ಪುಟಗಳು

ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಕೊಳ್ಳಿರಿ



Kannada Book Fair 2012
 
ಬೆಂಗಳೂರು, ಜ.5: ಕನ್ನಡ ಪುಸ್ತಕ ಪ್ರಾಧಿಕಾರ ಜ.5ರಿಂದ 8ರವರೆಗೆ ನಗರದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ವಿಶೇಷ ರಿಯಾಯಿತಿ ಪುಸ್ತಕ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಗುರುವಾರ ಬೆಳಗ್ಗೆ 11ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತ ಮನು ಬಳಿಗಾರ್ ಪುಸ್ತಕ ಮೇಳ ಉದ್ಘಾಟಿಸಿದರು. ಪ್ರಾಧಿಕಾರ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ ಉಪಸ್ಥಿತರಿದ್ದರು.

ಮೇಳ ನಡೆಯುವ ಪ್ರತಿದಿನ ಬೆಳಗ್ಗೆ 10:30ರಿಂದ ರಾತ್ರಿ 8ರವರೆಗೆ ಸಾರ್ವಜನಿಕರಿಗೆ ಪ್ರವೇಶವಿರುತ್ತದೆ. ರಾಜ್ಯದ 70 ಪ್ರಕಾಶನ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಿದ್ದಾರೆ. ಮೇಳದಲ್ಲಿ 68ಕ್ಕೂ ಅಧಿಕ ಮಳಿಗೆ ಇದೆ.

ಎಲ್ಲ ಪ್ರಕಾಶಕರು ಕನಿಷ್ಠ ಶೇ.25ರಷ್ಟು ರಿಯಾಯಿತಿ ನೀಡುವುದು ಕಡ್ಡಾಯ ಎಂದು ನಿಯಮ ಮಾಡಲಾಗಿದೆ. ಕೆಲವು ವಿ.ವಿ.ಗಳ ಪ್ರಸರಾಂಗಗಳು ಮತ್ತು ಸಂಸ್ಥೆಗಳು ಶೇ.50ರಷ್ಟು ರಿಯಾಯಿತಿಯನ್ನು ನೀಡಲು ಮುಂದೆ ಬಂದಿವೆ.

ಕಳೆದ ವರ್ಷ ನಡೆದ ವಿಶೇಷ ರಿಯಾಯಿತಿ ಪುಸ್ತಕ ಮೇಳದಲ್ಲಿ ಒಂದು ಕೋಟಿ ರೂ.ಗಳಿಗೂ ಹೆಚ್ಚಿನ ವ್ಯವಹಾರವಾಗಿದೆ. ಒಟ್ಟು 6 ಪುಸ್ತಕ ಮೇಳಗಳನ್ನು ನಡೆಸಲಾಗಿದೆ ಎಂದು ಸಿದ್ದಲಿಂಗಯ್ಯ ಹೇಳಿದರು.