ನೇಕೆ ಬಳಕೆಗೆ ತರಬಾರದು? ಮನುಷ್ಯನು ಎಲ್ಲ ರೀತಿಯಿಂದ ತನಗಿಂತ ಹೀನಗುಣವಿರುವ ಪಶುವನ್ನು ದೇವರೆಂದು ಒಪ್ಪುವುದರಿಂದ ಮನುಷ್ಯನನ್ನೇ ಪಶುವಿಗಿಂತಲೂ ಕೀಳೆಂದು ಒಪ್ಪಿ ಮಾನವೀಯತೆಯನ್ನು ಗೌಣಗೊಳಿಸಿದಂತಾಗುತ್ತದೆ.’’
‘‘ಮನುಷ್ಯ ಎಲ್ಲ ದಷ್ಟಿಯಿಂದ ತನಗಿಂತಲೂ ಸರ್ವಶ್ರೇಷ್ಠವಾದ ಪ್ರತೀಕವನ್ನು ಮಾತ್ರ ದೇವರೆಂದು ಸ್ವೀಕರಿಸಬೇಕು. ಕತ್ತೆ ಬೇಕಾದರೆ ಗೋವನ್ನು ತನಗಿಂತ ಶ್ರೇಷ್ಠ ಎಂದು ಸ್ವೀಕರಿಸಲಿ. ಆದರೆ ಮನುಷ್ಯ ಹಾಗೆ ಮಾಡುವುದು ಮೂರ್ಖತನ.’’‘‘ಇಂದಿನ ಪರಿಸ್ಥಿತಿಯಲ್ಲಿ ಅರ್ವಾಚೀನ ಮತ್ತು ಪ್ರಯೋಗಸಿದ್ಧ ವಿಜ್ಞಾನವೇ ನಮ್ಮ ರಾಷ್ಟ್ರದ ವೇದವಾಗಬೇಕು.
ಈ ಪ್ರವತ್ತಿಗೆ ಗೋಪೂಜೆ ಹೊಂದಿಕೆಯಾಗದಿದ್ದರೆ ಅದನ್ನು ಬಿಡಬೇಕು. ಇಂಥ ಮೂರ್ಖತನಕ್ಕೆ ಧರ್ಮ ಎಂದು ಪುರಾಣಗಳು ಹೇಳಿರುವುದಕ್ಕೆ ತಲೆದೂಗಿದರೆ ರಾಷ್ಟ್ರದ ಸರ್ವನಾಶ ಖಂಡಿತ. ಗೋಪೂಜೆಯಿಂದ ಆಗುವ ಲಾಭಕ್ಕಿಂತ ಹಾನಿ ಅತ್ಯಂತ ಘಾತುಕ. ಒಂದು ವೇಳೆ ಗೋಹತ್ಯೆ ನಡೆದರೂ ಅಡ್ಡಿಯಿಲ್ಲ. ರಾಷ್ಟ್ರದ ಬುದ್ಧಿಹತ್ಯೆ ಮಾತ್ರ ಆಗಬಾರದು.
ಹಸು ಮತ್ತು ಎತ್ತು ನಮ್ಮ ಕಷಿಪ್ರಧಾನ ರಾಷ್ಟ್ರಕ್ಕೆ ಉಪಯುಕ್ತ ಪ್ರಾಣಿಗಳು ಎಂದು ಆ ಪ್ರಾಣಿಗಳನ್ನು ಎಷ್ಟು ಬೇಕೊ ಅಷ್ಟು ಬಳಸಿದರೆ ಸಾಕು. ಅದರ ಬದಲು ಅದು ದೇವತೆ, ಪುರಾಣದಲ್ಲಿ ಅದನ್ನು ಪೂಜಿಸುವುದನ್ನು ಧರ್ಮ ಎಂದು ಹೇಳಿದೆ ಎಂದು ಬೊಗಳೆ ಬಿಟ್ಟರೆ ರಾಷ್ಟ್ರಕ್ಕೆ ನೂರುಪಟ್ಟು ಹಾನಿಯಾಗುತ್ತದೆ. ಅಲ್ಪ ಲಾಭಕ್ಕಾಗಿ ಹೆಚ್ಚಿನದನ್ನು ಕಳೆದುಕೊಳ್ಳುತ್ತೇವೆ.’’
‘‘ಪಶುವನ್ನು ದೇವರೆಂದು ಹೇಳಿದರೂ ದೇವರನ್ನೇ ಪಶುಗಿಂತಲೂ ಹೀನವಾಗಿ ಕಾಣಲಾಗಿದೆ. ಹಸುವಿನ ಶರೀರದಲ್ಲಿ 33 ಕೋಟಿ ದೇವತೆಗಳಿದ್ದಾರೆಂದು ಬಣ್ಣಿಸಿ, ಅದರ ಗಂಜಲ, ಸಗಣಿ ವಿಸರ್ಜನೆಯಾಗುವ ಸ್ಥಳಗಳಲ್ಲಿಯೂ ದೇವರನ್ನು ಸ್ಥಾಪಿಸಲಾಗಿದೆ! ಕಟುಕನು ದನವನ್ನು ಒಂದೇ ಹೊಡೆತಕ್ಕೆ ಕೊಲ್ಲುವಾಗ ಆ ದೇವತೆಗಳಲ್ಲಿ ಒಬ್ಬನಾದರೂ ಕಟುಕನನ್ನು ಏಕೆ ತಡೆಯುವುದಿಲ್ಲ? ಆ ದೇವರೂ ಭಕ್ತರಂತೆ ಹೇಡಿಯೇ? ಕಟುಕನೇ 33 ಕೋಟಿ ದೇವತೆಗಳಿಗಿಂತ ಪರಾಕ್ರಮಿಯೆ?’’