ಪುಟಗಳು

‘ದುರ್ಗಾಸ್ತಮಾನ’ ಮತ್ತು ‘ಗಂಡುಗಲಿ ಮದಕರಿ ನಾಯಕ’

-  ಶ್ಯಾಮಲ ಜನಾರ್ದನನ್
ದುರ್ಗಾಸ್ತಮಾನದ ಮುನ್ನುಡಿಯಲ್ಲೇ ಲೇಖಕ ದಿವಂಗತ ಶ್ರೀ ತರಾಸು ಬರೆದಿರುವ “ಚಿತ್ರದುರ್ಗ ಎಂದರೆ ತಮ್ಮ ಕರುಳಿಗೆ ಕಟ್ಟಿಕೊಂಡು ಬೆಳೆದ ಜೀವಂತ ವಸ್ತು – ಮದಕರಿ ನಾಯಕ ಒಬ್ಬ ಅರಸನಲ್ಲ ಜೀವಂತ ಆಪ್ತನೆಂಟ. ಚಿತ್ರದುರ್ಗ – ಮದಕರಿನಾಯಕ ಬೇರೆ ಬೇರೆಯಲ್ಲ ಒಂದೇ ಎಂಬ ಅವಿನಾಭಾವ, ದುರ್ಗ ಎಂದರೆ ಮದಕರಿ, ಮದಕರಿ ಎಂದರೆ ದುರ್ಗ ” ಎಂಬ ಮಾತುಗಳು ಅತ್ಯಂತ ಪ್ರಭಾವೀ ವಾಕ್ಯಗಳಾಗಿ, ನಾವು ಪುಸ್ತಕ ಓದಲು ತೊಡಗುವ ಮೊದಲೇ ನಮ್ಮ ಮನಸ್ಸನ್ನು ದುರ್ಗ-ಮದಕರಿ ಎಂಬ ಮೋಡಿಯಲ್ಲಿ ಸಿಲುಕಿಸುತ್ತದೆ.
ನಾಯಕವಂಶದಲ್ಲಿ ಹಲವಾರು ಮದಕರಿನಾಯಕರುಗಳಿದ್ದರೂ, ಜನತೆ ಈಗಲೂ ತುಂಬಾ ಅಭಿಮಾನದಿಂದ ದುರ್ಗ – ಮದಕರಿ ಎಂದರೆ ನೆನಪಿಸಿಕೊಳ್ಳುವುದು, ಈ ಕಥೆಯ ನಾಯಕ, ಕೊನೆಯ ಪಾಳೆಯಗಾರ / ಅರಸ ಚಿಕ್ಕ ಮದಕರಿನಾಯಕರನ್ನೇ !! ಈ ನಮ್ಮ ಅಭಿಮಾನಕ್ಕೆ ಕಾರಣನಾದ ಮದಕರಿನಾಯಕ ಅತಿ ಸಾಹಸಿ, ಅತಿಕ್ರೂರಿ, ಅತಿಮದಾಂಧ, ಅತಿಕಾಮಿ ಮತ್ತು ದೈವಕೃಪೆ, ಗುರುವಿನ ಅನುಗ್ರಹ ಎರಡನ್ನೂ ಕಳೆದುಕೊಂಡಿದ್ದ ನತದೃಷ್ಟ ಎಂದು ಚಿತ್ರದುರ್ಗ ಸಂಸ್ಥಾನದ ಚಪ್ಪೇ ಚಾವಡಿ ದಳವಾಯಿಗಳ ನೇರ ವಂಶಸ್ಥರಾದ, ಭದ್ರಾವತಿಯ ಉಕ್ಕಿನ ಕಾರ್ಖಾನೆಯ ನಿವೃತ್ತ ವರ್ಕ್ಸ್ ಮ್ಯಾನೇಜರ್ ಶ್ರೀ ಸಿ ಪರಶುರಾಮನಾಯಕ್ ರವರು ಹೇಳಿದ್ದನ್ನೂ, ಈ ಕೃತಿ “ದುರ್ಗಾಸ್ತಮಾನ” ಬರೆಯಲು ಸ್ಫೂರ್ತಿಯಾದದ್ದನ್ನೂ ಲೇಖಕರು ಸ್ಮರಿಸಿದ್ದಾರೆ.
