ಈ ಕೆಳಗಿನ ಕೊಂಡಿಯನ್ನು ಅನುಸರಿಸಿ : -
http://www.karnataka.gov.in/dpal/pdf_files/LAND%20REFORMS%20ACT-Page-533-667%20(OK)%20(BM).pdf
ಇದು ಜಾಣರ ಸಮಾಚಾರ..
ಬಯಲು ಸೀಮೆಯಿಂದ (ಕೊಪ್ಪಳದಿಂದ ) ಜಾಣರ ಜಿಲ್ಲೆ (ಉಡುಪಿ)ಗೆ ವರ್ಗವಾಗಿ ಬಂದ ‘ಪ್ರಜಾವಾಣಿ’ ವರದಿಗಾರ ಮಂಜುನಾಥ ಭಟ್ ಏನು ಮಾಡಬಹುದು? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ . ‘ಪ್ರಜಾವಾಣಿ’ ಪತ್ರಿಕೆಯ ‘ಕರಾವಳಿ’ ಪುಟದಲ್ಲಿ ಎಂಥ ಮಾರಾಯ್ರೆ ….? ಅಂಕಣದ ಮೂಲಕ ಗಮನ ಸೆಳದಿದ್ದಾರೆ.
ಸುಮಾರು ಎಪ್ಪತ್ತೇಳು ವಾರಗಳವರೆಗೂ ನಿರಂತರವಾಗಿ ಹರಿದುಬರುತ್ತಿದ್ದ ಈ ಅಂಕಣ ಬರಹಗಳ ಭಾಷೆ, ಶೈಲಿ, ವಿಚಾರಗಳಿಂದ ಓದುಗರನ್ನು ಸೆರೆಹಿಡಿಯುವುದರಲ್ಲಿ ಯಶಸ್ಸನ್ನು ಗಳಿಸಿದೆ. ಆಯ್ದ ಬರಹಗಳ ಸುಂದರ ಗುಚ್ಛ ಈ ‘ಎಂಥ ಮಾರಾಯ್ರೆ’ ಇದು ಜಾಣರ ಸಮಾಚಾರ.
ಮಂಜುನಾಥ ಭಟ್ ರು ಉಡುಪಿಯಲ್ಲಿ ನೆಲೆಸಿದ್ದಾಗ ಇಲ್ಲಿಯ ವಿದ್ಯಮಾನಗಳಿಗೆ ಕಣ್ಣು ಕಿವಿಗಳನ್ನು ತೆರೆದಿಟ್ಟು ತನ್ನ ಸಹೃದಯೀ ಪ್ರತಿಕ್ರಿಯೆಗಳನ್ನು ಈ ಅಂಕಣಗಳ ಮೂಲಕ ಹೊರಗೆಡಹಿದ್ದಾರೆ. ಇಲ್ಲಿ ಹಾಸ್ಯವಿದೆ, ವಿಡಂಬನೆ ಇದೆ, ಆದೇಶವಿದೆ, ಸಂದೇಶವಿದೆ, ರೋಚಕತೆ ಇದೆ, ರಸಿಕತೆಯೂ ಇದೆ. ಬರಹಗೆಳಿಗೆ ತಮ್ಮ ರೇಖೆಗಳಿಂದ ಜೀವ ತುಂಬಿದ್ದಾರೆ ವ್ಯಂಗ್ಯ ಚಿತ್ರಕಾರ ಜೀವನ್. ಮುಖಪುಟದಲ್ಲಿ ಜೇಮ್ಸ್ ವಾಜ್ ತನ್ನ ಕೈಚಳಕ ತೋರಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ನಾಡಿನ ಖ್ಯಾತ ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆಯ ಮೆಚ್ಚುಗೆಯ ಮುನ್ನುಡಿ ಇದೆ. ಮಂಜುನಾಥ ಭಟ್ ರ ಈ ಚೊಚ್ಚಲ ಸಾಹಸಕ್ಕೆ ಭಲೇ ಎನ್ನಲೇಬೇಕು. ಹೌದು. ನೀವು ಕೊಂಡು ಓದಿ, ಆನಂದಿಸಬಹುದಾದ ಒಳ್ಳೆಯ ಕೃತಿ ಎಂಥ ಮಾರಾಯ್ರೆ.
-ಕು ಗೋ
ಬೆನ್ನುಡಿಯಿಂದ
ಸುಮಾರು ಎಪ್ಪತ್ತೇಳು ವಾರಗಳವರೆಗೂ ನಿರಂತರವಾಗಿ ಹರಿದುಬರುತ್ತಿದ್ದ ಈ ಅಂಕಣ ಬರಹಗಳ ಭಾಷೆ, ಶೈಲಿ, ವಿಚಾರಗಳಿಂದ ಓದುಗರನ್ನು ಸೆರೆಹಿಡಿಯುವುದರಲ್ಲಿ ಯಶಸ್ಸನ್ನು ಗಳಿಸಿದೆ. ಆಯ್ದ ಬರಹಗಳ ಸುಂದರ ಗುಚ್ಛ ಈ ‘ಎಂಥ ಮಾರಾಯ್ರೆ’ ಇದು ಜಾಣರ ಸಮಾಚಾರ.
