ಪುಟಗಳು

ರಾಜ್,ವಿಷ್ಣು,ಅಂಬಿ ಧ್ವನಿ ಅನುಕರಣೆ( ಮಿಮಿಕ್ರಿ ದಯಾನಂದ್)

pranesh comedy part 1...Comments are most Welcome

Ninnavanu Ravi belagere3

ಕನ್ನಡ ಕನ್ನಡಿಗರ ಬದುಕಿನ ಭಾಷೆ ಆಗಬೇಕು.

ಕರ್ನಾಟಕದಲ್ಲಿ ಕನ್ನಡಿಗನಾಗಿರು

ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶದ ಸಮಯದಲ್ಲಿ ಕ.ರ.ವೇ. ಅಧ್ಯಕ್ಷರಾದ ಟಿ.ಏ. ನಾರಾಯಣ ಗೌಡರು ಮಾಡಿದ ಭಾಷಣ

ಕರ್ನಾಟಕ ರಕ್ಷಣಾ ವೇದಿಕೆ

ನಾಚಿಕೆಯಿಂದ ತಲೆತಗ್ಗಿಸುವ ದಿನ

ಡಿಸೆಂಬರ‍್ 6, 1992.
ತಮ್ಮ ಜಾತ್ಯಾತೀತ ಸಂವಿಧಾನದ ಬಗ್ಗೆ ಹೆಮ್ಮೆ ಪಡುವಂತಹ ಭಾರತೀಯರೆಲ್ಲರೂ ನಾಚಿಕೆಯಿಂದ ತಲೆತಗ್ಗಿಸುವ ದಿನ. ಈ ದಿನದಂದು ಭಾರತೀಯರ ಹೆಮ್ಮೆಯ ಜಾತ್ಯಾತೀತ, ಪ್ರಜಾಪ್ರಭುತ್ವ ಹಾಗೂ ಸಂವಿಧಾನ ನಿಷ್ಟೆಯ ಮಹಾ ಗೋಪುರಗಳು ನೆಲಕಚ್ಚಿದ ದಿನ.
ರೇಡಿಯೋ ಅಂಗಡಿಯಿಂದ ಆಕಸ್ಮಿತವಾಗಿ ವ್ಯಂಗ್ಯಲೋಕಕ್ಕೆ ಜಿಗಿದ ಪಿ. ಮಹಮ್ಮದ್ ಇಂದು ನಮ್ಮೊಂದಿಗಿನ ಅತ್ಯುತ್ತಮ ವ್ಯಂಗ್ಯಚಿತ್ರಕಾರರಲ್ಲೊಬ್ಬರು. ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರಿಯ ಮಹಮ್ಮದ್ ಇಂದು ಪರಿಚಿತ ಹೆಸರು. `ಸಂಯುಕ್ತ ಕರ್ನಾಟಕ’, `ಮುಂಗಾರು’ ಪತ್ರಿಕೆಗಳಲ್ಲಿ ವ್ಯಂಗ್ಯಚಿತ್ರಕಾರರಾಗಿ ದುಡಿದಿರುವ ಮಹಮ್ಮದ್  ಖ್ಯಾತ ಆಂಗ್ಲ ದೈನಿಕ `ಹಿಂದುಸ್ತಾನ್ ಟೈಮ್ಸ್’ನ ಪ್ರತಿಷ್ಟಿತ ವ್ಯಂಗ್ಯಚಿತ್ರ ಪ್ರಶಸ್ತಿಯನ್ನು ಕರ್ನಾಟಕಕ್ಕೆ 3 ಬಾರಿ ತಂದುಕೊಟ್ಟ ಹೆಮ್ಮೆ ಇವರದ್ದು. ಹೆಸರಾಂತ ವ್ಯಂಗ್ಯಚಿತ್ರಕಾರ ಆರ‍್.ಕೆ.ಲಕ್ಷ್ಮಣರ ರೇಖೆಗಳಿಗೆ ಮಾರುಹೋದ ಇವರು ಸದಾ ಸಮಾಜದ ನೋವಿಗೆ ಸ್ಪಂದಿಸಿದರು. ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಹಿಡಿದು ಅಯೊದ್ಯೆಯವರೆಗೆ ಇವರ ಬತ್ತಳಿಕೆಯಲ್ಲಿ ಹಲವು ವ್ಯಂಗ್ಯಬಾಣಗಳು.
ಕೋಮುವಾದ ತನ್ನ ಕರಾಳ ಹಸ್ತಗಳನ್ನು ಎಲ್ಲೆಡೆ ಚಾಚುತ್ತಿರುವುದನ್ನು ಕಂಡ ಖ್ಯಾತ ವ್ಯಂಗ್ಯಚಿತ್ರಕಾರ ಅಬಿದ್ ಸುರ್ತಿ `ನನ್ನ ಜೋಳಿಗೆಯಲ್ಲಿ ಇನ್ನು ವ್ಯಂಗ್ಯದ ಬಾಣಗಳಿಲ್ಲ’ ಎಂದು ಕಣ್ಣೀರಿಟ್ಟರು. ಅಂತೆಯೇ ಪಿ. ಮಹಮ್ಮದ್ ವ್ಯಂಗ್ಯರೇಖೆಗಳಲ್ಲಿ ಕಂಡ ವಿಷಾದದ ಚಿತ್ರಗಳು ಈ ಪುಸ್ತಕದಲ್ಲಿವೆ.
-ಪುಸ್ತಕದ ಬೆನ್ನುಡಿಯಿಂದ
ಶೀರ್ಷಿಕೆ: ಅಯೊಧ್ಯಾ ಕಣೀರ ಕಾಂಡ ಕಲಾವಿದರು:ಪಿ. ಮಹಮ್ಮದ್ ಪ್ರಕಾಶಕರು:ಜನಸ್ನೇಹ ಪ್ರಕಾಶನ ಪುಟ:28 ಮೊದಲ ಮುದ್ರಣ:1993 ಬೆಲೆ:ರೂ.3/-