ದುರ್ಗಾಸ್ತಮಾನವನ್ನು ಅನೇಕ ಸಂಶೋಧನೆಗಳು, ಮುದ್ರಣ ರೂಪದಲ್ಲಿ ಪ್ರಕಟವಾಗಿಲ್ಲದ ಶ್ರೀ ಚಿಕ್ಕೇರೂರು ಗೋವಿಂದಾಚಾರ್ಯರು ಬರೆದ ಹರಪನಹಳ್ಳಿ ಪಾಳೆಯಗಾರರ ಚರಿತ್ರೆಯ ಹಸ್ತಪ್ರತಿಯನ್ನು ಆಧರಿಸಿ ಬರೆಯಲಾಗಿದೆ. ಚಿತ್ರದುರ್ಗದ ಇತಿಹಾಸಕ್ಕೆ ಸಂಬಂಧಪಟ್ಟ ಮತ್ತು ಲಭ್ಯವಿದ್ದ ಎಲ್ಲಾ ದಾಖಲೆಗಳನ್ನೂ ಚೆನ್ನಾಗಿ ಅಧ್ಯಯನ ಮಾಡಿದ ನಂತರವೇ ಶ್ರೀ ತರಾಸುರವರು ಕಾದಂಬರಿ ಬರೆದಿದ್ದಾರೆ.
ತರಾಸುರವರು, ಅತ್ಯಂತ ಕಾಳಜಿಯಿಂದ, ಎಲ್ಲಾ ಅಧ್ಯಯನಗಳನ್ನೂ ಮಾಡಿ, ಸಂಗ್ರಹಕ್ಕೆಲ್ಲಾ ಆಧಾರ ತೋರಿಸಿಯೇ ದುರ್ಗಾಸ್ತಮಾನದಲ್ಲಿ ದೊರೆ ಮದಕರಿ ನಾಯಕನನ್ನು ಮೆಚ್ಚಬೇಕಾದ ಶೂರ ಎಂದೇ ಚಿತ್ರಿಸಿದ್ದಾರೆ. ದುರಂತ ಕಾದಂಬರಿಗೆ ಅರ್ಹನಾದ ಧೀರೋದ್ಧಾತ ನಾಯಕ ಎನ್ನುವಂತೆಯೂ ಚಿತ್ರಿಸಿದ್ದಾರೆ. ತನ್ನ ದುರ್ಗದ ಜನರೇ ತನಗೆ ದ್ರೋಹ ಮಾಡಿ, ಹೈದರಾಲಿಯ ಸೇನೆ ಕೋಟೆ ಮುತ್ತಿದಾಗ, ವೀರಾವೇಶದಿಂದ ಕಾದಾಡುತ್ತಾ, ಕೊನೆಯ ಉಸಿರು, ಒಡಲು ಬಿಡುವ ಮುನ್ನ ಮದಕರಿ, ಹೈದರನ ಧ್ವಜ ಸ್ಥಂಭವನ್ನು ಹೊಡೆದುರಿಳಿಸಿದ್ದನ್ನು ಓದುವಾಗ, ರೋಮಾಂಚನದಿಂದ ಮೈ ನವಿರೇಳುತ್ತದೆ. ಹೈದರಾಲಿಯ ಕಡೆಯವರ ಹತ್ತಾರು ಗುಂಡುಗಳು ಮದಕರಿಯನ್ನು ಹೊಡೆದುರುಳಿಸಿದಾಗ, ದುರ್ಗದ ಗಂಡುಗಲಿ ವೀರ ಮದಕರಿನಾಯಕ ತನ್ನ ಪ್ರಾಣಪ್ರಿಯವಾದ ದುರ್ಗದ ಮಣ್ಣಿಗೆ ರಕ್ತ ತರ್ಪಣ ನೀಡುತ್ತಾ, ಕೋಟೆಯ ಮೇಲಿಂದ ಕೆಳಗುರುಳುತ್ತಾನೆ. ಮತ್ತೇಳುವುದಿಲ್ಲ – ಅಲ್ಲಿಗೆ ದುರ್ಗದ ಇತಿಹಾಸದಲ್ಲಿ ಪ್ರಜ್ವಲಿಸುವ ಸೂರ್ಯ ಅಸ್ತನಾಗಿದ್ದ, ದುರ್ಗಾಸ್ತಮಾನವಾಗಿ ಹೋಗುತ್ತದೆ, ಆ ಕ್ಷಣ.