ಮಂಜುನಾಥ ಭಟ್ ರು ಉಡುಪಿಯಲ್ಲಿ ನೆಲೆಸಿದ್ದಾಗ ಇಲ್ಲಿಯ ವಿದ್ಯಮಾನಗಳಿಗೆ ಕಣ್ಣು ಕಿವಿಗಳನ್ನು ತೆರೆದಿಟ್ಟು ತನ್ನ ಸಹೃದಯೀ ಪ್ರತಿಕ್ರಿಯೆಗಳನ್ನು ಈ ಅಂಕಣಗಳ ಮೂಲಕ ಹೊರಗೆಡಹಿದ್ದಾರೆ. ಇಲ್ಲಿ ಹಾಸ್ಯವಿದೆ, ವಿಡಂಬನೆ ಇದೆ, ಆದೇಶವಿದೆ, ಸಂದೇಶವಿದೆ, ರೋಚಕತೆ ಇದೆ, ರಸಿಕತೆಯೂ ಇದೆ. ಬರಹಗೆಳಿಗೆ ತಮ್ಮ ರೇಖೆಗಳಿಂದ ಜೀವ ತುಂಬಿದ್ದಾರೆ ವ್ಯಂಗ್ಯ ಚಿತ್ರಕಾರ ಜೀವನ್. ಮುಖಪುಟದಲ್ಲಿ ಜೇಮ್ಸ್ ವಾಜ್ ತನ್ನ ಕೈಚಳಕ ತೋರಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ನಾಡಿನ ಖ್ಯಾತ ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆಯ ಮೆಚ್ಚುಗೆಯ ಮುನ್ನುಡಿ ಇದೆ. ಮಂಜುನಾಥ ಭಟ್ ರ ಈ ಚೊಚ್ಚಲ ಸಾಹಸಕ್ಕೆ ಭಲೇ ಎನ್ನಲೇಬೇಕು. ಹೌದು. ನೀವು ಕೊಂಡು ಓದಿ, ಆನಂದಿಸಬಹುದಾದ ಒಳ್ಳೆಯ ಕೃತಿ ಎಂಥ ಮಾರಾಯ್ರೆ.
-ಕು ಗೋ
ಬೆನ್ನುಡಿಯಿಂದ
"ಮೃತ್ಯುಂಜಯ" "MRUTHYUNJAYA" { Life history of V.D.Savarkar }
ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಮಹಾನ್ ಚೇತನ ಸ್ವಾತಂತ್ರ್ಯವೀರ ಸಾವರ್ಕರ್ ಬಗೆಗಿನ ಒಂದು ಪುಟ್ಟ ಸಾಕ್ಷ್ಯಚಿತ್ರ. ಸಾವರ್ಕರರ ಅದ್ಭುತ ಜೀವನವನ್ನ ಕೇವಲ 6 ನಿಮಿಷಗಳಲ್ಲಿ ವಿವರಿಸುವುದು ಸಮುದ್ರದ ನೀರನ್ನು ಬಿಂದಿಗೆಯಲ್ಲಿ ತುಂಬುವುದು ಎರಡೂ ಒಂದೇ! ಸಿಂಧುವೆಂಬ ಅವರ ಜೀವನವನ್ನು ವಿವರಿಸುವ ಈ ಚಿತ್ರ ಒಂದು ಬಿಂದುವಷ್ಟೇ! ಏಕೆಂದರೆ ಸಾವರಕರರ ಚರಿತ್ರೆ ಎಂದರೆ ಅದೊಂದು ಮಹಾ ಕಾವ್ಯ! ಅವರ ಅಸಾಧ್ಯ ಜೀವನದ ರೋಮಾಂಚನವನ್ನು ಅರಿತೇ ಅನುಭವಿಸಬೇಕು. ಹೀಗಾಗಿ ಸಾವರ್ಕರರ ಜೀವನವನ್ನು ತಿಳಿಯದ ಇಂದಿನ ಪೀಳಿಗೆಯ ಯುವಕರಿಗೆ ಈ ನಮ್ಮ ಕಿರುಚಿತ್ರ ಅವರ ಜೀವನವನ್ನು ಓದಿಕೊಳ್ಳುವಂತೆ ಪ್ರೇರೇಪಿಸಿದರೆ ಅಷ್ಟರ ಮಟ್ಟಿಗೆ ನಮ್ಮ ಪ್ರಯತ್ನ ಸಾರ್ಥಕ. ದೇಶಕ್ಕಾಗಿ ಬದುಕುತ್ತಿರುವ ಎಲ್ಲ ದೇಶಪ್ರೇಮಿಗಳಿಗೆ ಈ ಕಿರುಚಿತ್ರ ರೋಮಾಂಚನವನ್ನು ಮೂಡಿಸಿ ದೇಶದ ಕೆಲಸದಲ್ಲಿ ಮತ್ತಷ್ಟು ಹುರುಪಿನಿದ ಪಾಲ್ಗೊಳ್ಳುವಂತಾದರೆ ಅದೇ ನಮ್ಮ ಭಾಗ್ಯ. ಸಾವರಕರರ ಜ್ಯೋತಿ ಮನೆ - ಮನಗಳನ್ನು ಬೆಳಗಲಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)