‘‘ ಹಸು ಮಹಾಮಾತೆಯಾಗಿರುವವನೇ ಹಿಂದೂ ಎನ್ನುವುದು ಹಿಂದುತ್ವಕ್ಕೆ ಮಾಡುವ ಅಪಮಾನ. ಹಸು ಕರುವಿಗೆ ಮಾತ್ರ ತಾಯಿ, ಹಿಂದೂಗಳಿಗಲ್ಲ.
‘ಗೋರಕ್ಷಣೆಯೇ ಧರ್ಮ’, ‘ಸ್ವಧರ್ಮೇ ನಿಧನಂ ಶ್ರೇಯಃ’ ಎಂದಾಗ ವಿವೇಕ, ಬುದ್ಧಿ ಸಂಪೂರ್ಣ ಕುರುಡಾಗಿ ಪ್ರಜ್ಞೆ ತಪ್ಪಿದ ಅನುಭವವಾಗುತ್ತದೆ.’’‘‘ಇಂಥ ಅನಾಗರಿಕ ಮತ್ತು ಮೂರ್ಖ ಸಂಸ್ಕಾರಕ್ಕೆ ತಿಲಾಂಜಲಿ ನೀಡುವುದೇ ನಮ್ಮ ಧರ್ಮ ಮತ್ತು ಸಂಸ್ಕತಿಗೆ ಶೋಭಿಸುವ ಮಾರ್ಗ. ಇಂದಿನ ವೈಜ್ಞಾನಿಕ ಯುಗದಲ್ಲಿ ಗೋರಕ್ಷಣೆಯ ದಷ್ಟಿಯಿಂದ ಹಸುವನ್ನು ದೇವತೆ ಎಂದು ಒಪ್ಪುವುದು ಮೂರ್ಖತನ. ಗೋರಕ್ಷಣೆಗೆ ಧಾರ್ಮಿಕ ಸ್ವರೂಪ ಬಿಟ್ಟು ಆರ್ಥಿಕ, ವೈಜ್ಞಾನಿಕ ಸ್ವರೂಪ ನೀಡುವುದು ಉಚಿತ. ಹಸು ಎತ್ತುಗಳನ್ನು ದೇವರೆಂದು ತೋರಿಸುತ್ತ ತಿರುಗುವ ಗೋಭಕ್ತನನ್ನು ತಡೆದು ಎತ್ತನ್ನು ನೊಗಕ್ಕೆ ಹೂಡಬೇಕು; ಅವನನ್ನು ದೇಶಸೇವೆಗೆ ದುಡಿಸಬೇಕು’’ (ಸಾವರ್ಕರ್: ಒಂದು ಅಭಿನವ ದರ್ಶನ, ಅನುವಾದ: ಚಂದ್ರಕಾಂತ ಪೋಕಳೆ ಬೆಳಗಾವಿ 2009 ಪು.27-37).
ಸಾವರಕರ್, ಗೋರಕ್ಷಣೆಯ ಹುಚ್ಚುತನದಂತೆ ಧಾರ್ಮಿಕ ನಂಬಿಕೆಯ ಗೋಭಕ್ಷಣೆಯ ಕ್ರೌರ್ಯವನ್ನೂ ಖಂಡಿಸಿದ್ದಾರೆ. ಆದುದರಿಂದ ಸರಕಾರ ಗೋರಕ್ಷಣೆಯ ಮಸೂದೆಯನ್ನು ಹಿಂದಕ್ಕೆ ಪಡೆದು ಅದರ ಬಗ್ಗೆ ಮತಧರ್ಮ ನಿರಪೇಕ್ಷ ಪ್ರಜಾಪ್ರಭುತ್ವದ ಗೌರವಕ್ಕೆ ಸಲ್ಲುವಂತೆ ವ್ಯಾಪಕವಾದ ವೈಚಾರಿಕ, ವೈಜ್ಞಾನಿಕ ಸಾರ್ವಜನಿಕ ಚರ್ಚೆ ನಡೆಸುವುದು ಅಗತ್ಯ.

*ಡಾ ಪಂಡಿತಾರಾಧ್ಯ ಕನ್ನಡ ಪ್ರಾಧ್ಯಾಪಕ,ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಮಾನಸಗಂಗೋತ್ರಿ ಮೈಸೂರು

ಅರಿವು ಅದ್ಯಯನ ಕೂಟ ಮಣ್ಣೆ ಚಿಣ್ಣರ ಘಟಕದಲ್ಲಿ ಹೊಸ ವರ್ಷದ ಸಂಬ್ರಮದ ಒಂದು ಕಿರು ನೋಟ


ಜನಗಣತಿ-೧೧ ಮೊದಲ ಬಾರಿಗೆ ಹಿಜಿಡಾಗಳ ಗಣತಿ