ರಣಬಯಲಿನಲ್ಲಿ ಪರಶುರಾಮನಾಯಕನ ಧ್ವನಿ ಅಣ್ಣಾ….ಅಣ್ಣಾ…………. ಮದಕೇರಣ್ಣಾ…….. ಎಂದು ಕೂಗಿಕೊಂಡು ಪ್ರೇತದಂತೆ ಅಲೆಯುವಾಗ, ದುರ್ಗವೇ ಹಂಬಲಿಸಿ ತನ್ನ ದೊರೆಯನ್ನು ಕರೆಯುವಂತಿರುವಾಗ, ಎಲ್ಲವನ್ನೂ ನುಂಗಿ ದುರ್ಗವನ್ನು ಕತ್ತಲಾವರಿಸುತ್ತದೆ ಮತ್ತೆ ಹಗಲಾಗುವುದಿಲ್ಲ.
೬೯೬ ಪುಟಗಳ ಪುಸ್ತಕವನ್ನು ಓದಿ ಮುಗಿಸಿದಾಗ, ನಮ್ಮ ಮನ:ಪಟಲದಲ್ಲಿ ಓಡುತ್ತಿದ್ದ ದೃಶ್ಯಗಳು ಒಮ್ಮೆಲೇ ಕಡಿವಾಣ ಹಾಕಿ ನಿಲ್ಲಿಸಿದ ಕುದುರೆಯಂತಾಗುತ್ತದೆ. ಪರಶುರಾಮ ನಾಯಕರ ಧ್ವನಿ ಅನುಸರಿಸಿ, ನಮ್ಮ ಮನಸ್ಸೂ ಹಂಬಲಿಸಿ ಕೂಗುತ್ತಿರುತ್ತದೆ. ದುರ್ಗದ ವೈಭವ, ಮದಕರಿ ನಾಯಕನ ಧೀಮಂತ ವ್ಯಕ್ತಿತ್ವ ನಮ್ಮನ್ನು ಪೂರ್ತಿಯಾಗಿ ಆವರಿಸಿಕೊಂಡು ಬಿಡುತ್ತದೆ. ಅರಿವು ಬೇಕೆಂದರೂ ಮನವು ಗುಂಗಿನಿಂದ ಹೊರಬರಲು ನಿರಾಕರಿಸುತ್ತದೆ. ಆರಂಭದಿಂದ ಅಂತ್ಯದವರೆಗೂ ನಡೆದ ಐತಿಹಾಸಿಕ ಘಟನೆಗಳ ವಿವರಣೆ, ಅರಮನೆ – ಗುರುಮನೆಯ ಅವಿನಾಭಾವ ಸಂಬಂಧ, ಯುದ್ಧದ ಚಿತ್ರಣ, ಎಲ್ಲವೂ ಶ್ರೀ ತರಾಸುರವರ ಪದಗಳ ಪ್ರಯೋಗ ಮತ್ತು ಭಾಷೆಯ ಸೊಗಡಿನಲ್ಲಿ ನಮ್ಮನ್ನು ಬಂಧಿಸಿಬಿಡುತ್ತದೆ.
ದುರ್ಗಾಸ್ತಮಾನ ನನ್ನ ಅತ್ಯಂತ ಮೆಚ್ಚಿನ ಮೇರು ಕೃತಿ. ಮೇರು ಪರ್ವತದಷ್ಟೇ ಎತ್ತರವಾದದ್ದು ಮತ್ತು ತನಗೆ ತಾನೇ ಸಾಟಿಯಾದ ಉತ್ಕೃಷ್ಟ ಕಾದಂಬರಿ. ಎಷ್ಟು ಸಾರಿ ಓದಿದರೂ ಮತ್ತೆ ಮತ್ತೆ ಓದಬೇಕೆಂಬ ಹಂಬಲ ಹುಟ್ಟಿಸುವಂಥದ್ದು.
ಶ್ರೀ ಬಿ ಎಲ್ ವೇಣುರವರ ಗಂಡುಗಲಿ ಮದಕರಿ ನಾಯಕ ಐದನೇ ಮುದ್ರಣ ಕಂಡಿರುವ ಕೃತಿ. ನಾಲ್ಕನೇ ಮುದ್ರಣದ ಪ್ರತಿಗಳು ಮುಗಿದು ೬ ವರ್ಷಗಳ ನಂತರ ಮರು ಮುದ್ರಣ ಕಂಡ ಪುಸ್ತಕ. ಇವರೂ ಕೂಡ ಕೊನೆಯ ಅರಸ ಮದಕರಿ ನಾಯಕರ ಚಿತ್ರಣವನ್ನು ಮಹಾ ಪರಾಕ್ರಮಿ, ಚಿತ್ರದುರ್ಗದ ಸ್ವಾಭಿಮಾನದ ಸಂಕೇತ ಎಂದೇ ಚಿತ್ರಿಸಿದ್ದಾರೆ.
ಈ ಪುಸ್ತಕದಲ್ಲಿ ಲೇಖಕರು ಮದಕರಿ ನಾಯಕರ ವಿವಾಹ ತರೀಕೆರೆಯ ಲಕ್ಷ್ಮೀಸಿರಿವಂತಿಯೊಂದಿಗೆ ಆದ ಪ್ರಸ್ತಾಪ ಮಾಡುತ್ತಾರಾದರೂ, ಅರಸನ ಪ್ರೇಮಕ್ಕೂ ಹೃದಯಕ್ಕೂ ಒಡತಿಯಾಗಿ ಪದ್ಮವ್ವೆನಾಗತಿ ಚಿತ್ರಿತವಾಗುತ್ತಾಳೆ. ಆದರೆ ಇಲ್ಲಿ ಗುಡಿಕೋಟೆಯ ಪಾಳೆಯಗಾರ ಮುಮ್ಮಡಿ ಜಟಂಗಿನಾಯಕರ ಮಗಳು ಪದ್ಮವ್ವೆನಾಗತಿಯೊಂದಿಗಿನ ವಿವಾಹ ಮಾತ್ರ ಉಲ್ಲೇಖವಾಗುತ್ತದೆ. ತರಾಸುರವರ ದುರ್ಗಾಸ್ತಮಾನದಲ್ಲಿ ಪದ್ಮವ್ವೆಯ ಜೊತೆ, ಜರಿಮಲೆಯ ಇಮ್ಮಡಿ ಬೊಮ್ಮನಾಯಕರ ಮಗಳು ಬಂಗಾರವ್ವನೊಡನೆಯೂ, ಒಟ್ಟಿಗೇ ವಿವಾಹವಾದ ಪ್ರಸ್ತುತಿಯಿದೆ. ಎಲ್ಲಕ್ಕಿಂತ ಹೆಚ್ಚಾಗಿ ಪ್ರಧಾನಿ ಕಳ್ಳಿ ನರಸಪ್ಪನವರನ್ನು ನಾಯಕರ ವಿರುದ್ಧ ದ್ರೋಹವೆಸಗಿದಂತೆಯೂ, ರಾಜದ್ರೋಹಿಯಾಗಿಯೂ, ಚಿತ್ರಿಸಲಾಗಿದೆ. ಕಳ್ಳಿ ನರಸಪ್ಪ ಹೈದರನ ಸೇನೆ ಸೇರಿ, ಚಿತ್ರದುರ್ಗದ ಕೋಟೆಯ ಬಲಹೀನ ಜಾಗಗಳ ವಿಷಯ, ಕಳ್ಳಗಿಂಡಿಯ ಸುದ್ದಿ ಎಲ್ಲವನ್ನೂ ಬಹಿರಂಗಗೊಳಿಸಿದ್ದರಿಂದ, ಹೈದರಾಲಿ ಮದಕರಿನಾಯಕರನ್ನು ಸೋಲಿಸಲು ಸಾಧ್ಯವಾಯಿತೆಂದು ಬರೆದಿದ್ದಾರೆ. ಆದರೆ ದುರ್ಗಾಸ್ತಮಾನದಲ್ಲಿ ಲೇಖಕರು ಇದು ತಪ್ಪು ಅಭಿಪ್ರಾಯ, ನರಸಪ್ಪನವರು ಅಂತಹವರಲ್ಲವೆಂದೂ, ದಾಖಲೆಗಳು ಹಾಗೆ ಹೇಳುವುದಿಲ್ಲವೆಂದೂ ಹೇಳಿದ್ದಾರೆ. ಯುದ್ಧಾನಂತರ ಅಂದರೆ ಚಿತ್ರದುರ್ಗದ ಅವಸಾನದ ನಂತರ ಹೈದರಲಿ “ಕಳ್ಳಿ ನರಸಪ್ಪಯ್ಯ ಎಂಬಾತನಿಗೆ ದುರ್ಗದಲ್ಲಿ ಒಂದು ಅಧಿಕಾರ ಕೊಟ್ಟ” ಎಂದು ಮಾತ್ರ ಉಲ್ಲೇಖವಿದೆಯೇ ಹೊರತು ಅವರನ್ನು ದ್ರೋಹಿ ಎಂದು ಎಲ್ಲೂ ಯಾವ ಕಡತದಲ್ಲೂ ಹೇಳಿಲ್ಲವೆಂದೂ ಹೇಳುತ್ತಾರೆ. ಮುಂದುವರೆದು ದುರ್ಗಾಸ್ತಮಾನದಲ್ಲಿ ತೀರ್ಥಯಾತ್ರೆಗೆ ತೆರಳಿದ್ದ ಕಳ್ಳಿ ನರಸಪ್ಪಯ್ಯ ಮತ್ತು ಅವರ ಸಂಸಾರ, ಹೈದರಾಲಿಯ ಕೈಗೆ ಸೆರೆ ಸಿಕ್ಕಾಗ, ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ಚಿತ್ರಿಸಿದ್ದಾರೆ. ಗಂಡುಗಲಿ ಮದಕರಿಯಲ್ಲಿ, ಕಳ್ಳಿ ನರಸಪ್ಪಯ್ಯನನ್ನು ಯುದ್ಧಾನಂತರ, ರಾಜದ್ರೋಹಿಯೆಂದು, ಹೈದರಾಲಿಯು ತೋಪಿನ ಬಾಯಿಗೆ ಕಟ್ಟಿ ಉಡಾಯಿಸಿಬಿಡುತ್ತಾನೆ.
ದುರ್ಗಾಸ್ತಮಾನದಲ್ಲಿ ನಾಗತಿಯರು ಮದಕರಿ ಕೊನೆಯ ದಿನದ ಯುದ್ಧಕ್ಕೆ ಹೊರಟ ತಕ್ಷಣ, ಹೊಂಡದಲ್ಲಿ ಆತ್ಮಾಹುತಿ ಮಾಡಿಕೊಳ್ಳುತ್ತಾರೆ ಆದರೆ ಗಂಡುಗಲಿ ಮದಕರಿ ನಾಯಕ ಪುಸ್ತಕದಲ್ಲಿ ಯುದ್ಧ ರಂಗದಲ್ಲಿ ಹೋರಾಡುತ್ತಾ ದೊಡ್ಡ ಮದಕರಿನಾಯಕರ ಪತ್ನಿ ರತ್ನಮ್ಮ ನಾಗತಿ ಹೈದರಾಲಿಯ ಸೈನಿಕರು ತನ್ನ ಮುಡಿ-ಸೆರಗು ಹಿಡಿದೆಳೆದು ಮಾಡಿದ ಅವಮಾನ ತಾಳಲಾಗದೆ, ಹೊಂಡಕ್ಕೆ ಹಾರುತ್ತಾಳೆ, ವೀರಾವೇಷದಿಂದ ಹೋರಾಡುವ ಪದ್ಮವ್ವ ನಾಗತಿಯೂ ದೇಹದಲ್ಲೆಲ್ಲಾ ಕತ್ತಿಗಳನ್ನು ಚುಚ್ಚಿಸಿಕೊಂಡು, ಹೈದರಾಲಿಯ ಸೈನಿಕರು ಬಟ್ಟೆಗಳನ್ನು ಹರಿದೆಳೆದಾಗ ದಿಗ್ಭ್ರಾಂತಳಾಗಿ ಹೊಂಡಕ್ಕೆ ಹಾರುತ್ತಾಳೆ. ಇಲ್ಲಿ ನಾಗತಿಯರ ಕೊನೆ ಏಕೋ ಮನಸ್ಸಿಗೆ ಹಿಡಿಸುವುದಿಲ್ಲ.
ಕೊನೆಯದಾಗಿ ಮದಕರಿ ನಾಯಕನ ಅಂತ್ಯ ಅತ್ಯಂತ ಸೂಕ್ಷ್ಮವಾದ, ನವಿರಾದ ಭಾವನೆಗಳಿಂದ ದುರ್ಗಾಸ್ತಮಾನದಲ್ಲಿ ಹೇಳಲ್ಪಟ್ಟಿದೆ. ಅವನ ಅದಮ್ಯ ದೇಶಪ್ರೇಮ, ಅವನನ್ನು ಕೊನೆಯ ಘಳಿಗೆಯವರೆಗೂ ವೀರಾವೇಶದಿಂದ ಹೋರಾಡಿಸಿ ಹೈದರಾಲಿಯ ಹಸಿರು ಧ್ವಜ ಹಾರಾಡುತ್ತಿದ್ದ ಧ್ವಜಕಂಬವನ್ನೇ ಕತ್ತರಿಸಿ ತುಂಡು ಮಾಡಿ, ದುರ್ಗದ ಮಣ್ಣಿಗೆ ಮುಟ್ಟಿಟ್ಟು, ಕೊನೆಯುಸಿರೆಳೆಯುಂತೆ ಮಾಡುತ್ತದೆ. ವೀರ ಮರಣ ಅಪ್ಪುತ್ತಾನೆ ನಮ್ಮೆಲ್ಲರ ಅಭಿಮಾನಿ ಅರಸ, ನಾಯಕ ಮದಕರಿ.
ಗಂಡುಗಲಿ ವೀರ ಮದಕರಿ ಪುಸ್ತಕದಲ್ಲಿ ಮದಕರಿಯನ್ನು ಅವನ ಸಾಕು ಮಗಳಾದ (ಕಳ್ಳಿ ನರಸಪ್ಪಯ್ಯನವರ ಮಗಳು) ಗಾಯತ್ರಿಯ ಮೂಲಕ ಸಂಚು ಮಾಡಿ ಸೆರೆ ಹಿಡಿಯುತ್ತಾರೆ, ಆದರೆ ಅಲ್ಲೂ ಗಂಡುಗಲಿ ತನ್ನ ಪರಾಕ್ರಮದಿಂದ, ತನ್ನ ತಲೆ ತಾನೇ ಕತ್ತರಿಸಿಕೊಂಡು ದುರ್ಗದ ಮಣ್ಣಿಗೆ ಎಸೆದು, ಕುಸಿದು ಬೀಳುತ್ತಾನೆ. ನಿನ್ನ ಕೈಗೆ ನನ್ನ ತಲೆ ಸಿಗದು ಎಂದು ಹೈದರಾಲಿಗೆ ಹೇಳಿದ್ದ ಮಾತು ಉಳಿಸಿಕೊಳ್ಳುವಂತೆ, ಬಿರುಗಾಳಿ ಎದ್ದು ನಾಯಕನ ತಲೆ ಹೊಂಡಕ್ಕೆ ಉರುಳಿ ಬೀಳುತ್ತದೆ.
ದುರ್ಗಾಸ್ತಮಾನ ಓದಿ ಮೂಕವಾದ ಮನ, ಗಂಡುಗಲಿ ಮದಕರಿ ನಾಯಕ ಪುಸ್ತಕವನ್ನು ಪೂರ್ತಿಯಾಗಿ ಒಪ್ಪಿಕೊಳ್ಳಲು ಇಷ್ಟಪಡುವುದಿಲ್ಲ. ಬೇರಾವ ಪುಸ್ತಕಕ್ಕೂ ಹೋಲಿಸಲಾಗದ ದುರ್ಗಾಸ್ತಮಾನದ ಮುಂದೆ ಇದು ಸಪ್ಪೆ ಎನಿಸಿದರೂ, ಶ್ರೀ ವೇಣು ಅವರ ಬರವಣಿಗೆಯ ಶೈಲಿ ನಮ್ಮನ್ನು ಹಿಡಿದಿಡುತ್ತದೆ. ಅವರ ಇತರ ಪುಸ್ತಕಗಳಂತೇ ಇದೂ ಅವರದೇ ಆದ ಪ್ರಾಮುಖ್ಯತೆ ಪಡೆಯುತ್ತೆ. ಆದರೆ ಎರಡೂ ಓದಿದ ನಮ್ಮ ಮನಸು ಮಾತ್ರ ಗೊಂದಲಮಯವಾಗುತ್ತದೆ…….!!!!!

Save the Indian Rupee

YOU CAN MAKE A HUGE DIFFERENCE TO THE INDIAN ECONOMY BY FOLLOWING FEW SIMPLE STEPS:-
Please spare a couple of minutes here for the sake of India.
I got this article from one of my friends, but it's true. I can see this in day to day life.
Here's a small example:-
Before 12 months 1 US $ = IND Rs 39
After 12  months, now 1 $ = IND Rs 50
Do you think US Economy is booming? No, but Indian Economy is Going Down.
Our economy is in your hands....

INDIAN economy is in a crisis. Our country like many other ASIAN countries, is undergoing a severe economic crunch. Many INDIAN industries are closing down. The INDIAN economy is in a crisis and if we do not take proper steps to control those, we will be in a critical situation.

More than 30,000 crore rupees of foreign exchange are being siphoned out of our country on products such as cosmetics, snacks, tea, beverages, etc... which are grown, produced and consumed here.

A cold drink that costs only 70 / 80 paisa to produce, is sold for Rs.9 and a major chunk of profits from these are sent abroad. This is a serious drain on INDIAN economy.

We have nothing against Multinational companies, but to protect our own interestsm we request everybody to use INDIAN products only atleast for the next two years. With the rise in petrol prices, if we do not do this, the Rupee will devalue further and we will end up paying much more for the same products in the near future.

What you can do about it?
1. Buy only products manufactured by WHOLLY INDIAN COMPANIES.
2. ENROLL as many people as possible for this cause.....

Each individual should become a leader for this awareness. This is the only way to save our country from severe economic crisis. You don't need to give-up your lifestyle. You just need to choose an alternate product.
All categories of products are available from WHOLLY INDIAN COMPANIES.
LIST OF PRODUCTS
COLD DRINKS:-
DRINK LEMON JUICE, FRESH FRUIT JUICES, CHILLED LASSI (SWEET OR SOUR), BUTTER MILK, COCONUT WATER, JAL JEERA, ENERJEE, and MASALA MILK...
INSTEAD OF  COCA COLA, PEPSI, LIMCA, MIRINDA, SPRITE
BATHING SOAP:-
USE CINTHOL & OTHER GODREJ BRANDS, SANTOOR, WIPRO SHIKAKAI, MYSORE SANDAL, MARGO, NEEM, EVITA, MEDIMIX, GANGA , NIRMA BATH & CHANDRIKA
INSTEAD OF  LUX, LIFEBUOY, REXONA, LIRIL, DOVE, PEARS, HAMAM, LESANCY, CAMAY, PALMOLIVE

TOOTH PASTE:-
USE  NEEM, BABOOL, PROMISE, VICO VAJRADANTI, PRUDENT, DABUR PRODUCTS, MISWAK
INSTEAD OF  COLGATE, CLOSE UP, PEPSODENT, CIBACA, FORHANS, MENTADENT.

TOOTH BRUSH: -
USE PRUDENT, AJANTA , PROMISE
INSTEAD OF COLGATE, CLOSE UP, PEPSODENT, FORHANS, ORAL-B
SHAVING CREAM:-
USE GODREJ, EMAMI
INSTEAD OF PALMOLIVE, OLD SPICE, GILLETE

BLADE:-
USE  SUPERMAX, TOPAZ, LAZER, ASHOKA
INSTEAD OF  SEVEN-O -CLOCK, 365, GILLETTE

TALCUM POWDER:-
USE  SANTOOR, GOKUL, CINTHOL, WIPRO BABY POWDER, BOROPLUS
INSTEAD OF  PONDS, OLD SPICE, JOHNSON'S BABY POWDER, SHOWER TO SHOWER

MILK POWDER:-
USE  INDIANA, AMUL, AMULYA,NANDINI
INSTEAD OF  ANIKSPRAY, MILKANA, EVERYDAY MILK, MILKMAID.

SHAMPOO:-
USE  LAKME, NIRMA, VELVETTE
INSTEAD OF  HALO, ALL CLEAR, NYLE, SUNSILK, HEAD AND SHOULDERS, PANTENE
MOBILE CONNECTIONS:-
USE BSNL, AIRTEL
INSTEAD OF HUTCH
Food Items:-
Eat Tandoori chicken, Vada Pav, Idli, Dosa, Puri, Uppuma
INSTEAD OF  KFC, MACDONALD'S, PIZZA HUT, A&W
Every INDIAN product you buy makes a big difference. It saves INDIA. Let us take a firm decision today.

BUY INDIAN TO BE INDIAN - We are not against of foreign products.
WE ARE NOT ANTI-MULTINATIONAL. WE ARE TRYING TO SAVE OUR NATION. EVERY DAY IS A STRUGGLE FOR A REAL FREEDOM. WE ACHIEVED OUR INDEPENDENCE AFTER LOSING MANY LIVES.
THEY DIED PAINFULLY TO ENSURE THAT WE LIVE PEACEFULLY. THE CURRENT TREND IS VERY THREATENING.

MULTINATIONALS CALL IT GLOBALIZATION OF INDIAN ECONOMY. FOR INDIANS LIKE YOU AND ME, IT IS RE-COLONIZATION OF INDIA. THE COLONIST'S LEFT INDIA THEN. BUT THIS TIME, THEY WILL MAKE SURE THEY DON'T MAKE ANY MISTAKES.

WHO WOULD LIKE TO LET A "GOOSE THAT LAYS GOLDEN EGGS" SLIP AWAY?

PLEASE REMEMBER: POLITICAL FREEDOM IS USELESS WITHOUT ECONOMIC INDEPENDENCE

RUSSIA, S.KOREA, MEXICO - THE LIST IS VERY LONG!! LET US LEARN FROM THEIR EXPERIENCE AND FROM OUR HISTORY. LET US DO THE DUTY OF EVERY TRUE INDIAN.

FINALLY, IT'S OBVIOUS THAT YOU CAN'T GIVE UP ALL OF THE ITEMS MENTIONED ABOVE. SO GIVE UP AT LEAST ONE ITEM FOR THE SAKE OF OUR COUNTRY!
We would be sending useless forwards to our friends daily. Instead, please forward this mail to all your friends to create awareness.
"LITTLE DROPS MAKE A GREAT OCEAN."
PLEASE TRY TO BE AN INDIAN.....

ಜೈಲಿನಲ್ಲಿ ಪರಮಾತ್ಮ

ಶ್ರೀ ಯಡಿಯೂರಪ್ಪ ಪ್ರಾರ್ಥನೆ

ಇಂಟರ್ನೆಟ್ ಪರಮಾತ್ಮ

ಮಸಾಲೆ ದೋಸೆ ಕನ್ನಡ ಕಥೆ ..

ಚಿತ್ರನಟಿ ರಮ್ಯ ..... ಚೈತ್ರ ಕಾಲ.

ಶ್ರೀ ಯಡಿಯೂರಪ್ಪ ವಿರಹಲೋಕ

HYUNA 'Bubble Pop!'

ಚಂದ್ರವಳ್ಳಿ

       
ಚಿತ್ರದುರ್ಗದ ವಾಯುವ್ಯ ಬೆಟ್ಟದ ತಪ್ಪಲಿನ ಪ್ರದೇಶವೇ ಚಂದ್ರವಳ್ಳಿ. ಅಂಕಲಿಮಠದಿಂದ ಆಂಜನೇಯಗುಡಿವರೆಗೂ ಉತ್ತರ-ದಕ್ಷಿಣಾದಿಯೋಪಾದಿಯಲ್ಲಿ ಈ ಪ್ರದೇಶ ಹಬ್ಬಿದೆ. ಈ ಪ್ರದೇಶದಲ್ಲಿ ಉತ್ಖನನ, ಭೂಸಂಶೋಧನೆ ನಡೆಸಿದಾಗ ಈ ಪ್ರದೇಶದಲ್ಲಿ ದೊರೆತ ವಸ್ತುಗಳ ನಾಣ್ಯಗಳು, ಕಟ್ಟಡದ ಅವಶೇಷಗಳಿಂದ ಇಲ್ಲಿ ಚಂದ್ರವಳ್ಳಿ (ಚಂದನಾವತಿ) ಎಂಬ ದೊಡ್ಡ ನಗರವಿದ್ದುದಾಗಿಯೂ, ಪ್ರಾಚೀನ ಸಂಸ್ಕೃತಿಯ ತಾಣವಾಗಿದ್ದಿತೆಂದು, ಈ ಸಂಸ್ಕೃತಿ ಹರಪ್ಪ, ಮೆಹೊಂಜೋದಾರ ಸಂಸ್ಕೃತಿಗೆ ಸಮಾನವೆಂದು ಸಂಶೋಧಕರ ಅಭಿಪ್ರಾಯ.
        ಇಲ್ಲಿ ದೊರೆತ ಸಾವಿರಕ್ಕೂ ಮಿಗಿಲಾದ ವಸ್ತುಗಳಿಂದ ಕ್ರಿಸ್ತ ಪೂರ್ವದಲ್ಲಿಯೇ ಚಂದ್ರವಳ್ಳಿ ಪ್ರದೇಶವು ನಾಗರೀಕವಾಗಿದ್ದಿತೆಂದು ತಿಳಿದು ಬಂದಿದೆ. ಇಲ್ಲಿ ಕ್ರಿ.ಪೂ. 139ರಲ್ಲಿ ರ್ಹ್ಯಾ ಉಂಗಿಯ ಹಿತ್ತಾಳೆ ನಾಣ್ಯ, ರೋಮ್ ಚಕ್ರವರ್ತಿಯ ಅಗಸ್ಟಸ್ ನ ಬೆಳ್ಳಿಯ ನಾಣ್ಯ, ವೀರ ಬಲ್ಲಾಳನ ನಾಣ್ಯ ದೊರೆತಿವೆ. ಇಲ್ಲಿ ದೊರೆಕಿರುವ ಶಾತವಾಹನರ ನಾಣ್ಯಗಳ ಮೇಲೆ ಪುಲುಮಾಯಿ, ಮಹಾರಥಿ ಮುಂತಾದವರ ಹೆಸರುಗಳಿವೆ. ಹಲವಾರು ಆಧಾರಗಳಿಂದ ಮೌರ್ಯ ಚಕ್ರವರ್ತಿ ಅಶೋಕನ ಕಾಲದಿಂದ ಕದಂಬರ ಮಯೂರವರ್ಮನ ಕಾಲದವರೆಗೂ ಈ ಪ್ರದೇಶದಲ್ಲಿ ಬೌದ್ಧ ಮತ ಪ್ರಚಾರದಲ್ಲಿತೆಂದು ತಿಳಿಯಬಹುದಾಗಿದೆ.
        ಇಲ್ಲಿಯ ಭೈರವೇಶ್ವರ ದೇವಾಲಯದ ಬಳಿಯ ಮಯೂರವರ್ಮನ ಶಾಸನದಿಂದ ಈ ಪ್ರದೇಶದಲ್ಲಿ ಆಗಲೇ ಇದ್ದ ತಟಾಕ(ಕೆರೆ)ಯನ್ನು ದುರಸ್ಥಿ ಮಾಡಿಸಿದನೆಂದು ತಿಳಿದು ಬರುತ್ತದೆ. ಈಗ ಅದೇ ಪ್ರದೇಶದಲ್ಲಿ ಸರ್ಕಾರವು ಸುಂದರವಾದ ಕೆರೆಯನ್ನು ಕಟ್ಟಿಸಿ ನೆನಪನ್ನು ಚಿರಸ್ಥಾಯಿಯಾಗಿಸಿದ್ದಾರೆ. ಇದೇ ಚಂದ್ರವಳ್ಳಿ ಪ್ರದೇಶದಲ್ಲಿ ಶ್ರೀ ಹುಲಿಗೊಂದಿ ಭೈರವೇಶ್ವರ ದೇವಾಲಯವು, ಚಂದ್ರವಳ್ಳಿ ಕೆರೆ, ಅಂಕಲಿಮಠ, ಪಂಚಲಿಂಗೇಶ್ವರ ಗುಹಾಂತರ ದೇವಾಲಯ, ಧವಳಪ್ಪನ ಗುಡ್ಡ, ಬಾಲಾಂಜನೇಯ ಪ್ರೇಕ್ಷಣೀಯ ಸ್ಥಳಗಳಾಗಿವೆ.
 ಪಂಚಲಿಂಗೇಶ್ವರ ದೇವಾಲಯ:
        ಹುಲಿಗೊಂದಿಯಲ್ಲಿರುವ ಪ್ರಸಿದ್ಧ ಅಂಕಲಿಮಠಕ್ಕೆ ಹೊಂದಿಕೊಂಡಂತೆ ಇರುವ ಬೃಹತ್ ಬಂಡೆಗಳ ಅಡಿಯಲ್ಲಿ ಪಾಂಡವರಿಂದ ಪ್ರತಿಷ್ಟಾಪಿಸಲ್ಪಟ್ಟಿವೆಯೆಂದು ಹೇಳಲಾಗುವ ಐದು ಲಿಂಗಗಳಿರುವ ದೇಗುಲವೇ ಈ ಪಂಚಲಿಂಗೇಶ್ವರ ದೇವಾಲಯ.